ಬೆಂಗಳೂರು:ವಾಲ್ಮೀಕಿ ಅಭಿವೃದ್ಧಿ‌ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ. ಅಧಿಕಾರಿಯದ್ದು ಆತ್ಮಹತ್ಯೆಯಲ್ಲ, ಕೊಲೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ನಾಗೇಂದ್ರರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.
ಇದನ್ನೂ ಓದಿ:ಸಂಸದ ಪ್ರಜ್ವಲ್ ರೇವಣ್ಣನ​ ಹೊಸ ವಿಡಿಯೋ ರಿಲೀಸ್: ಕುಮಾರಸ್ವಾಮಿ ಫಸ್ಟ್‌ ರಿಯಾಕ್ಷನ್‌..
ತಮ್ಮ ಎಕ್ಸ್ ಖಾತೆಯಲ್ಲಿ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಅಶೋಕ್ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂಪಾಯಿ ಮೌಲ್ಯದ ಬೃಹತ್ ಭ್ರಷ್ಟಾಚಾರವನ್ನ ಅಧಿಕಾರಿಯ ತಲೆಗೆ ಕಟ್ಟಲು ಹೋಗಿ ಕಿರುಕುಳ ನೀಡಿ ಆತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗುವಂತೆ ಮಾಡಿದೆ ಈ ಕೊಲೆಗಡುಕ ಕಾಂಗ್ರೆಸ್​ ಸರ್ಕಾರ, ಸಿಎಂ ಸಿದ್ದರಾಮಯ್ಯ ನವರೇ ಇದು ಆತ್ಮಹತ್ಯೆ ಅಲ್ಲ. ಇದು ಕೊಲೆ. ಈ ಕೊಲೆಗೆ ಹೊಣೆ ಯಾರು? ನಿಮ್ಮ ಸರ್ಕಾರದ ಕಮಿಷನ್ ದಾಹಕ್ಕೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು ಎಂದು ಪ್ರಶ್ನಿಸಿದ್ದಾರೆ.
ಇನ್ನೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಬೇಕಾದ 11,000 ಕೋಟಿ ರೂಪಾಯಿ ಎಸ್ ಸಿಎಸ್ ಪಿ/ ಟಿಎಸ್ ಪಿ ಹಣವನ್ನ ಗ್ಯಾರೆಂಟಿ ಹೆಸರಿನಲ್ಲಿ ಲಪಟಾಯಿಸಿ ಈಗಾಗಲೇ ದಲಿತರ ಹೊಟ್ಟೆಗೆ ಹೊಡೆಯುವ ಪಾಪದ ಕೆಲಸ ಮಾಡಿದ್ದೀರಿ. ಈಗ ಅಭಿವೃದ್ಧಿ ನಿಗಮದಲ್ಲಿ 85 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆಸಿ ಒಬ್ಬ ಅಧಿಕಾರಿಯ ಸಾವಿಗೆ ಕಾರಣರಾಗಿದ್ದೀರಿ.
ಈ ಕೂಡಲೇ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವರನ್ನ ಸಂಪುಟದಿಂದ ವಜಾ ಮಾಡಬೇಕು. ಈ ಪ್ರಕರಣದ ತನಿಖೆಗೆ ಆದೇಶ ಮಾಡಿ. ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ಆತ್ಮಹತ್ಯೆಗೆ ಶರಣಾದ ಅಧಿಕಾರಿಯ ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಿ ವಿಪಕ್ಷ ನಾಯಕ ಆರ್.ಅಶೋಕ್​ ಒತ್ತಾಯಿಸಿದ್ದಾರೆ.
ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರೂ ಸಹ ಅಧಿಕಾರಿ ಆತ್ಮಹತ್ಯೆ ಬಗ್ಗೆ ಎಕ್ಸ್‌ ನಲ್ಲಿ ಅನುಮಾನ ವ್ಯಕ್ತಪಡಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರು ಶಿವಮೊಗ್ಗದಲ್ಲಿ ಶಂಕಾಸ್ಪದ ರೀತಿಯಲ್ಲಿ ಸಾವಿಗೆ ಶರಣಾಗಿದ್ದಾರೆ. ಈ ಸಾವಿನ ಸುತ್ತ ಭ್ರಷ್ಟಾಚಾರದ ಹುತ್ತ ಕಟ್ಟಿದ ಅನುಮಾನ ಬರುತ್ತಿದೆ. ಇಲಾಖೆಯಲ್ಲಿನ ಕಾಣದ ಕೈಗಳ ಕರಾಮತ್ತು ಯಾವುದೆಂಬುದು ಮಹದೇವನೇ ಬಲ್ಲ. ಈ ಬಗ್ಗೆ ಸಮಗ್ರ ತನಿಖೆ ನಡೆಯಲಿ. ಸಾಕ್ಷ್ಯ ನಾಶ ಮಾಡಿ ಎಸ್‌ಐಟಿ ತನಿಖೆ ಎಂಬ ರಾಗವನ್ನು ಸರ್ಕಾರ ಹಾಡದಿರಲಿ ಎಂದು ಸುನೀಲ್ ಕುಮಾರ್ ತಿಳಿಸಿದ್ದಾರೆ.
ಚನ್ನಗಿರಿ ಲಾಕಪ್‌ ಡೆತ್‌ ಪ್ರಕರಣ: ಡಿವೈಎಸ್ಪಿ ಸೇರಿ ಮೂವರು ಪೊಲೀಸ್‌ ಅಧಿಕಾರಿಗಳ ಸಸ್ಪೆಂಡ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − fifteen =
Remember me
