ಬೆಳಗಾವಿ:ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಪರಿಹಾರ ನೀಡಲು ಮೀನಾ ಮೇಷ ಎಣಿಸುವ ರಾಜ್ಯ ಸರ್ಕಾರ ಮುಸ್ಲಿಮರ ಓಲೈಕೆಗೆ ಹತ್ತು ಸಾವಿರ ಕೋಟಿ ಅನುದಾನ ನೀಡುವುದಾಗಿ ಹೇಳಿರುವುದು ತುಷ್ಟೀಕರಣದ ಪರಮಾವಧಿ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.
ವಿಧಾನಸಭೆ ಕಲಾಪದ ಶೂನ್ಯವೇಳೆಯಲ್ಲಿ ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲೇ ಇಂತಹ ರೈತ ವಿರೋಧಿ ಸರಕಾರವನ್ನು ಕಂಡಿರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ನಿಡಸೋಶಿ ಗ್ರಾಮದ ಯುವ ರೈತ ಶಿವಪ್ಪ ಶಿವಲಿಂಗ ಎಂಬಾತ ಸಾಲದ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ಬಗ್ಗೆ ಸರಕಾರಕ್ಕೆ ಕಿಂಚಿತ್ತೂ ಕಾಳಜಿಯಿಲ್ಲ. ಅಧಿವೇಶನ ಆರಂಭದ ದಿನ ದುರಂತ ನಡೆದಿದ್ದು ಇಡೀ ಸರಕಾರಿ ಆಡಳಿತ ಬೆಳಗಾವಿಯಲ್ಲಿ ಇದ್ದರೂ ಯಾರೊಬ್ಬರೂ ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ ಹೇಳುವ ಕೆಲಸ ಮಾಡಿಲ್ಲ.
ಮುಂಗಾರು ವೈಫಲ್ಯದ ಬೆನ್ನಲ್ಲೇ ಹಿಂಗಾರು ಕೈಕೊಟ್ಟಿದೆ. ಈ ಬಗ್ಗೆ ಯಾವುದೇ ಸಚಿವ ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಸ್ಲಿಂ ಮೌಲ್ವಿಗಳ ಕಾರ್ಯಕ್ರಮದಲ್ಲಿ ಬಜೆಟ್​ನಲ್ಲಿ ಅಲ್ಪಸಂಖ್ಯಾತರಿಗೆ ನೀಡುವ ಅನುದಾನವನ್ನು ಹತ್ತು ಸಾವಿರ ಕೋಟಿ ರೂ.ಗಳಿಗೆ ಹೆಚ್ಚಿಸುವುದಾಗಿ ಹೇಳಿದ್ದಾರೆ. ಇವರಿಗೆ ಸಾಯುತ್ತಿರುವ ರೈತರು ಕಣ್ಣಿಗೆ ಕಾಣುತ್ತಿಲ್ಲವೇ ಎಂದು ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.
ಇದನ್ನೂ ಓದಿ:VIDEO| ಬ್ಯಾಟಿಂಗ್​ ವೇಳೆ ಬಾಂಗ್ಲಾ ಆಟಗಾರನ ಎಡವಟ್ಟು; ಈ ನಿಯಮದಡಿ ಬಲಿಯಾದ ದೇಶದ ಮೊದಲ ಬ್ಯಾಟರ್​ ಇವರೇ
ನಿಷ್ಕ್ರಿಯ ಸರ್ಕಾರ:ಈ ಸರ್ಕಾರದ ಪಂಚೇದ್ರಿಯಗಳು ನಿಷ್ಕ್ರಿಯಗೊಂಡಂತಿದೆ. ರೈತರು, ಕೂಲಿ ಕಾರ್ಮಿಕರ ಸಂಕಷ್ಟದ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ.ಬರದಿಂದ ಅಸಹಾಯಕ ರಾಗಿ ನೆರವಿನತ್ತ ನೋಡುತ್ತಿರುವವರನ್ನು ನಡು ದಾರಿಯಲ್ಲಿ ಕೈ ಬಿಟ್ಟಿದೆ. ಬರಪರಿಹಾರದ ವಿಷಯ ಬಂದರೂ ಕೇಂದ್ರದತ್ತ ಬೊಟ್ಟು ಮಾಡುತ್ತಾರೆ. ಕೊಬ್ಬರಿ ಬೆಳೆಗಾರರ ನೆರವಿಗೆ ಮುಂದಾಗಿ ಎಂದರೂ ನಫೆಡ್ ಖರೀದಿಸಲಿ ಎನ್ನುತ್ತಾರೆ. ಎಲ್ಲವನ್ನೂ ಕೇಂದ್ರವೇ ಮಾಡಬೇಕು ಎಂದಾದರೆ ಇವರ ಪಾತ್ರ ಏನು ಎಂದು ಪ್ರಶ್ನಿಸಿದ್ದಾರೆ.
ಸಂಕಷ್ಟದಲ್ಲಿರುವ ಜನತೆಗೆ ಕಿಂಚಿತ್ತೂ ಸಹಾಯ ಮಾಡಬೇಕು ಎಂಬ ಮಾನವಿಯತೆ ಇಲ್ಲದ ಕಟುಕ ಸರ್ಕಾರ ಇದು. ನಮ್ಮ ತಾಳ್ಮೆಗೂ ಒಂದು ಮಿತಿಯಿದೆ. ಬೆಳಗಾವಿ ಅಧಿವೇಶನದಲ್ಲಿ ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ ಮುಂದಾಗಬೇಕು ಇಲ್ಲವಾದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ನುಣುಚಿಕೊಳ್ಳಬೇಡಿ:ಕೇಂದ್ರದ ನೆರವು ಯಾವುದೇ ಕಾರಣಕ್ಕೂ ಮಿಸ್ ಆಗುವುದಿಲ್ಲ. ಸಂಬಂಧಿಸಿದ ಸಚಿವಾಲಯಗಳಲ್ಲಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಹಣ ಬಿಡುಗಡೆ ಆಗುತ್ತದೆ. ಅಲ್ಲಿಯವರೆಗೆ ಕಾಲಾ ಹರಣ ಮಾಡದೆ ರಾಜ್ಯ ಸರ್ಕಾರ ನಾವು ಹಿಂದೆ ನೀಡಿದ್ದಂತೆ ಮಾರ್ಗಸೂಚಿಗಿಂತ ಎರಡು ಅಥವಾ ಮೂರು ಪಟ್ಟು ಹೆಚ್ಚಿನ ಪರಿಹಾರ ಬಿಡುಗಡೆ ಮಾಡಬೇಕು ಎಂದು ವಿಪಕ್ಷ ನಾಯಕ ಆರ್​. ಅಶೋಕ್​ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 5 =
Remember me
