ಬೆಂಗಳೂರು:ಐಪಿಎಸ್​ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರ ವರ್ಗಾವಣೆ ಆದೇಶವನ್ನು ಸರ್ಕಾರ ತಡೆಹಿಡಿದಿದೆ.
ಜನವರಿ 27ರಂದು ಸರ್ಕಾರ ರವಿ ಚನ್ನಣ್ಣವರ್​ ಸೇರಿದಂತೆ 9 ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್​ ವರಿಷ್ಠಾಧಿಕಾರಿಯಾಗಿರುವ ರವಿ ಚನ್ನಣ್ಣವರ್​ ಅವರನ್ನು ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಸರ್ಕಾರ ವರ್ಗಾವಣೆ ಮಾಡಿತ್ತು.
ಆದರೆ, ಇದೀಗ ಸರ್ಕಾರ ವರ್ಗಾವಣೆ ಆದೇಶವನ್ನು ಏಕಾಏಕಿ ತಡೆಹಿಡಿದಿದ್ದು, ಈ ಬಗ್ಗೆ ಜ. 28ರಂದು ಆದೇಶ ಹೊರಡಿಸಿದೆ. ತಕ್ಷಣ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ರವಿ ಚನ್ನಣ್ಣವರ್ ವರ್ಗಾವಣೆಗೆ ಸರ್ಕಾರ ಬ್ರೇಕ್​ ಹಾಕಿದೆ. ​
ಕೆಲ ದಿನಗಳಿಂದ ರವಿ ಚನ್ನಣ್ಣವರ್​ ಅವರು ತುಂಬಾ ಸುದ್ದಿಯಲ್ಲಿದ್ದಾರೆ. ಅವರ ವಿರುದ್ಧ ಸಾಕಷ್ಟು ಭ್ರಷ್ಟಾಚಾರ ಆರೋಪಗಳು ಕೇಳಿಬಂದಿದೆ. ಅಕ್ರಮವಾಗಿ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ ನಡೆಯುತ್ತಿದೆ.
ರವಿ ಚನ್ನಣ್ಣನವರ್ ಸೇರಿದಂತೆ ಒಂಬತ್ತು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ಸರ್ಕಾರ

ಸುತ್ತಿಗೆಯಿಂದ ಹೊಡೆದು ಗಂಡನನ್ನು ಕೊಲೆಗೈದ ಮಹಿಳೆಯನ್ನು ಬಂಧಿಸದೇ ಬಿಟ್ಟು ಕಳುಹಿಸಿದ ಪೊಲೀಸರು!

ಸರ್ವೋದಯ ದಿನ: ಜ.30ರಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ಮಾಡುವಂತಿಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
