ಬೆಂಗಳೂರು:ಮತಾಂತರ ನಿಷೇಧ ಕಾಯಿದೆ ಯಾವುದೇ ಧರ್ಮದ ವಿರುದ್ಧ ರೂಪಿತವಾಗಿಲ್ಲ. ಆದರೆ ಯಾವುದೇ ರೀತಿಯ ಆಮಿಷ ಅಥವಾ ಬಲವಂತದ ಮತಾಂತರಕ್ಕೆ ಅವಕಾಶವಿಲ್ಲ, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟ ಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೆಳಗಾವಿ ಅಧಿವೇಶನದಲ್ಲಿ ಮಂಡಿಸಲಾದ ಮತಾಂತರ ನಿಷೇಧ (ತಿದ್ದುಪಡಿ) ವಿಧೇಯಕಕ್ಕೆ ವಿಧಾನ ಸಭೆಯಿಂದ ಅಂಗೀಕಾರ ಪಡೆಯಲಾಗಿದೆ.
ಮೇಲ್ಮನೆಯಲ್ಲಿ ಮಂಡಿತವಾಗಿರುವ ಮಸೂದೆಗೆ ಮುಂದಿನ ಅಧಿವೇಶನದಲ್ಲಿ ಒಪ್ಪಿಗೆ ಪಡೆಯಲಾಗುವುದು ಎಂದ ಸಚಿವರು, ಪ್ರಸಕ್ತ ಸರ್ಕಾರವು ಹೊರಡಿಸಿದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಸಮ್ಮತಿ ನಿರೀಕ್ಷಿಸಿದ್ದೇವೆ ಎಂದರು.
ಸುಗ್ರೀವಾಜ್ಞೆಯನ್ನು ಬಲವಾಗಿ ಸಮರ್ಥಿಸಿದ ಸಚಿವರು, ಸಮಾಜದಲ್ಲಿ ಶಾಂತಿ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ಕ್ರೈಸ್ತ ಧಾರ್ಮಿಕ ಮುಖಂಡರು, ರಾಜ್ಯಪಾಲರನ್ನು ಭೇಟಿಯಾಗಿ ಮತಾಂತರ ಮಸೂದೆ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಸಂವಿದಾನ ದತ್ತವಾಗಿ ಇರುವ ಧಾರ್ಮಿಕ ಹಕ್ಕುಗಳನ್ನು ಮೊಟಕುಗೊಳಿಸುವ ಯಾವುದೇ ಪ್ರಸ್ತಾಪವವೂ ತಿದ್ದುಪಡಿ ಮಸೂದೆಯಲ್ಲಿ ಇಲ್ಲ ಎಂದರು.
ತಿದ್ದುಪಡಿ ಮಸೂದೆ ಬಗ್ಗೆ, ಸದನದಲ್ಲಿ ವಿವರವಾಗಿ ಚರ್ಚಿಸಲಾಗಿದೆ, ಶಾಸಕರೊಬ್ಬರು ಮತಾಂತರ ಹಾವಳಿ ಸೃಷ್ಟಿಸಿದ ಕುಟುಂಬಗಳ ನಡುವಿನ ಘರ್ಷಣೆಗಳ ಕುರಿತೂ ಪ್ರಸ್ತಾಪಿಸಿದ್ದನ್ನೂ ನೆನಪಿಸಿದ ಸಚಿವರು, ಸುಗ್ರೀವಾಜ್ಞೆಗೆ ಸಮ್ಮತಿ ಸಿಕ್ಕಿದ ನಂತರ, ಕಾನೂನನ್ನು ಪರಿಣಾಮಕಾರಿ ಯಾಗಿ ಜಾರಿಗೆ ತರಲಾಗುವುದು ಎಂದರು.
ಈ ಹಿಂದೆ ಕಾಂಗ್ರೆಸ್ ಸರಕಾರ ಮತಾಂತರ ನಿಷೇಧ ಕಾಯಿದೆ ತಂದಿದ್ದನ್ನು ನೆನಪಿಸಿದ ಸಚಿವರು “ನಮ್ಮ ಸರ್ಕಾರ ಆ ವಿಧೇಯಕ ವನ್ನು ಮತ್ತಷ್ಟು ಬಲಗೊಳಿಸಿದ್ದಲ್ಲದೆ ಕಟ್ಟು ನಿಟ್ಟಾಗಿ ಜಾರಿಗೆ ತರಲು ಬದ್ಧವಾಗಿದೆ ಎಂದರು.
ವರ ಬೇಕಿದ್ದಾನೆ, ಬಹುಪತ್ನಿತ್ವ ಸ್ವೀಕರಿಸಲೂ ನಾನು ಸಿದ್ಧ: ಪೋಸ್ಟರ್​ ಹಿಡಿದು ಬೀದಿ ಬೀದಿ ಅಲೆಯುತ್ತಿರುವ ಯುವತಿ!

ಕೈಮುಗಿದು ವಿದ್ಯಾರ್ಥಿನಿ ಕಾಲಿಗೆ ಬಿದ್ದ ಪ್ರಾಂಶುಪಾಲೆ: ವೈರಲ್​ ವಿಡಿಯೋಗೆ ನೆಟ್ಟಿಗರ ಆಕ್ರೋಶ!

ಹಾವಿನ ಮೊಟ್ಟೆ ಒಡೆಯಲು 54 ದಿನ ಹೆದ್ದಾರಿ ಕಾಮಗಾರಿ ಸ್ಥಗಿತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − five =
Remember me
