ಬೆಂಗಳೂರು:“ಮಲೆನಾಡು ಜಿಲ್ಲೆಗಳಲ್ಲಿ ಮಾರಣಾಂತಿಕ ಮಂಗನ ಕಾಯಿಲೆ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ನವೆಂಬರ್ ತಿಂಗಳಿನಲ್ಲೇ ಮಲೆನಾಡು ಭಾಗದ ಅಲ್ಲಲ್ಲಿ ಕಾಯಿಲೆ ಕಾಣಿಸಿಕೊಂಡ ಬಗ್ಗೆ ವರದಿಯಾಗಿದ್ದರೂ ಎಚ್ಚೆತ್ತುಕೊಳ್ಳದ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ಈಗಾಗಲೇ ಇಬ್ಬರು ಸೊಂಕಿತರು ಪ್ರಾಣ ಕಳೆದುಕೊಂಡಿದ್ದಾರೆ” ಎಂದು ವಿಪಕ್ಷ ನಾಯಕ ಆರ್​. ಅಶೋಕ ಹೇಳಿದ್ದಾರೆ.
ಇದನ್ನೂ ಓದಿ:48 ವರ್ಷಗಳ ಕಾಂಗ್ರೆಸ್ ಜತೆಗಿನ ನಂಟು ತೊರೆದ ಮಾಜಿ ಸಚಿವ ಬಾಬಾ ಸಿದ್ದಿಕ್
“ಶಿವಮೊಗ್ಗ, ಉತ್ತರಕನ್ನಡ, ದಕ್ಷಿಣಕನ್ನಡ, ಚಿಕ್ಕಮಗಳೂರು ಮತ್ತು ಉಡುಪಿ ಮತ್ತು ಬೆಳಗಾವಿಯ ಕೆಲ ಪ್ರದೇಶಗಳಲ್ಲಿ ಬೇಸಿಗೆ ಸಂದರ್ಭದಲ್ಲಿ ಮಂಗನಕಾಯಿಲೆ ಕಾಣಿಸಿಕೊಳ್ಳುವುದು ವಾಡಿಕೆ. ಕಳೆದ 66 ವರ್ಷಗಳಿಂದ ಈ ರೋಗ ಕಾಡುತ್ತಿದ್ದು, ಇಷ್ಟೆಲ್ಲಾ ಮಾಹಿತಿ ಇದ್ದರೂ ಮುಂಜಾಗ್ರತಾ ಕ್ರಮ ಕೈಗೊಳ್ಳದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್​ ಅವರೇ ಈ ಸಾವುಗಳಿಗೆ ನೇರ ಹೊಣೆ” ಎಂದು ಕಿಡಿಕಾರಿದರು.
“ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಈ ಕೂಡಲೇ ಆರೋಗ್ಯ ಇಲಾಖೆ ವತಿಯಿಂದ ಮಿಷನ್ ಮಾದರಿಯಲ್ಲಿ ಮನೆ ಮನೆಗೆ ಹೋಗಿ ಲಸಿಕೆ ನೀಡಬೇಕು. ಸಂಶೋಧನಾ ಸಂಸ್ಥೆಗಳು ಮತ್ತು ಉತ್ಪಾದನಾ ಕಂಪನಿಗಳ ಜತೆ ಸಮಾಲೋಚನೆ ನಡೆಸಿ ರೋಗಕ್ಕೆ ಕಾರಣವಾಗಿರುವ ವೈರಸ್​ನಲ್ಲಿ ಆಗಿರುವ ಬದಲಾವಣೆಗೆ ಅನುಗುಣವಾಗಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವ ಲಸಿಕೆ ಕಂಡು ಹಿಡಿಯಲು ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದರು.
ಇದನ್ನೂ ಓದಿ:ದರ್ಶನ್ ಹುಟ್ಟು ಹಬ್ಬಕ್ಕೆ ಬಿಗ್ ಬಾಸ್ ಖ್ಯಾತಿಯ ಇಶಾನಿ ಸ್ಪೆಷಲ್ ಗಿಫ್ಟ್..!
“ಬೆಂಗಳೂರು ಅಥವಾ ಶಿವಮೊಗ್ಗ ನಗರದಲ್ಲಿ ಕುಳಿತು ಸಭೆಗಳನ್ನು ನಡೆಸಿದರೆ ಪ್ರಯೋಜನ ಆಗುವುದಿಲ್ಲ. ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಗಳು ಫೀಲ್ಡಿಗಿಳಿದು ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕು. ಆರೋಗ್ಯ ಸಚಿವರು ಮಲೆನಾಡು ಜಿಲ್ಲೆಗಳಿಗೆ ಖುದ್ದು ಭೇಟಿ ನೀಡಿ, ರೋಗ ಲಕ್ಷಣ ಕಾಣಿಸುತ್ತಿದ್ದಂತೆ ಸೋಂಕಿತರನ್ನು ತಾಲ್ಲೂಕು ಅಥವಾ ಜಿಲ್ಲಾಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಮಾಡಬೇಕು” ಎಂದು ಹೇಳಿದರು.
ಮಲೆನಾಡು ಜಿಲ್ಲೆಗಳಲ್ಲಿ ಮಾರಣಾಂತಿಕ ಮಂಗನ ಕಾಯಿಲೆ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ನವೆಂಬರ್ ತಿಂಗಳಿನಲ್ಲೇ ಮಲೆನಾಡು ಭಾಗದ ಅಲ್ಲಲ್ಲಿ ಕಾಯಿಲೆ ಕಾಣಿಸಿಕೊಂಡ ಬಗ್ಗೆ ವರದಿಯಾಗಿದ್ದರೂ ಎಚ್ಚೆತ್ತುಕೊಳ್ಳದ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ಈಗಾಗಲೇ ಇಬ್ಬರು…
— R. Ashoka (@RAshokaBJP)February 8, 2024

“ರಾಜ್ಯ ಸರ್ಕಾರ ಈ ಸಾವಿನ ನೈತಿಕ ಹೊಣೆ ಹೊತ್ತು ಮೃತರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ. ಪರಿಹಾರ ನೀಡಬೇಕು. ಆ ಕುಟುಂಬದ ಒಬ್ಬ ವ್ಯಕ್ತಿಗೆ ಸರಕಾರದ ಉದ್ಯೋಗ ನೀಡಬೇಕು ಮತ್ತು ರೋಗಿಗಳ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸುತ್ತೇನೆ” ಎಂದು ಟ್ವೀಟ್​ ಮಾಡಿ, ತಿಳಿಸಿದ್ದಾರೆ.
‘ಸಾಧಾರಣ ಕಥೆಯ ಸಿನಿಮಾಗಳಲ್ಲಿ ನಟಿಸಲು ನನಗಿಷ್ಟವಿಲ್ಲ’ ಎಂದ ಖ್ಯಾತ ನಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − seventeen =
Remember me
