ಬೆಳಗಾವಿ:ಬರದಿಂದ ತತ್ತರಿಸಿರುವ ರೈತರ ನೆರವಿಗೆ ಸರ್ಕಾರ ಧಾವಿಸಿ ಸಂಕಷ್ಟಕ್ಕೆ ಮಿಡಿಯಬೇಕಿತ್ತು. ತಾಯಿ ಹೃದಯ ಇರಬೇಕಾಗಿತ್ತು. ಆದರೆ, ಕಟುಕರ ಹೃದಯದ ವರ್ತನೆ ಕಾಣಿಸುತ್ತಿದೆ. ನಯಾಪೈಸೆ ಪರಿಹಾರ ವಿತರಿಸಿಲ್ಲ ಎಂದು ಪ್ರತಿಪಕ್ಷ ನಾಯಕರಾದ ಬಳಿಕ ಅಧಿವೇಶನದಲ್ಲಿ ಮಾಡಿದ ಮೊದಲ ಭಾಷಣದಲ್ಲಿ ಆರ್. ಅಶೋಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಜತೆಗೆ ಎನ್​ಡಿಆರ್​ಎಫ್ ನಿಯಮದ ಮೂರು ಪಟ್ಟು ಪರಿಹಾರ ಕೊಡಬೇಕೆಂದು ಆಗ್ರಹಿಸಿ
ದರು. ರಾಜ್ಯದಲ್ಲಿ ಆವರಿಸಿರುವ ಬರ ಕುರಿತು ಅಲ್ಪಾವಧಿ ಚರ್ಚೆಯಲ್ಲಿ ಪಾಲ್ಗೊಂಡ ಅವರು, ಬರ ಪರಿಹಾರಕ್ಕಾಗಿ ಈವರೆಗೆ ಸರ್ಕಾರ ಏನೂ ಮಾಡಿಲ್ಲ. ಅಧಿವೇಶನದಲ್ಲಿ ಪ್ರತಿಪಕ್ಷ ಪ್ರಶ್ನೆ ಮಾಡುತ್ತದೆ ಎಂಬ ಕಾರಣಕ್ಕೆ ರೈತರಿಗೆ 2 ಸಾವಿರ ರೂ. ಪರಿಹಾರ ವಿತರಿಸುವುದಾಗಿ ಘೋಷಣೆ ಮಾಡಲಾಗಿದೆ. ಆದರೆ ಅದು ಘೋಷಣೆಯಾಗಷ್ಟೇ ಉಳಿದಿದೆ. ಈವರೆಗೆ ಒಂದು ಪೈಸೆಯೂ ಡಿಬಿಟಿ ಮೂಲಕ ಸಂದಾಯವಾಗಿಲ್ಲ. ಅಧಿಕಾರಿಗಳನ್ನು ವಿಚಾರಿಸಿದರೆ ಒಂದು ಎಕರೆ, ಎರಡು ಎಕರೆ ಇರುವವರಿಗೆ 500-600 ರೂ. ನೀಡಲಾಗುತ್ತದೆ ಎಂದು ಹೇಳುತ್ತಾರೆ. ಹೀಗಾದರೆ ರೈತರನ್ನು ನೀವು ಯಾವ ದೃಷ್ಟಿಯಲ್ಲಿ ಕಾಣುತ್ತೀರಾ ಎಂದು ಚಾಟಿ ಬೀಸಿದರು.
ಸರ್ಕಾರ ಬಳಿ ಹಣ ಇಲ್ಲ ಅಂತೇನೂ ಇಲ್ಲ. ತೆಲಂಗಾಣದಲ್ಲಿ ಇಲ್ಲಿನ ಯೋಜನೆಗಳ ಜಾಹೀರಾತು ನೀಡಿದ್ದೀರಿ. ಅದಕ್ಕಾಗಿ 7-8 ಕೋಟಿ ರೂ. ಖರ್ಚಾಗಿರಬಹುದು. ತೆಲಂಗಾಣದಲ್ಲೇನು 2 ಸಾವಿರ ರೂ. ಕೊಡುತ್ತಿಲ್ಲ ಎಂದರು. ಅಲ್ಲಿ ನಮ್ಮ ಬಸ್ ಫ್ರೀ ಕೂಡ ಇಲ್ಲ. ಅಲ್ಲಿ ಜಾಹೀರಾತು ಕೊಟ್ಟಿದ್ದು ಕರ್ನಾಟಕದ ತೆರಿಗೆ ಹಣ. ಬರ ಬಂದಿರುವ ಸಂದರ್ಭದಲ್ಲಿ ಒಂದೊಂದು ಪೈಸೆಯೂ ಮುಖ್ಯವಾಗುತ್ತದೆ. ಅಂದು ಕಾಕಾ ಪಾಟೀಲಂಗೂ ಫ್ರೀ, ಮಹದೇವಪ್ಪಂಗೂ ಫ್ರೀ ಎಂದಿರಿ. ಫ್ರೀಯಾಗೇ ಕೊಡಿ. ನಮ್ಮದೇನು ಆಕ್ಷೇಪಣೆ ಇಲ್ಲ. ಆದರೆ ರೈತರು ಸಂಕಷ್ಟದಲ್ಲಿ ಇರುವಾಗ ಅವರಿಗೆ ಏಕೆ ನೆರವು ನೀಡಿಲ್ಲ ಎಂಬುದು ನಮ್ಮ ಪ್ರಶ್ನೆ ಎಂದು ಅಶೋಕ್ ಪ್ರಶ್ನಿಸಿದರು.
ಗಮನ ಸೆಳೆದ ಅಧ್ಯಯನ:ಪ್ರತಿಪಕ್ಷ ನಾಯಕರಾಗುತ್ತಿದ್ದಂತೆ ಬರ ಅಧ್ಯಯನ ಪ್ರವಾಸ ನಡೆಸಿದ್ದ ಆರ್.ಅಶೋಕ ತಾವು ಕಂಡ ಒಂದೊಂದೇ ಘಟನೆಯನ್ನು ಎಳೆಎಳೆಯಾಗಿ ವಿವರಿಸುತ್ತಾ ಗಮನ ಸೆಳೆದರು. ದಾಖಲೆಗಳನ್ನೂ ಸಹ ಹಾಜರುಪಡಿಸಿ ಸರ್ಕಾರದ ಬಾಯಿ ಕಟ್ಟಿಹಾಕಿದರು. ಆದರೆ, ಪ್ರತಿಪಕ್ಷ ನಾಯಕನ ಮಾತನ್ನು ಬೆಂಬಲಿಸಲು ಸದನದಲ್ಲಿ ಹಾಜರಿರಬೇಕಿದ್ದ ಬಿಜೆಪಿ ಶಾಸಕರು ದೊಡ್ಡ ಸಂಖ್ಯೆಯಲ್ಲಿ ಸದನದಿಂದ ಹೊರಗಿದ್ದರು. 20-22 ಶಾಸಕರಷ್ಟೇ ಅಶೋಕ್ ಭಾಷಣದ ವೇಳೆ ಜತೆಗಿದ್ದು ಬೆಂಬಲವಾಗಿ ನಿಂತರು.
ಬರದಿಂದ ರೈತರು ದಯನೀಯ ಸ್ಥಿತಿಯಲ್ಲಿದ್ದು ಅವರ ಬಗ್ಗೆ ಸರ್ಕಾರ ಕಳಕಳಿ ವ್ಯಕ್ತಪಡಿಸಿ ಸಹಾಯಕ್ಕೆ ನಿಲ್ಲಬೇಕಾಗಿದೆ. ಆಡಳಿತ ಚುರುಕಾಗಬೇಕಾಗಿದೆ.
| ಆರ್.ಅಶೋಕ ಪ್ರತಿಪಕ್ಷ ನಾಯಕ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
