ತುಮಕೂರು:ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ಉದ್ಯಮಿ ಹಾಗೂ ಮಹೀಂದ್ರಾ ಗ್ರೂಪ್​ ಆಫ್​ ಚೇರ್ಮನ್​ ಆನಂದ್​ ಮಹೀಂದ್ರಾ ಅವರು ತಮ್ಮ ಕಣ್ಣಿಗೆ ಬಿದ್ದಂತಹ ವಿಶೇಷತೆಗಳನ್ನು ಪರಿಚಯಿಸುವ ಜತೆಗೆ ಅನೇಕ ವಿಚಾರಗಳ ಬಗ್ಗೆ ಜಾಲತಾಣ ಮೂಲಕವೇ ಧ್ವನಿ ಎತ್ತುತ್ತಿರುತ್ತಾರೆ. ಇದೀಗ ತುಮಕೂರಿನ ತಮ್ಮ ಎಸ್​ಯುವಿ ಶೋರೂಮ್​ನಲ್ಲಿ ಕಾರು ಖರೀದಿಸಲು ಬಂದ ರೈತನಿಗೆ ಸಿಬ್ಬಂದಿ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಟರ್​ನಲ್ಲಿ ಸಂದೇಶವೊಂದನ್ನು ರವಾನಿಸಿದ್ದಾರೆ.
ಆನಂದ್​ ಮಹೀಂದ್ರಾಗೂ ಮುಂಚೆ ಮಹೀಂದ್ರಾ ಕಂಪನಿ ಸಿಇಒ ವಿಜಯ್​ ನಕ್ರಾ ಅವರು ಟ್ವೀಟ್​ ಮಾಡಿದ್ದು, ಡೀಲರ್‌ಗಳು ಗ್ರಾಹಕ ಕೇಂದ್ರಿತ ಅನುಭವವನ್ನು ನೀಡುವ ಅವಿಭಾಜ್ಯ ಅಂಗವಾಗಿದ್ದಾರೆ ಮತ್ತು ನಮ್ಮ ಎಲ್ಲಾ ಗ್ರಾಹಕರ ಗೌರವ ಮತ್ತು ಘನತೆಯನ್ನು ನಾವು ಖಚಿತಪಡಿಸುತ್ತೇವೆ. ತುಮಕೂರಿನಲ್ಲಿ ನಡೆದ ಘಟನೆಯ ಕುರಿತು ತನಿಖೆ ನಡೆಸುತ್ತಿದ್ದೇವೆ ಮತ್ತು ಸಿಬ್ಬಂದಿಗೆ ಸಮಾಲೋಚನೆ ಮತ್ತು ತರಬೇತಿ ನೀಡುವುದಲ್ಲದೇ ಅವರು ಯಾವುದೇ ನಿಯಮ ಉಲ್ಲಂಘನೆ ಮಾಡಿದ ಸಂದರ್ಭದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.
ವಿಜಯ್​ ನಕ್ರಾ ಅವರ ಟ್ವೀಟ್​ ಅನ್ನು ಕೋಟ್​ ಮಾಡಿ ಆನಂದ್​ ಮಹೀಂದ್ರ ಅವರು ಕೂಡ ಸಂದೇಶವೊಂದನ್ನು ರವಾನಿಸಿದ್ದಾರೆ. ನಮ್ಮ ಸಮುದಾಯಗಳು ಮತ್ತು ಎಲ್ಲಾ ಪಾಲುದಾರರನ್ನು ಬೆಳೆಸುವುದೇ ನಮ್ಮ ಕಂಪನಿಯ ಪ್ರಮುಖ ಉದ್ದೇಶವಾಗಿದೆ. ಅದರಲ್ಲೂ, ವ್ಯಕ್ತಿಯ ಘನತೆಯನ್ನು ಎತ್ತಿಹಿಡಿಯುವುದು ಪ್ರಮುಖ ಮೌಲ್ಯವಾಗಿದೆ. ಈ ವಿಚಾರದಲ್ಲಿ ಏನೇ ತಪ್ಪಾಗಿದ್ದರು ಅದನ್ನು ಬಹಳ ತುರ್ತಾಗಿ ಪರಿಹರಿಸಲಾಗುವುದು ಎಂದು ಹೇಳಿದ್ದಾರೆ.
The Core Purpose of@MahindraRiseis to enable our communities & all stakeholders to Rise.And a key Core Value is to uphold the Dignity of the Individual. Any aberration from this philosophy will be addressed with great urgency.https://t.co/m3jeCNlV3w
— anand mahindra (@anandmahindra)January 25, 2022

ಆಗಿದ್ದೇನು?ದಿಗ್ಗಜರು ಸಿನಿಮಾದಲ್ಲಿ ಅಂಬರೀಷ್​ ಮತ್ತು ವಿಷ್ಣುವರ್ಧನ್​ ಕಾರು ಖರೀದಿಸಲೆಂದು ಶೋ ರೂಂಗೆ ಹೋದಾಗ ಇವರ ಉಡುಗೆತೊಡುಗೆ ನೋಡಿ ಅಲ್ಲಿನ ಸಿಬ್ಬಂದಿ ಕೀಳಾಗಿ ಕಾಣುವ ದೃಶ್ಯದ ರೀತಿಯಲ್ಲೇ ನಿಜವಾದ ಘಟನೆ ತುಮಕೂರಿನ ಮಹೀಂದ್ರಾ ಕಾರು ಶೋ ರೂಂನಲ್ಲಿ ಶುಕ್ರವಾರ (ಜ.21) ಸಂಭವಿಸಿದೆ.
ಕಾರು ಖರೀದಿಸಲೆಂದು ಹೆಬ್ಬೂರು ಹೋಬಳಿಯ ರಾಮನಪಾಳ್ಯದ ಯುವಕ ಕೆಂಪೇಗೌಡ, ತುಮಕೂರಿನ ಶೋ ರೂಂಗೆ ಬಂದಿದ್ದ ವೇಳೆ ಅವನ ವೇಷಭೂಷಣವನ್ನು ನೋಡಿ ಅಲ್ಲಿನ ಸಿಬ್ಬಂದಿ ಅವಮಾನ ಮಾಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಕೆಂಪೇಗೌಡ ಒಂದೇ ಗಂಟೆಯಲ್ಲಿ 10 ಲಕ್ಷ ಹಣ ತರಿಸಿಬಿಟ್ಟರು. ಇದನ್ನು ಕಂಡ ಶೋ ರೂಂ ಸಿಬ್ಬಂದಿ ಶಾಕ್​ ಆದರು. ಮೂರ್ನಾಲ್ಕು ದಿನಗಳ ಬಳಿಕ ಕಾರು ಡೆಲಿವರಿ ಕೊಡ್ಹೋದಾಗಿ ಸಿಬ್ಬಂದಿ ಹೇಳುತ್ತಿದ್ದಂತೆ, ಗರಂ ಆದ ಯುವಕ, ಅವಮಾನಿಸುವ ಮುನ್ನ ಇದರ ಬಗ್ಗೆ ಅರಿವು ಇರಬೇಕಿತ್ತು. ನನಗೀಗ ಕಾರು ಬೇಕೇಬೇಕು ಅಂತಾ ಪಟ್ಟು ಹಿಡಿದಿದ್ದ. ಈ ವೇಳೆ ಸಿಬ್ಬಂದಿ ಹಾಗೂ ಯುವಕನ ನಡುವೆ ಮಾತಿನ ಚಕಮಕಿ ನಡೆದಿದ್ದು, ಸ್ಥಳಕ್ಕೆ ಬಂದ ತಿಲಕ್ ಪಾರ್ಕ್ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು. ಸಿಬ್ಬಂದಿ ಹಾಗೂ ಯುವಕನ ಬಳಿ ಮುಚ್ಚಳಿಕೆ ಪತ್ರ ಬರೆಸಿಕೊಂಡು ಪ್ರಕರಣ ಇತ್ಯರ್ಥ ಪಡಿಸಿದರು. ಬಳಿಕ ಈ ಘಟನೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿ, ಇದೀಗ ಮಹೀಂದ್ರಾ ಕಂಪನಿಯ ಸಂಸ್ಥಾಪಕ ಆನಂದ್​ ಮಹೀಂದ್ರಾ ಗಮನಕ್ಕೂ ಬಂದಿದ್ದು, ಈ ಬಗ್ಗೆ ಟ್ವೀಟ್​ ಮಾಡಿ ಸಂದೇಶವೊಂದನ್ನು ರವಾನಿಸಿದ್ದಾರೆ.(ಏಜೆನ್ಸೀಸ್​)
10 ರೂ. ಕೊಡೋ ಯೋಗ್ಯತೆ ಇಲ್ಲ, ಕಾರ್ ತಗೋತೀಯಾ? ಎಂದ ಶೋ ರೂಂ ಸಿಬ್ಬಂದಿಗೆ 1 ತಾಸಲ್ಲೇ ಶಾಕ್​ ಕೊಟ್ಟ ಯುವರೈತ!

ಉನ್ನತ ಸಾಧಕರಿಗೆ ದೇಶದ ಸಲಾಂ: ಜ.ರಾವತ್, ಕಲ್ಯಾಣ ಸಿಂಗ್ ಪದ್ಮವಿಭೂಷಣ, ಗುಲಾಂ ನಬಿ ಆಜಾದ್ ಪದ್ಮಭೂಷಣ

ಪ್ರತಿ 3 ಸೆಕೆಂಡ್​ಗೆ 100 ಕೇಸ್, 12 ಸೆಕೆಂಡ್​ಗೆ ಒಬ್ಬ ಸಾವು: ಕರೊನಾ ಅಂತ್ಯವಾಗಿಲ್ಲ, ಎಚ್ಚರಿಕೆ ಅಗತ್ಯ ಎಂದ ವಿಶ್ವ ಆರೋಗ್ಯ ಸಂಸ್ಥೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 2 =
Remember me
