ಬೆಂಗಳೂರು:ರಾಜ್ಯ ರಾಜಧಾನಿಯಲ್ಲಿ ನೀರಿನ ಸಮಸ್ಯೆ ತೀವ್ರವಾಗಿದ್ದು, ಕೆಲವು ನಗರಗಳಲ್ಲಿ ನೀರು ಸರಬರಾಜು ಸ್ಥಗಿತಗೊಂಡಿದೆ. ನೀರಿನ ಸಮಸ್ಯೆ ಉಲ್ಬಣಗೊಂಡ ಹಿನ್ನೆಲೆ ಈ ಕುರಿತಂತೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಮಧ್ಯಾಹ್ನ ಸಂಬಂಧಪಟ್ಟವರ ಸಭೆ ಕರೆದಿದ್ದಾರೆ. ಸದ್ಯ ಸಿಎಂ ಕರೆದಿರುವ ಸಭೆ ಟೀಕಿಸಿದ ವಿಪಕ್ಷ ನಾಯಕ ಆರ್​. ಅಶೋಕ, ಇದು ಕೇವಲ ಕಾಟಾಚಾರಕ್ಕೆ ಆಗದಿರಲಿ ಎಂದಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ; ಗುಬ್ಬಿ ಶಾಸಕ ಶ್ರೀನಿವಾಸ್ ವಿರುದ್ಧ FIR
ಬರಗಾಲವಿದೆ ಅಂತ ಗೊತ್ತಿದ್ದರೂ ಕಳೆದ ಆರೇಳು ತಿಂಗಳಿಂದ ಯಾವುದೇ ಮುಂಜಾಗ್ರತೆ ವಹಿಸದೆ, ಪೂರ್ವಸಿದ್ಧತೆ ಮಾಡಿಕೊಳ್ಳದೆ, ಪರ್ಯಾಯ ಮಾರ್ಗಗಳನ್ನು ಹುಡುಕದೆ ಕಾಲಹರಣ ಮಾಡಿದ ಕಾಂಗ್ರೆಸ್​ ಸರ್ಕಾರದ ಬೇಜವಾಬ್ದಾರಿ, ನಿರ್ಲಕ್ಷ್ಯ ಧೋರಣೆಯೇ ಇಂದಿನ ಸಮಸ್ಯೆಗೆ ಕಾರಣ. ನಾಳೆ ಕರೆದಿರುವ ಸಭೆಯೂ ಸಹ ಕೇವಲ ಕಾಟಾಚಾರಕ್ಕೆ ನಡೆಯುವ ಮತ್ತೊಂದು ನಾಮಕಾವಸ್ತೆ ಸಭೆ ಆಗದಿರಲಿ ಎನ್ನುವ ಉದ್ದೇಶದಿಂದ ಸರ್ಕಾರಕ್ಕೆ ಕೆಲವು ಸಲಹೆಗಳನ್ನು ನೀಡುತ್ತಿದ್ದೇನೆ ಎಂದರು.
1.) ಟ್ಯಾಂಕರ್​ಗಳ ನೋಂದಣಿಗೆ ನೀಡಲಾಗಿದ್ದು ಗಡುವು ಮುಕ್ತಾಯವಾಗಿ ಎರಡು ದಿನಗಳು ಕಳೆದಿದ್ದರೂ, ಇನ್ನೂ ಟ್ಯಾಂಕರ್ ಗಳ ನೋಂದಣಿ ಪೂರ್ತಿಯಾಗಿಲ್ಲ. ಬೆಂಗಳೂರಲ್ಲಿ 3,500ಕ್ಕೂ ಹೆಚ್ಚು ಖಾಸಗಿ ಟ್ಯಾಂಕರ್​ಗಳಿವೆ. ಆದರೆ ನೋಂದಣಿ ಆಗಿರುವುದು ಕೇವಲ 1,700 ಮಾತ್ರ. ಅಂದರೆ ಶೇ.50%ಕ್ಕೂ ಹೆಚ್ಚು ಟ್ಯಾಂಕರ್​ಗಳು ಇನ್ನೂ ನೋಂದಣಿಯಾಗಿಲ್ಲ. ಟ್ಯಾಂಕರ್ ಮಾಫಿಯಾ, ಸುಲಿಗೆಗೆ ಕಡಿವಾಣ ಹಾಕಬೇಕಾದರೆ ಕಡ್ಡಾಯವಾಗಿ ಯಾವುದೇ ಮುಲಾಜಿಲ್ಲದೆ ಎಲ್ಲಾ ಟ್ಯಾಂಕರ್ ಗಳ ನೋಂದಣಿ ಮಾಡಿಸಬೇಕು.
ಇದನ್ನೂ ಓದಿ:ಕಳ್ಳತನ ಮಾಡಿದ್ದೀಯ ಎಂದು ಬಟ್ಟೆ ಬಿಚ್ಚಿಸಿ ಪರಿಶೀಲಿಸಿದ ಶಿಕ್ಷಕಿಯರು; ಮನನೊಂದು ಪ್ರಾಣ ಕಳೆದುಕೊಂಡ ವಿದ್ಯಾರ್ಥಿನಿ
2.) ಜಲಮಂಡಳಿ ವತಿಯಿಂದ ಉಚಿತವಾಗಿ ನೀರು ಸರಬರಾಜು ಮಾಡುವ ಟ್ಯಾಂಕರ್​ಗಳ ಮೇಲೆ ಸ್ಟಿಕ್ಕರ್ ಅಂಟಿಸುವುದು ಕಡ್ಡಾಯ ಎಂಬ ನಿಯಮವಿದ್ದರೂ ಇನ್ನೂ ಹಲವಾರು ಕಡೆ ಸ್ಟಿಕ್ಕರ್ ಅಂಟಿಸಿಲ್ಲ. ಸ್ಟಿಕ್ಕರ್ ಇಲ್ಲದಿದ್ದರೆ ನೀರಿನ ದುರ್ಬಳಕೆ ಆಗುವ ಸಾಧ್ಯತೆ ಇದ್ದು, ಅಧಿಕಾರಿಗಳು ಕಡ್ಡಾಯವಾಗಿ ಸ್ಟಿಕ್ಕರ್ ಅಳವಡಿಸಲು ಕ್ರಮ ಕೈಗೊಳ್ಳಬೇಕು.
3.) ನೋಂದಣಿಗೊಂಡಿರುವ ಖಾಸಗಿ ಟ್ಯಾಂಕರ್​ಗಳಿಗೆ ವಿಶೇಷ ಸಂಖ್ಯೆ ನೀಡಿ, ಗುರುತಿನ ಚೀಟಿ ಅಂಟಿಸಬೇಕು. ಜಿಲ್ಲಾಡಳಿತ ನೀಡಿರುವ ದರ ಪಟ್ಟಿ ಹಾಗೂ ದೂರು ಸಂಖ್ಯೆಯನ್ನು ಟ್ಯಾಂಕರ್​ಗಳ ಮೇಲೆ ಕಡ್ಡಾಯವಾಗಿ ನಮೂದಿಸಬೇಕು.
4.) ಅಕ್ರಮ ತಡೆಯಲು ಟ್ಯಾಂಕರ್​ಗಳಿಗೆ ಜಿಪಿಎಸ್ ಟ್ರಾಕರ್ ಅಳವಡಿಸಬೇಕು. ಜನಸಾಂದ್ರತೆ ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚಿನ ಟ್ಯಾಂಕರ್ ವ್ಯವಸ್ಥೆ ಮಾಡಬೇಕು.
ಇದನ್ನೂ ಓದಿ:ಬಿಜೆಪಿ ವಿರುದ್ಧ ಈಶ್ವರಪ್ಪ ಬಂಡಾಯ; ಪ್ರಲ್ಹಾದ್​ ಜೋಶಿ ಹೇಳಿದ್ದೇನು?
5.) ಸಾರ್ವಜನಿಕರಿಗೆ ನೀಡಿರುವ ಜಲಮಂಡಳಿ/ ಬಿಬಿಎಂಪಿ ಸಹಾಯವಾಣಿ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂಬ ದೂರುಗಳಿದ್ದು, ಖಾಸಗಿ ಕಾಲ್ ಸೆಂಟರ್ ತೆರೆಯುವ ಮೂಲಕ ಜಲಮಂಡಳಿ ಸಹಾಯವಾಣಿಯನ್ನು ಜನಸ್ನೇಹಿ ಮಾಡಲು ಕ್ರಮಕೈಗೊಳ್ಳಬೇಕು.
6.) ಕೇವಲ ಬೆಂಗಳೂರಿನ ಹೃದಯ ಭಾಗ ಮತ್ತು ಪ್ರತಿಷ್ಠಿತ ಬಡಾವಣೆಗಳಲ್ಲಿ ಮಾತ್ರವಲ್ಲದೆ ಬಿಬಿಎಂಪಿ ಹೊರವಲಯ ವ್ಯಾಪ್ತಿಯ 35 ವಾರ್ಡ್‌ಗಳಲ್ಲಿನ 110 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸುವ ಬಗ್ಗೆ ಕೂಡ ವಿಶೇಷ ಗಮನ ಹರಿಸಬೇಕು.
ಇದನ್ನೂ ಓದಿ:ಲೋಕಸಭೆ ಚುನಾವಣೆ: ಮೇ ತಿಂಗಳಿನಲ್ಲಿ ನಡೆಯಬೇಕಿದ್ದ ಪರೀಕ್ಷೆ ಮುಂದೂಡಿಕೆ! ಇಲ್ಲಿದೆ ಹೆಚ್ಚಿನ ಮಾಹಿತಿ
ಸರ್ಕಾರ ಸಮರೋಪಾದಿಯಲ್ಲಿ ಈ ಮೇಲಿನ ಕ್ರಮಗಳನ್ನು ಜಾರಿ ಮಾಡಿದರೆ ಮಾತ್ರ ನಾಳಿನ ಸಭೆಯಲ್ಲಿ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿ, ಟಾರ್ಗೆಟ್ ಹಾಗೂ ಕಾಲಮಿತಿ ನಿಗದಿ ಮಾಡಲು ಸಾಧ್ಯ. ಇಲ್ಲವಾದರೆ ಇದು ಮತ್ತೊಂದು ಕಾಟಾಚಾರದ ಸಭೆ ಆಗುವುದರಲ್ಲಿ ಸಂದೇಹವಿಲ್ಲ ಎಂದಿದ್ದಾರೆ.
ಟಿಕೆಟ್ ಕೈತಪ್ಪಿದೆ, ಇವನ ಬಳಿ ಹೇಗೆ ಕೆಲಸಕ್ಕಾಗಿ…. ಕಾರ್ಯಕರ್ತರಲ್ಲಿ ಪ್ರತಾಪ್ ಸಿಂಹ ಮನವಿ

ಬಿಸಿಯೂಟ ತುಂಬ ಅಗತ್ಯ, ದಯವಿಟ್ಟು ಅರ್ಧದಿನ ರಜೆ ಕೊಡ್ಬೇಡಿ: ಮನಕಲಕುವಂತಿದೆ ಈ ವಿದ್ಯಾರ್ಥಿ ಬರೆದ ಪತ್ರ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:17 + 1 =
Remember me
