ಬೆಂಗಳೂರು:ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲವಾದರೂ ಎಲ್ಲರ ಹಾರೈಕೆಗಳು ಇನ್ನಷ್ಟು ಸ್ಪೂರ್ತಿಯಿಂದ ಮತ್ತು ಗಟ್ಟಿಯಾಗಿ ಅಭಿವೃದ್ಧಿಯತ್ತ ಕರ್ನಾಟಕವನ್ನು ಕೊಂಡೊಯ್ಯಲು ಸಂಕಲ್ಪ ಮಾಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅದಕ್ಕೂ ಮುನ್ನ ಇಂದು ತಮ್ಮ ಹುಟ್ಟುಹಬ್ಬದ ಅಂಗವಾಗಿ ತಮ್ಮ ಆರ್ ಟಿ ನಗರ್ ನಿವಾಸದಲ್ಲಿ ಗೋಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.
ಕರ್ನಾಟಕದ ಸಾಮಾನ್ಯ ಜನರಿಂದ ಹಿಡಿದು ಪಕ್ಷದ ಹಿರಿಯರು ಪದಾಧಿಕಾರಿಗಳು, ರಾಷ್ಟ್ರಪತಿಗಳು, ಪ್ರಧಾನಿ ನರೇಂದ್ರ ಮೋದಿಯವರು ಶುಭ ಕೋರಿ ಟ್ವೀಟ್ ಮಾಡಿದ್ದಾರೆ. ಕ್ಷೇತ್ರದ ಜನ ಶುಭಾಶಯಗಳನ್ನು ಕೋರಿದ್ದಾರೆ. ಅಮಿತ್ ಷಾ ಅವರು ಕರೆ ಮಾಡಿ ಶುಭಾಶಯ ತಿಳಿಸಿದ್ದಾರೆ. ಅವರೆಲ್ಲರಿಗೂ ಹೃದಯ ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದ್ದೇನೆ ಎಂದರು.
ಎಲ್ಲರ ಶುಭಾಶಯಗಳು ರಾಜ್ಯವನ್ನು ಸುಭಿಕ್ಷತೆಯತ್ತ ತೆಗೆದುಕೊಂಡು ಹೋಗಲು, ರಾಜ್ಯದ ಸಮಗ್ರ ಅಭಿವೃದ್ಧಿ ಮಾಡಲು ವಿಶೇಷವಾಗಿ ರಾಜ್ಯ ದಲ್ಲಿ ಬಡವರು, ರೈತರು ಮತ್ತು ಹಿಂದುಳಿದವರು, ಪರಿಶಿಷ್ಟ ಜಾತಿ ಮತ್ತು ಪಂಗಡ, ಮಹಿಳೆಯರು ಮತ್ತು ಯುವಕರ ಶ್ರೇಯೋಭಿವೃದ್ಧಿಗೆ ಕೆಲಸ ಮಾಡಲು ದೊಡ್ಡ ಶಕ್ತಿ ಮತ್ತು ಪ್ರೇರಣೆಯನ್ನು ನೀಡಿದೆ ಎಂದರು.
ರಾಜ್ಯದ ಅಭಿವೃದ್ಧಿಯ ಚಿತ್ರಣ ನೀಡುವ ಕಿರುಹೊತ್ತಿಗೆಸರ್ಕಾರ ಇಂದು 6 ತಿಂಗಳು ಪೂರೈಸಿರುವ ಹಿನ್ನೆಲೆಯಲ್ಲಿ ಕಿರು ಹೊತ್ತಿಗೆಯನ್ನು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಬಿಡುಗಡೆ ಮಾಡಲಾಗುವುದು. ಕಳೆದ 6 ತಿಂಗಳಲ್ಲಿ ಕೋವಿಡ್ ಮತ್ತು ಪ್ರವಾಹ ನಿರ್ವಹಣೆ, ರೈತರಿಗೆ, ಮಹಿಳೆಯರಿಗೆ ತೆಗೆದುಕೊಂಡಿರುವ ತೀರ್ಮಾನ ಹಾಗೂ ಅದರ ಪರಿಣಾಮಗಳ ಬಗ್ಗೆ ಪುಸ್ತಕದಲ್ಲಿ ವಿವರಿಸಲಾಗಿದೆ ಎಂದರು.
ಚುನಾವಣಾ ವರ್ಷದ ಬಜೆಟ್ಮುಂಬರುವ ದಿನಗಳಲ್ಲಿ ಬಜೆಟ್ ಮಂಡನೆಯಾಗಲಿದೆ. ಚುನಾವಣೆ ವರ್ಷದ ಬಜೆಟ್ ಕೂಡಾ ಆಗಿದೆ. ರಾಜ್ಯದ ಆರ್ಥಿಕ ಸ್ಥಿತಿಯನ್ನು ಸಧೃಢ ಮಾಡುವುದು ಒಂದು ಕಡೆಯಾದರೆ, ರಾಜ್ಯದ ಸಮಗ್ರ ಅಭಿವೃದ್ಧಿಗೆ ಎಲ್ಲ ವರ್ಗದ ಜನರಿಗೆ ಅಭಿವೃದ್ಧಿ ಮೂಲಕ ನ್ಯಾಯ ಒದಗಿಸುವ ಯೋಜನೆಗಳನ್ನು ರೂಪಿಸುವ ಉದ್ದೇಶವಿದೆ. ಎಲ್ಲಾ ಆಯಾಮಗಳು ನಮ್ಮ ಮುಂದಿದ್ದು, ಅವುಗಳಿಗೆ ದಿಕ್ಸೂಚಿಯನ್ನು, ವೇಗವನ್ನು ಹಾಗೂ ಗುರಿ ತಲುಪುವ ಗತಿಯನ್ನು ನೀಡಲು ಸಂಕಲ್ಪ ಮಾಡಿ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕೆಎಸ್​ಆರ್​ಟಿಸಿ ಟಿಕೆಟ್​ ವಿತರಣಾ ಯಂತ್ರ ಸ್ಫೋಟ: ಕಂಡಕ್ಟರ್​ಗೆ ಗಂಭೀರ ಗಾಯ

ನೀನೆ ಸಾಕಿದ ಗಿಣಿ ಹದ್ದಾಗಿ ಕುಕ್ಕಿತಲ್ಲೋ… ಉಗ್ರರ ದಾಳಿಗೆ ಪಾಕ್​ನ 10 ಸೈನಿಕರ ಸಾವು

ಪ್ರೇಯಸಿಗೆ ಜಾಮೀನು ಕೊಡಿಸಲು ಹೋಗಿ ಮರಣದಂಡನೆಗೆ ಗುರಿ: ವಿಷದ ಇಂಜೆಕ್ಷನ್​ ನೀಡಿ ಪ್ರಿಯಕರನ ಹತ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
