ಬೆಂಗಳೂರು:ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಜನ್ಮದಿನವನ್ನು (ಮಾರ್ಚ್ 17) ಸ್ಫೂರ್ತಿ ದಿನ ಎಂಬುದಾಗಿ ಸರ್ಕಾರದ ವತಿಯಿಂದಲೇ ಆಚರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ಬೆಂಗಳೂರಿನ ಚೌಡಯ್ಯ ಸ್ಮಾರಕ ಸಭಾಭವನದಲ್ಲಿ ಇಂದು ನಡೆದ ಬ್ರಹ್ಮರ್ಷಿ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಕನ್ನಡ, ಸಂಸ್ಕ್ರತಿ ಹಾಗೂ ಇಂಧನ ಸಚಿವ ವಿ. ಸುನೀಲ್ ಕುಮಾರ್, ಪುನೀತ್ ರಾಜಕುಮಾರ್​ ಅವರ ಜನ್ಮದಿನವನ್ನು ಸ್ಫೂರ್ತಿ ದಿನವಾಗಿ ಆಚರಣೆ ಮಾಡಬೇಕೆಂದು ಮಾಡಿಕೊಂಡ ಮನವಿಗೆ ಸ್ಪಂದಿಸಿದ ಅವರು ಈ ಭರವಸೆ ನೀಡಿದ್ದಾರೆ.
ಪುನೀತ್​ ಅಕಾಲಿಕವಾಗಿ ನಮ್ಮನ್ನು ಅಗಲಿದ್ದಾರೆ. ಅವರು ವೈಯಕ್ತಿಕವಾಗಿ ನನಗೆ ಅತ್ಯಂತ ಪ್ರೀತಿಪಾತ್ರ ವ್ಯಕ್ತಿಯಾಗಿದ್ದರು. ನಾಡಿನ ಕೋಟ್ಯಂತರ ಯುವಕರಿಗೆ ಅವರು ಸ್ಫೂರ್ತಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಅವರ ಜನ್ಮದಿನವನ್ನು ಸ್ಫೂರ್ತಿ ದಿನ ಎಂದು ಸರ್ಕಾರದ ವತಿಯಿಂದಲೇ ಆಚರಣೆ ಮಾಡಲಾಗುವುದು ಎಂದು ಹೇಳಿದರು.
ಪ್ರತ್ಯೇಕ ನಿಧಿ:ಈಡಿಗ- ಬಿಲ್ಲವ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಇನ್ನಿತರ ಅಭಿವೃದ್ಧಿಗೆ ಪ್ರತ್ಯೇಕ ನಿಧಿಯನ್ನು ಪ್ರಾರಂಭಿಸಲಾಗುವುದು.‌ ಈ ವರ್ಷದ ಬಜೆಟ್​ನಲ್ಲೇ ಇದಕ್ಕೆ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು.
ಬ್ರಹ್ಮರ್ಷಿ ನಾರಾಯಣಗುರು ಶ್ರೇಷ್ಠ ಆಧ್ಯಾತ್ಮಿಕ ಸಂತರು. ಅವರನ್ನು ಒಂದು ಜಾತಿ ಹಾಗೂ ಧರ್ಮಕ್ಕೆ ಸೀಮಿತ ಮಾಡುವುದಕ್ಕೆ ಸಾಧ್ಯವಿಲ್ಲ. ಇಡೀ ಜಗತ್ತಿಗೆ ಅವರ ತತ್ತ್ವ ಮಾರ್ಗದರ್ಶಿಯಾಗಿದೆ. ಬೆಂಗಳೂರಿನಲ್ಲಿ ನಾರಾಯಣಗುರು ಹೆಸರಿನಲ್ಲಿ ಸಮುದಾಯಭವನ ಸ್ಥಾಪನೆ ಮಾಡುವುದಕ್ಕಾಗಿ ಸರ್ಕಾರದಿಂದ 5 ಕೋಟಿ ರೂ. ಮಂಜೂರು ಮಾಡಲಾಗುವುದು ಎಂದು ಭರವಸೆ ನೀಡಿದರು.
ನೆಲಮಂಗಲ ಸಮೀಪ ಇರುವ ಸೋಲೂರು ಆರ್ಯ-ಈಡಿಗ ಮಠ ಪ್ರಾರಂಭಿಸಿರುವ ಶೈಕ್ಷಣಿಕ ಚಟುವಟಿಕೆ ಹಾಗೂ ಶೈಕ್ಷಣಿಕ ಸಂಸ್ಥೆಗಳ ನಿರ್ಮಾಣಕ್ಕೆ ಸರ್ಕಾರದಿಂದ ಜಾಗ ನೀಡಲಾಗುವುದು ಎಂಬ ಭರವಸೆಯನ್ನೂ ಅವರು ನೀಡಿದರು.


–Araga Jnanendra (@aragajnanendra)16 Sep 2022



ಕೆಜಿಎಫ್​-2 ಚಿತ್ರದ ಪ್ರೇರಣೆ; 72 ಗಂಟೆಗಳಲ್ಲಿ 3 ಸೆಕ್ಯುರಿಟಿ ಗಾರ್ಡ್​ಗಳ ಕೊಲೆ: ನಿದ್ರೆಗೆಟ್ಟ ಕೈದಿಗಳು..
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:four + 16 =
Remember me
