ಬೆಂಗಳೂರು:‘ಮೂರು ಬಿಟ್ಟವರು ಊರಿಗೆ ದೊಡ್ಡವರು’ ಎಂಬಂತೆ ದಲಿತರ ದುಡ್ಡು ಹೊಡೆದಿರುವುದಕ್ಕೆ ಲೆಕ್ಕ ಕೊಡಿ ಸ್ವಾಮಿ ಅಂದರೆ ಎಲ್ಲ ಪತ್ರಿಕೆಗಳಲ್ಲೂ ಪುಟಗಟ್ಟಲೆ ಜಾಹೀರಾತು ಕೊಟ್ಟು ಜನರಿಗೆ ಮಂಕು ಬೂದಿ ಎರಚುತ್ತೀರಲ್ಲ ಸಿಎಂ ಸಿದ್ದರಾಮಯ್ಯನವರೇ ನಿಮ್ಮ ತಟ್ಟೆಯಲ್ಲಿ ದೊಡ್ಡ ಹೆಗ್ಗಣ ಬಿದ್ದು ಭ್ರಷ್ಟಾಚಾರದ ಗಬ್ಬು ವಾಸನೆ ದೇಶಕ್ಕೆಲ್ಲಾ ಬಡಿಯುತ್ತಿದ್ದರೆ, ಹಿಂದಿನ ಸರ್ಕಾರಗಳ ತಟ್ಟೆಯಲ್ಲಿ ನೊಣ ಬಿದ್ದಿತ್ತು ಎಂದು ತಿಪ್ಪೆ ಸಾರಿಸುತ್ತೀರಲ್ಲ, ನಿಮ್ಮ ಭಂಡತನಕ್ಕೆ ಏನು ಹೇಳೋಣ? ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್​. ಅಶೋಕ ಗುಡುಗಿದ್ದಾರೆ.
ಇದನ್ನೂ ಓದಿ:ದಿನಕ್ಕೆ ಕೇವಲ 1 ಗಂಟೆ ತಯಾರಿ ನಡೆಸಿ 34 ಲಕ್ಷ ರೂ. ಸಂಬಳದ ಉದ್ಯೋಗ ಪಡೆದ ಯುವತಿ!
ತಮ್ಮ ಸರ್ಕಾರದಲ್ಲಿ, ಅದರಲ್ಲೂ ತಾವೇ ನಿರ್ವಹಿಸುವ ಹಣಕಾಸು ಇಲಾಖೆಯ ಮೂಗಿನಡಿ ಭ್ರಷ್ಟಾಚಾರ ನಡೆದಿರುವಾಗ, ಅದಕ್ಕೆ ಮುಖ್ಯಮಂತ್ರಿಯಾಗಿ ತಾವು ಜವಾಬ್ದಾರರಲ್ಲ, ಅಂದರೆ ಅದರ ಈ ಹಗರಣದ ಹೊಣೆ ನಿಮ್ಮ ಪ್ರಕಾರ ಯಾರು ಹೊರಬೇಕು? 40 ವರ್ಷಗಳಿಂದ ತಾವು ಹಾಕಿಕೊಂಡಿದ್ದ ಎಲ್ಲ ಮುಖವಾಡಗಳು ಇದೀಗ ಕಳಚಿ ಬಿದ್ದಿವೆ. ಸಮಾಜವಾದಿ ಎಂಬ ಸೋಗಿನಲ್ಲಿ ದಲಿತರ ದುಡ್ಡು ಲೂಟಿ ಹೊಡೆಯುವ ತಮ್ಮ ಮುಖವಾಡ ಬಯಲಾಗಿದೆ. ತಮ್ಮ ಡೋಂಗಿ ‘ಶುದ್ಧ’ಹಸ್ತಕ್ಕೆ ಎಂದೂ ಅಳಿಸಲಾಗದ ಭ್ರಷ್ಟಚಾರದ ಮಸಿ ಅಂಟಿಕೊಂಡಿದೆ ಎಂದರು.
ವಾಲ್ಮೀಕಿ ನಿಗಮದ 187 ಕೋಟಿ ರೂ. ಲೂಟಿ, SCSP/TSP ನಿಧಿಯ 14,000 ಕೋಟಿ ರೂ. ದುರುಪಯೋಗ, ಮುಡಾದಲ್ಲಿ 35 ಕೋಟಿ ಬೆಲೆಬಾಳುವ 14 ಸೈಟು ಗುಳುಂ, ಅಧಿಕಾರಕ್ಕೆ ಬಂದು ಒಂದು ವರ್ಷದಲ್ಲೇ ಇಷ್ಟೊಂದು ಲೂಟಿ ಮಾಡಿರುವ ತಾವು ಇನ್ನು ತಮ್ಮ ಮೊದಲ ಅವಧಿಯಲ್ಲಿ ಎಷ್ಟು ಸಾವಿರ ಕೋಟಿ ರೂಪಾಯಿ ಹಣ ಲೂಟಿ ಮಾಡಿದ್ದೀರೋ ಆ ದೇವರಿಗೆ ಗೊತ್ತಿದೆ ಎಂದು ವ್ಯಂಗ್ಯವಾಡಿದರು.
ಇದನ್ನೂ ಓದಿ:ಪ್ರವಾಹದ ಭೀತಿ ಹೈ ಅಲರ್ಟ್: ಜಿಲ್ಲಾಧಿಕಾರಿ ನೇತೃತ್ವದಲ್ಲಿ ತುರ್ತು ಸಭೆ
ಪತ್ರಿಕೆಗಳಲ್ಲಿ ಪುಟಗಟ್ಟಲೆ ಜಾಹೀರಾತು ಕೊಟ್ಟುಬಿಟ್ಟರೆ, ಪತ್ರಿಕಾಗೋಷ್ಠಿ ಮಾಡಿ ನಾಲ್ಕು ದುರಹಂಕಾರದ ಮಾತುಗಳನ್ನಾಡಿಬಿಟ್ಟರೆ, ಜಾತಿ, ಇಡಿ ಹೆಸರು ಹೇಳಿ ಅನುಕಂಪ ಗಿಟ್ಟಿಸಿಕೊಂಡು ಬಿಟ್ಟರೆ ಈ ಹಗರಣದಿಂದ ಬಚಾವ್ ಆಗಬಹುದು ಎನ್ನುವ ಭ್ರಮೆಯಲ್ಲಿದ್ದರೆ ಅದು ನಿಮ್ಮ ಮೂರ್ಖತನ. ವಾಲ್ಮೀಕಿ ನಿಗಮದ ಹಗರಣದಲ್ಲಿ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡುವ ತನಕ ನಾವು ಸುಮ್ಮನಿರುವ ಪ್ರಶ್ನೆಯೇ ಇಲ್ಲ. ಸತ್ಯದ ಮೇಲೆ ಪ್ರಮಾಣ ವಚನ ಸ್ವೀಕರಿಸಿದ್ದೀರಿ, ಸತ್ಯವನ್ನು ಮರೆಮಾಚುವ ಪಾಪದ ಕೆಲಸ ಮಾಡಬೇಡಿ ಎಂದು ಕಿಡಿಕಾರಿದ್ದಾರೆ.
ನಟ ದರ್ಶನ್​​​​​ ಜತೆ ರಘು ಜೈಲುಪಾಲು: ಕೊರಗಿನಲ್ಲೇ ಪ್ರಾಣಬಿಟ್ಟ ಆರೋಪಿ ತಾಯಿ ಶವಸಂಸ್ಕಾರಕ್ಕೂ ಪರದಾಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
