ಬೆಂಗಳೂರು:ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ 9 ಕಡೆ ಬಿಡಿಎ ಮಧ್ಯವರ್ತಿಗಳ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಬಿಡಿಎ) ಅಧಿಕಾರಿಗಳಿಗೆ ಲಂಚದ ಆಮಿಷವೊಡ್ಡಿ ಮತ್ತು ಪ್ರಭಾವ ಬೀರಿ ಸರ್ಕಾರಿ ಕೆಲಸದಲ್ಲಿ ಹಸ್ತಕ್ಷೇಪ ಮಾಡುತ್ತಿರುವ ಆರೋಪದ ಮೇಲೆ 9 ಮಧ್ಯವರ್ತಿಗಳ ಮೇಲೆ ಮಂಗಳವಾರ ಬೆಳಗ್ಗೆ ಎಸಿಬಿ ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಏಕಕಾಲಕ್ಕೆ ದಾಳಿ ಮಾಡಲಾಗಿದೆ.
ದಾಳಿಯ ವೇಳೆ ದಲ್ಲಾಳಿಗಳ ಕರಾಳ ಮುಖವಾಡಗಳು ಒಂದೊಂದಾಗಿ ಕಳಚಿ ಬೀಳುತ್ತಿದೆ. ಆರ್​ಆರರ ನಗರದ ಬಿಡಿಎ ಬ್ರೋಕರ್ ತೇಜಸ್ಚಿ ನಿವಾಸದಲ್ಲಿ ಭಾರಿ ಪ್ರಮಾಣ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳು ಪತ್ತೆಯಾಗಿದೆ.
ದ್ವಿತೀಯ ಪಿಯುಸಿ ಮುಗಿಸಿ ಬಿಡಿಎ ಬ್ರೋಕರ್ ತೇಜಸ್ಚಿ ಶುರು ಮಾಡಿದ್ದು ಜೆರಾಕ್ಸ್ ಅಂಗಡಿ. ಆದರೆ, ಈಗ ತೇಜಸ್ವಿ ಕೋಟಿ ಕೋಟಿ ಬೆಲೆಯ ಬಂಗಲೆ ಮಾಲೀಕ. ಆರ್ ಆರ್ ನಗರದ ತೇಜಸ್ವಿ ಬಂಗಲೆ ತಮಿಳುನಾಡಿನ ಮಾಜಿ ಮಂತ್ರಿಯದು. ತಮಿಳುನಾಡಿನ ಡಿಎಂಕೆಯ ಮಾಜಿ ಮಂತ್ರಿ ದಿವಂಗತ ವೀರಪಾಂಡಿಯನ್ ಆರುಮುಗಂ ಮಗಳಿಂದ 14 ಕೋಟಿ ರೂ.ಗೆ ಖರೀದಿಸಿದ್ದ ಬಂಗಲೆಯಾಗಿದೆ.
ಇಷ್ಟೆಲ್ಲಾ ಆಸ್ತಿಯೂ ಬಿಡಿಎ ಬ್ರೋಕರ್ ಆದ ಮೇಲೆಯೆ ಸಂಪಾದನೆ ಮಾಡಲಾಗಿದೆ. ಇಂದು ಎಸಿಬಿ ನಡೆಸಿದ ದಾಳಿಯಲ್ಲಿ ಈ ಸಂಗತಿ ಬಟಾಬಯಲಾಗಿದೆ.(ದಿಗ್ವಿಜಯ ನ್ಯೂಸ್​)
ಬೆಳ್ಳಂಬೆಳಗ್ಗೆ ಬೆಂಗಳೂರಲ್ಲಿ ಬಿಡಿಎ ಮಧ್ಯವರ್ತಿಗಳ ಮನೆ ಮೇಲೆ ಎಸಿಬಿ ದಾಳಿ

ಇದೆಂಥಾ ಹುಚ್ಚುತನ! ರಾಮ್​ಚರಣ್​-ಜೂ. ಎನ್​ಟಿಆರ್​ಗೆ ಮುಜುಗರ ಉಂಟು ಮಾಡಿದ ಅಭಿಮಾನಿಗಳ ಅತಿರೇಕ

ಮಾತು ಬಾರದ, ಕಿವಿ ಕೇಳದ ಯುವಕನ ಬಾಳು ಬೆಳಗಿದ ಪದವೀಧರೆ! ಮನ ತಟ್ಟುವಂತಿದೆ ವಧುವಿನ ತಂದೆಯ ಆ ಮಾತು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + one =
Remember me
