ಬೆಂಗಳೂರು:ರಾಜ್ಯದಲ್ಲಿ ಮೇ 4ರವರೆಗೆ ಸೆಮಿಲಾಕ್ ಡೌನ್ ಇರುವುದರಿಂದ ಪಿಯು ಭೌತಿಕ ತರಗತಿಗಳನ್ನು ರದ್ದು ಮಾಡಿ ಆನ್‌ಲೈನ್ ತರಗತಿ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ.
ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯು ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ಸ್ಥಗಿತಗೊಳಿಸಿ ಪ್ರಶ್ನೆ ಪತ್ರಿಕೆಗಳನ್ನು ಅಭ್ಯಾಸ ಮಾಡುವಂತೆ ವಿದ್ಯಾರ್ಥಿಗಳಿಗೆ ಸೂಚಿಸಬೇಕು. ಫ್ರೀ-ರೆಕಾರ್ಡ್ ವಿಡಿಯೋ ತರಗತಿಗಳನ್ನು ಮುಂದುವರಿಸಬೇಕು. ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸೂಚಿಸಬೇಕು ಎಂದು ಉಪನ್ಯಾಸಕರಿಗೆ ಸೂಚಿಸಿದೆ.
ವಿದ್ಯಾರ್ಥಿಗಳು ಯಾವುದೇ ವಿಷಯಗಳಲ್ಲಿ ಸಮಸ್ಯೆ ಬಂದರೆ ತಮ್ಮ ಕಾಲೇಜಿನ ಸಂಬಂಧಪಟ್ಟವರ ವಿಷಯ ಉಪನ್ಯಾಸಕರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮಾಹಿತಿ ಪಡೆಯಬೇಕು. ಏ.28ರಿಂದ ಮೇ 5ರವರೆಗೆ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲು ಸೂಚಿಸಿದೆ. ಮೇ 25 ತಾತ್ವಿಕ ಪರೀಕ್ಷೆ ಇದೆ. ಈ ಪರೀಕ್ಷೆಗಳನ್ನು ಇಲಾಖೆಯೇ ನಡೆಸುವುದರಿಂದ ಎಲ್ಲ ಕಾಲೇಜುಗಳಲ್ಲಿ ಶೇ.50 ಉಪನ್ಯಾಸಕರು ಕಡ್ಡಾಯವಾಗಿ ಹಾಜರಾಗಬೇಕು. ಪ್ರಾಂಶುಪಾಲರು ಈ ಬಗ್ಗೆ ಸರಿಯಾದ ವೇಳಾಪಟ್ಟಿ ತಯಾರಿಸಿ ಉಪನ್ಯಾಸಕರನ್ನು ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು.
ಈ ಸುತ್ತೋಲೆಯು ತಾತ್ಕಾಲಿಕವಾಗಿದ್ದು, ಕರೊನಾ ಹಿನ್ನೆಲೆಯಲ್ಲಿ ಕಾಲ ಕಾಲಕ್ಕೆ ರಾಜ್ಯ ಸರ್ಕಾರ, ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಜಿಲ್ಲಾಡಳಿತಗಳು ನೀಡುವ ಸೂಚನೆ ಹಾಗೂ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಇಲಾಖೆಯ ನಿರ್ದೇಶಕರು ಸುತ್ತೋಲೆಯಲ್ಲಿ ರಾಜ್ಯ ಎಲ್ಲ ಜಿಲ್ಲಾ ಉಪನಿರ್ದೇಶಕರಿಗೆ ತಿಳಿಸಿದ್ದಾರೆ.
ಆದಿಚುಂಚನಗಿರಿ ಮಠಕ್ಕೆ 176 ಮೂಟೆ ದವಸ ಧಾನ್ಯ ಕಳುಹಿಸಿಕೊಟ್ಟ ಭಕ್ತಾದಿಗಳು

ಚಂದ್ರಶೇಖರ್​ ಆಜಾದ್​ ಜೀವನಾಧಾರಿತ ಫೋಟೋಶೂಟ್​! ವೈರಲ್​ ಆಯ್ತು ಸ್ವಾತಂತ್ರ್ಯ ಹೋರಾಟಗಾರನ ಲುಕ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 2 =
Remember me
