ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕರೊನಾ ಸೋಂಕು ತಗುಲಿದ್ದು, ಕೊನೆಯ ಕ್ಷಣದಲ್ಲಿ ದೆಹಲಿ ಪ್ರವಾಸವನ್ನು ರದ್ದು ಮಾಡಿದ್ದಾರೆ.
ಇಂದು ಬೆಳಗ್ಗೆ ಟ್ವೀಟ್​ ಮಾಡಿರುವ ಸಿಎಂ ಬೊಮ್ಮಾಯಿ, ನನಗೆ ಇಂದು ಕೋವಿಡ್​-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್​ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿ ಪ್ರವಾಸ ರದ್ದಾಗಿರುತ್ತದೆ ಎಂದು ಹೇಳಿದ್ದಾರೆ.
ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ.
— Basavaraj S Bommai (@BSBommai)August 6, 2022

ಬೊಮ್ಮಾಯಿ ಅವರು ಇಂದು ದೆಹಲಿಗೆ ತೆರಳಬೇಕಾಗಿತ್ತು. ಸಿಎಂ ದೆಹಲಿ ಪ್ರವಾಸಕ್ಕೆ ಎಲ್ಲವು ಸಿದ್ಧವಾಗಿತ್ತು. ಎಲ್ಲವು ಅಂದುಕೊಂಡಂತೆ ನಡೆದಿದ್ದರೆ, ಇಂದು ಬೊಮ್ಮಾಯಿ ಅವರು ಆಜಾದಿ ಕಾ ಅಮೃತ್ ಮಹೋತ್ಸವ ಮತ್ತು ನೀತಿ ಆಯೋಗದ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದರು. ಆದರೆ, ಕರೊನಾ ಪಾಸಿಟಿವ್​ ಹಿನ್ನೆಲೆಯಲ್ಲಿ ಕೊನೆಯ ಕ್ಷಣದಲ್ಲಿ ದೆಹಲಿ ಪ್ರವಾಸ ರದ್ದಾಗಿದೆ.
ಪ್ರಧಾನಿ ಕಾರ್ಯಕ್ರಮದಲ್ಲಿ ಭಾಗಿಯಾಗಲು 48 ಗಂಟೆ ಮುಂಚಿತವಾಗಿಯೇ ಸಿಎಂ ಕೊವೀಡ್ ಪರೀಕ್ಷೆ ಮಾಡಿಸಬೇಕಿತ್ತು. ಹೀಗಾಗಿ ನಿನ್ನೆ ಸಂಜೆ ಕೊವೀಡ್ ಟೆಸ್ಟ್ ಮಾಡಿಸಿದ್ದರು. ಇಂದು ಬೆಳಗ್ಗೆ ಕೊವೀಡ್ ಪಾಸಿಟಿವ್​ ರಿಪೋರ್ಟ್ ಬಂದ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸ ರದ್ದು ಮಾಡಿದ್ದಾರೆ.
ಸಿಎಂ ಬೊಮ್ಮಾಯಿ ಅವರಿಗೆ ಮೂರನೇ ಬಾರಿಗೆ ಕರೊನಾ ಪಾಸಿಟಿವ್ ಆಗಿದೆ. ಸದ್ಯ ಅವರ ಆರೋಗ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ. ತಮ್ಮ ‌ಮನೆಯಲ್ಲೇ ಬೊಮ್ಮಾಯಿ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ.
ಬೆಳಗಾವಿ ಜಿಲ್ಲಾಧಿಕಾರಿ ನಿವಾಸದ ಹಿಂಬದಿಯ ಕ್ವಾರ್ಟರ್ಸ್​ ​ನಲ್ಲಿ ಕಾಣಿಸಿಕೊಂಡ ಚಿರತೆ: ಜನರಲ್ಲಿ ಹೆಚ್ಚಿದ ಆತಂಕ

VIDEO| ಪ್ರಧಾನಿ ಮೋದಿ, ಬಿಜೆಪಿ ಸರ್ಕಾರದ ಬಗ್ಗೆ ವ್ಯಂಗ್ಯವಾಡಿರುವ TRS ಪಕ್ಷದ ಈ ಸಾಂಗ್ ವೈರಲ್ ಆಗ್ತಿದೆ!

ವಿವಾದವನ್ನೇ ಬಂಡವಾಳ ಮಾಡಿಕೊಂಡ್ರಾ ಪವಿತ್ರಾ ಲೋಕೇಶ್​? ಟಾಲಿವುಡ್​ನಲ್ಲಿ ಹೀಗೊಂದು ಬಿಸಿ ಬಿಸಿ ಚರ್ಚೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − five =
Remember me
