ಬೆಂಗಳೂರು:ಬಿಜೆಪಿಯವರು ವೀರ ಸಾವರ್ಕರ್​ ಅವರನ್ನು ಸ್ವಾತಂತ್ರ್ಯ ಸೇನಾನಿ ಎಂದು ಬಣ್ಣಿಸುತ್ತಿದ್ದಾರೆ. ಆದರೆ, ಆ ವಾದವನ್ನು ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಖಂಡಿಸಿದ್ದಾರೆ. ಈ ಕುರಿತಾಗಿ ಪತ್ರಿಕಾಗೋಷ್ಟಿ ನಡೆಸಿ, ಸರಣಿ ಕೂ ಮಾಡಿರುವ ಅವರು ಬಿಜೆಪಿಯ ವಾದ ಸುಳ್ಳು ಎಂದು ಹಲವು ಪುರಾವೆಗಳ ಮೂಲಕ ವಿವರಿಸಿದ್ದಾರೆ.
ಸಾವರ್ಕರ್ ಬ್ರಿಟನ್‌ನಲ್ಲಿದ್ದಾಗ ಪ್ರತೀಕಾರದ ಕಾರಣಕ್ಕೆ ಜಾಕ್ಸನ್ ಎಂಬ ಬ್ರಿಟಿಷ್ ಅಧಿಕಾರಿಯ ಹತ್ಯೆ ನಡೆಯುತ್ತದೆ. ಈ ಪ್ರಕರಣದಲ್ಲಿ ಬಂಧಿತರಾದಾಗ ವಿಚಾರಣೆ ಎದುರಿಸಲು ಭಾರತಕ್ಕೆ ಬರಲು ಅವರು ನಿರಾಕರಿಸುತ್ತಾರೆ. ಬಿಜೆಪಿಯವರು ಹೇಳುವಂತೆ ಸಾವರ್ಕರ್ ಸ್ವಾತಂತ್ರ್ಯ ಸೇನಾನಿಯಾಗಿದ್ದರೆ ಭಾರತಕ್ಕೆ ಬರಲು ನಿರಾಕರಿಸಿದ್ದೇಕೆ?
–ಕರ್ನಾಟಕ ಕಾಂಗ್ರೆಸ್ (@inckarnataka)25 Aug 2022

ದೇಶ ವಿಭಜನೆಗೆ ನೆಹರೂ-ಗಾಂಧಿ ಕಾರಣ ಎನ್ನುವ ಬಿಜೆಪಿಗರು ಇತಿಹಾಸ ಓದಲಿ. ಧರ್ಮದ ಆಧಾರದ ಮೇಲೆ ದೇಶ ವಿಭಜನೆ ಆಗಬೇಕು ಎಂದು ಮೊದಲು ಧ್ವನಿ ಎತ್ತಿದ್ದೇ ಸಾವರ್ಕರ್! ’ಜಿನ್ನಾ ಅವರ ದೇಶ ವಿಭಜನೆಯ ಅಭಿಪ್ರಾಯವನ್ನು ನಾನು ಸಂಪೂರ್ಣ ಒಪ್ಪುತ್ತೇನೆ’ ಎಂದಿದ್ದರು ಸಾವರ್ಕರ್. ಪ್ರತ್ಯೇಕ ಸಿಖ್ ದೇಶದ ಬೇಡಿಕೆಗೂ ಅವರ ಬೆಂಬಲವಿತ್ತು.
–ಕರ್ನಾಟಕ ಕಾಂಗ್ರೆಸ್ (@inckarnataka)25 Aug 2022

ಇಡೀ ದೇಶ ’ಸಂಪೂರ್ಣ ಸ್ವರಾಜ್ಯ’ಕ್ಕೆ ಅಗ್ರಹಿಸುತ್ತಿದ್ದಾಗ ಸಾರ್ವಕರ್ ಹಿಂದೂ ಮಹಾಸಭಾ ಮೂಲಕ ಬ್ರಿಟೀಷರಿಗೆ ಬೆಂಬಲ ನೀಡಿದ್ದು ಯಾಕೆ? ಸಾವರ್ಕರ್ ಅವರು ಕ್ವಿಟ್ ಇಂಡಿಯಾ ಚಳುವಳಿಗೆ ಸಹಕಾರ ನೀಡಲಿಲ್ಲ ಯಾಕೆ? ದೇಶದ ವಿವಿಧ ಪ್ರಾಂತ್ಯಗಳಲ್ಲಿ ಮುಸ್ಲಿಂ ಲೀಗ್ ಜೊತೆ ಸರ್ಕಾರ ಮಾಡಿದ್ದು ಯಾಕೆ?
–ಕರ್ನಾಟಕ ಕಾಂಗ್ರೆಸ್ (@inckarnataka)25 Aug 2022

2ನೇ ವಿಶ್ವ ಯುದ್ಧದ ಸಂದರ್ಭದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಸೈನ್ಯ ಕಟ್ಟಲು ಮುಂದಾದರು. ಆ ಸಮಯದಲ್ಲೇ ಸಾವರ್ಕರ್ ಬ್ರಿಟೀಷರ ಸೇನೆಗೆ ಲಕ್ಷಾಂತರ ಭಾರತೀಯರನ್ನು ಸೇರಿಸಿದರು. ಬ್ರಿಟೀಷ್ ಸೇನೆಗೆ ಸೇರಿದ ಈ ಭಾರತೀಯರು ಕೊಂದಿದ್ದು ಇದೇ ನಾತಾಜಿ ಅವರ ಅಜಾದ್ ಹಿಂದ್ ಫೌಜ್ ಯೋಧರನ್ನು!
–ಕರ್ನಾಟಕ ಕಾಂಗ್ರೆಸ್ (@inckarnataka)25 Aug 2022

ಮಹಾತ್ಮ ಗಾಂಧಿ ಅವರೇ ಸಾರ್ವಕರ್ ಅವರಿಗೆ ಕ್ಷಮಾಪಣಾ ಪತ್ರ ಬರೆಯುವಂತೆ ತಿಳಿಸಿದ್ದರು ಎಂಬ ಬಿಜೆಪಿಗರ ವಾದ ಶುದ್ಧ ಸುಳ್ಳು. ಗಾಂಧೀಜಿ ಅವರೇ ತಮ್ಮ ಲೇಖನದಲ್ಲಿ, ’ಸಾರ್ವಕರ್ ಅವರು ಇನ್ನು ಮುಂದೆ ಬ್ರಿಟೀಷರ ವಿರುದ್ಧ ಯಾವುದೇ ಹೋರಾಟ ಮಾಡುವುದಿಲ್ಲ, ಅವರು ಬ್ರಿಟೀಷರ ಪರವಾಗಿ ಕೆಲಸ ಮಾಡಲು ಬಯಸಿದ್ದಾರೆ’ ಎಂದು ಬರೆದಿದ್ದರು.
–ಕರ್ನಾಟಕ ಕಾಂಗ್ರೆಸ್ (@inckarnataka)25 Aug 2022

ಅಂಡಮಾನ್ ಜೈಲಿನಲ್ಲಿ ಸಾವರ್ಕರ್ ಜೊತೆಗೆ ಕಾಲಾಪಾನಿ ಶಿಕ್ಷೆಗೊಳಗಾದ 700ಕ್ಕೂ ಹೆಚ್ಚು ಖೈದಿಗಳಿದ್ದರು. ಬ್ರಿಟಿಷರಿಗೆ ಆಪ್ತವಾಗಿದ್ದ ಸಾವರ್ಕರ್ ಹೊರತುಪಡಿಸಿ ಉಳಿದ ಎಲ್ಲಾ ಖೈದಿಗಳಿಗೆ ಕಠಿಣ ಶಿಕ್ಷೆಯನ್ನು ನೀಡುತ್ತಿದ್ದರು. ಹೀಗಿದ್ದರೂ, ಬ್ರಿಟಿಷರಿಗೆ ಅತಿ ಹೆಚ್ಚು ಬಾರಿ ಕ್ಷಮಾಪಣೆ ಪತ್ರ ಬರೆದಿದ್ದು ಸಾವರ್ಕರ್ ಮಾತ್ರ!
–ಕರ್ನಾಟಕ ಕಾಂಗ್ರೆಸ್ (@inckarnataka)25 Aug 2022

ದುರಂತ ಅಂತ್ಯ ಕಂಡ ಟೆಕ್ಕಿ: ಸುಂದರಿಯ ಡೈರಿ-ಮೊಬೈಲ್​ನಲ್ಲಿರೋ ಬಾಯ್​ಫ್ರೆಂಡ್​ ರಹಸ್ಯದ ಹಿಂದೆ ಬಿದ್ದ ಪೊಲೀಸರು!

ಶಿರಾದಲ್ಲಿ ಭೀಕರ ಅಪಘಾತ, 9 ಮಂದಿ ದುರ್ಮರಣ: ಹೊಟ್ಟೆಪಾಡಿಗಾಗಿ ಗುಳೆ ಹೊರಟ್ಟಿದ್ದ ಬಡವರು ದುರಂತ ಅಂತ್ಯ

ಇದ್ದಕ್ಕಿದ್ದಂತೆ ಸಂಪರ್ಕಕ್ಕೆ ಸಿಗದ ಕೆಲ AAP ಶಾಸಕರು: ಕೇಜ್ರಿವಾಲ್​ ಸರ್ಕಾರಕ್ಕೆ ಕಂಟಕ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
