ವಿಜಯಪುರ: ಮನೆಯಲ್ಲಿ ಕ್ವಾರಂಟೈನ್​​ನಲ್ಲಿ ಇದ್ದ ಇಬ್ಬರು ವ್ಯಕ್ತಿಗಳು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಪೊಲೀಸರು ತಡೆದು ಮರಳಿ ಕ್ವಾರಂಟೈನ್​ಗೆ ಒಳಪಡಿಸಿರುವ ಘಟನೆ ನಡೆದಿದೆ.
ಕೋಲ್ಹಾರ ಪಟ್ಟಣದಲ್ಲಿ ಕ್ವಾರಂಟೈನ್​ನಲ್ಲಿ ಇದ್ದ ಇಬ್ಬರು ರಾತ್ರಿ ಕಾರಿನಲ್ಲಿ ತಮ್ಮ ಊರು ಶಿರಗುಪ್ಪಿಗೆ ತೆರಳುತ್ತಿದ್ದರು. ಚೆಕ್​ಪೋಸ್ಟ್​ ಬಳಿ ಪೊಲೀಸರು ಕಾರು ತಪಾಸಣೆ ನಡೆಸಿದರು. ಆ ವೇಳೆ ಅವರ ಕೈಯಲ್ಲಿ ಕ್ವಾರಂಟೈನ್​ನಲ್ಲಿ ಇರುವಂತೆ ಗುರುತು ಹಾಕಲಾಗಿತ್ತು, ಇದನ್ನು ಗಮನಿಸಿದ ಪೊಲೀಸರು ಇಬ್ಬರನ್ನು ಕೂಡಲೇ ಮನೆಗೆ ಕರೆದುಕೊಂಡು ಹೋಗಿ ಬಿಟ್ಟು ಬಂದರು.
ಇಬ್ಬರು ಮಹಾರಾಷ್ಟ್ರದ ಖರಾಡದಲ್ಲಿ ಕೆಲಸ ಮಾಡುತ್ತಿದ್ದರು. ಮಾ.23ರಂದು ಕೋಲ್ಹಾರಕ್ಕೆ ಬಂದಿದ್ದರು. ಈ ವೇಳೆ ಇವರನ್ನು ತಪಾಸಣೆ ನಡೆಸಿ ಕ್ವಾರಂಟೈನ್​ನಲ್ಲಿ ಇರುವಂತೆ ಸೂಚಿಸಲಾಗಿತ್ತು. ಕ್ವಾರಂಟೈನ್​ ಉಲ್ಲಂಘಿಸಿ ಇವರು ಓಡಾಡುತ್ತಿರುವುದಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಬ್ಬರ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಬೇಕು. ಅಲ್ಲಿವರೆಗೆ ತೀವ್ರ ನಿಗಾ ಇರಿಸಬೇಕು ಎಂದು ಸಾರ್ವಜನಿಕರು ಪೊಲೀಸರನ್ನು ಒತ್ತಾಯಿಸಿದ್ದಾರೆ. (ದಿಗ್ವಿಜಯ ನ್ಯೂಸ್​)
ಅಮೆರಿಕಕ್ಕೆ ಪಶ್ಚಾತ್ತಾಪ: ವಿದೇಶಗಳಲ್ಲಿ ಕರೊನಾ ಕನ್ನಡಿಗರ ವರದಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:11 + 10 =
Remember me
