ಬೆಂಗಳೂರು:ರಾಜ್ಯದ ಗೋಶಾಲೆಗಳಲ್ಲಿನ ಗೋವುಗಳನ್ನು 11,000 ರೂ.ಗಳ ವಾರ್ಷಿಕ ಮೊತ್ತಕ್ಕೆ ದತ್ತು ತೆಗೆದುಕೊಳ್ಳುವ ಪುಣ್ಯಕೋಟಿ ದತ್ತು ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಲಾಖೆಯ ವತಿಯಿಂದ ಕಿರುಚಿತ್ರ ಪ್ರದರ್ಶನ, ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಿಸಿ ಮಾತನಾಡಿದರು.ಈ ಹಿಂದೆ ನಾನು‌ ನನ್ನ ಹುಟ್ಟುಹಬ್ಬವನ್ನು ಅನಾಥಾಶ್ರಮಕ್ಕೆ ತೆರಳಿ ಮಕ್ಕಳಿಗೆ ದಾನಧರ್ಮ ಮಾಡುವ ಮೂಲಕ ಆಚರಿಸಿಕೊಳ್ಳುತ್ತಿದ್ದೆ. ಈ ಬಾರಿ ನಾನು 11 ಗೋವುಗಳನ್ನು ದತ್ತು ತೆಗೆದುಕೊಂಡು ಆಚರಿಸಿಕೊಂಡಿರುವುದನ್ನು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಸ್ಮರಿಸಿದರು.
ರಾಜ್ಯದಲ್ಲಿ ಗೋವುಗಳನ್ನು ಗೋಮಾತೆ ಎಂದು ಪೂಜಿಸುವ ಲಕ್ಷಗಟ್ಟಲೆ ಜನರಿದ್ದಾರೆ. ಗೋವುಗಳ ಸೇವೆ ಪುಣ್ಯದ ಕೆಲಸವೆನ್ನುವ ಭಾವನೆ ನಮ್ಮಲ್ಲಿದೆ. ಈ ಯೋಜನೆಯಿಂದ ಗೋಶಾಲೆ ಹಾಗೂ ಗೋವುಗಳ ನಿರ್ವಹಣೆ ಸಾಧ್ಯವಾಗಲಿದೆ. ವಯಸ್ಸಾದ ಗೋವುಗಳ ನಿರ್ವಹಣೆಗೆ ಪರಿಹಾರ ಒದಗಿಸುವ ಸಕಾರಾತ್ಮಕ ಚಿಂತನೆಯಿಂದ ಈ ಯೋಜನೆಯನ್ನು ಸರ್ಕಾರ ರೂಪಿಸಿದೆ ಎಂದು ಸಿಎಂ ಹೇಳಿದರು.
ಜೀವನಕ್ಕೆ ಆಧಾರವಾಗಿರುವ ಗೋವು ಸಾಕಾಣಿಕೆ:ಕಾಮಧೇನು ಎಂದೇ ಕರೆಯಲ್ಪಡುವ ಗೋವುಗಳಿಲ್ಲದೆ ಮನುಷ್ಯನ ಬದುಕಿಲ್ಲ. ಗೋವು ಸಾಕಾಣಿಕೆಯಿಂದ ಹಾಲು, ಇತ್ಯಾದಿ ಉತ್ಪನ್ನಗಳಿಂದ ಜೀವನದ ಆಧಾರವಾಗಿಸಿಕೊಂಡಿದ್ದಾರೆ. ನಮ್ಮ ಸರ್ಕಾರ ಗೋಹತ್ಯೆ ಕಾನೂನನ್ನು ಜಾರಿಗೆ ತರುವಾಗ, ವಯಸ್ಸಾದ ಗೋವುಗಳ ಸಾಕಾಣಿಕೆಯಿಂದ ರೈತರಿಗೆ ಹೊರೆಯಾಗುತ್ತದೆ ಎನ್ನುತ್ತಿದ್ದರು. ರೈತ ಗೋವುಗಳನ್ನು ಹೊರೆ ಎಂದು ತಿಳಿದೇ ಇಲ್ಲ. ಗೋ ಸಂಪತ್ತನ್ನು ಉಳಿಸಿಕೊಂಡರೆ ಆಹಾರ, ಆದಾಯ, ಪೌಷ್ಟಿಕತೆಯನ್ನು ನೀಡುತ್ತದೆ. ಇಂತಹ ಗೋವುಗಳು ವಯಸ್ಸಾದ ನಂತರ ವಧೆ ಮಾಡುವ ಕೃತ್ಯಕ್ಕೆ ಕೆಲವರು ಪ್ರೋತ್ಸಾಹ ನೀಡುತ್ತಾರೆ. ನಮ್ಮ ದೇಶದ ಸಂಸ್ಕøತಿ, ಜೀವ ಉಳಿಸುವುದೇ ಹೊರತು ವಧೆ ಮಾಡುವುದಲ್ಲ ಎಂದರು.
ಮನೆಬಾಗಿಲಿಗೆ ತೆರಳಿ ದನಕರುಗಳಿಗೆ ಚಿಕಿತ್ಸೆ:ಗೋ ಸಂಪತ್ತಿನ ರಕ್ಷಣೆಗಾಗಿ 100 ಗೋಶಾಲೆಗಳನ್ನು ಪ್ರಾರಂಭ, ಗೋ ಉತ್ಪನ್ನಗಳ ಮಾರಾಟಕ್ಕಾಗಿ ಗೋ ಮಾತಾ ಸಹಕಾರ ಸಂಘವನ್ನು ಸ್ಥಾಪಿಸಲಾಗುವುದು. ಔಷಧಿ ವ್ಯವಸ್ಥೆ, 400 ಪಶುವೈದ್ಯರ ನೇಮಕಾತಿ, ಡಿಪ್ಲೊಮಾ ಮಾಡಿದ ವಿದ್ಯಾರ್ಥಿಗಳಿಗಾಗಿ 250 ಹುದ್ದೆ ಭರ್ತಿಗೊಳಿಸಿ ಗೋಸೇವೆ, ಪಶುಸೇವೆಗೆ ಅವಕಾಶ ಕಲ್ಪಿಸಲಾಗುವುದು. ರೋಗಗ್ರಸ್ತ ದನಕರುಗಳ ಚಿಕಿತ್ಸೆಗೆ ಅನುಕೂಲವಾಗುವಂತಹ ಸಂಚಾರಿ ಪಶು ಚಿಕಿತ್ಸಾಲಯಗಳನ್ನು ಪ್ರಾರಂಭಿಸಲಾಗಿದ್ದು, ದನಕರುಗಳಿಗೆ ಮನೆಬಾಗಿಲಿಗೆ ತೆರಳಿ ಚಿಕಿತ್ಸೆ ಕೊಡಿಸುವಂತಹ ಮಾನವೀಯ ಕಾರ್ಯಕ್ರಮವನ್ನು ಕರ್ನಾಟಕದಲ್ಲಿ ಪ್ರಾರಂಭಿಸಿರುವುದು ಅಭಿನಂದನೀಯ ಎಂದರು.
ಕಾಂಗ್ರೆಸ್​ಗೆ ಪ್ರಮೋದ್​ ಮಧ್ವರಾಜ್​ ರಾಜೀನಾಮೆ: ಉಸಿರುಗಟ್ಟುವಿಕೆ ವಾತಾವರಣದಿಂದ ಕೆಟ್ಟ ಅನುಭವ ಎಂದು ಪತ್ರದಲ್ಲಿ ಉಲ್ಲೇಖ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − one =
Remember me
