ಧಾರವಾಡ:ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ಮರಕ್ಕೆ ಕ್ರೂಸರ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ 7 ಮಂದಿ ದಾರುಣ ಸಾವಿಗೀಡಾಗಿರುವ ಘಟನೆ ಧಾರವಾಡ ತಾಲೂಕಿನ ಬಾಡ್ ಗ್ರಾಮದ‌ ಬಳಿ ಇಂದು (ಮೇ.21) ನಸುಕಿನ ಜಾವದಲ್ಲಿ ನಡೆದಿದೆ.
ಮೃತರನ್ನು ಅನನ್ಯ(14), ಹರೀಶ(13), ಶಿಲ್ಪಾ (34), ನೀಲವ್ವ(60), ಮಧುಶ್ರೀ(20), ಮಹೇಶ್ವರಯ್ಯ (11) ಹಾಗೂ ಶಂಭುಲಿಂಗಯ್ಯ (35) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಆರು ಮಂದಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಕಿಮ್ಸ್​ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರೆಲ್ಲರು ಧಾರವಾಡ ತಾಲೂಕಿನ ಬೆನಕಟ್ಟಿ ಗ್ರಾಮದವರೆಂದು ತಿಳಿದುಬಂದಿದೆ. ಎಲ್ಲರು ಮದುವೆ ಹೋಗಿದ್ದರು. ನಿಗದಿ ಗ್ರಾಮದಲ್ಲಿ ಮದುವೆ ನಡೆಯಬೇಕಿತ್ತು. ಆದರೆ, ಮಳೆ ಕಾರಣ ಮನ್ಸೂರ ರೇವಣಸಿದ್ದೇಶ್ವರ ಮಠಕ್ಕೆ ಸಂಬಂಧಿ ಯುವಕನ ಮದುವೆ ಸ್ಥಳಾಂತರವಾಗಿತ್ತು. ಇಂದು ಮದುವೆ ನಡೆಯಬೇಕಿತ್ತು. ಮದುವೆ ಮುನ್ನಾ ದಿನದ ಇಳೆ ಕಾರ್ಯಕ್ಕೆ ಹೋಗಿದ್ದ. ಇಳೆ ಕಾರ್ಯದ ಊಟ ಮುಗಿಸಿ ಮತ್ತೆ ನಿಗದಿಗೆ ಬರುತ್ತಿದ್ದಾಗ ದುರಂತ ಘಟಿಸಿದೆ.
ಘಟನಾ ಸ್ಥಳಕ್ಕೆ ಧಾರವಾಡ ಎಸ್ಪಿ ಕೃಷ್ಣಕಾಂತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಮಂಡ್ಯದ ಮಟನ್ ಶಾಪ್ ಅಭಿಮಾನಿಯ ಬಗ್ಗೆ ಬೋಲ್ಡ್​ ಬ್ಯೂಟಿ ಸನ್ನಿ ಲಿಯೋನ್ ಹೇಳಿದ್ದು ಹೀಗೆ…

ಸಾಮಾಜಿಕ ಜಾಲತಾಣದಲ್ಲಿ ದಿಢೀರ್​ ವೈರಲ್​ ಆಯ್ತು ಕೆಜಿಎಫ್​ ಬ್ಯೂಟಿ ಶ್ರೀನಿಧಿ ಶೆಟ್ಟಿಯ ಹಾಟ್​ ಅವತಾರಗಳು!

ಮೈ ಮೇಲಿದ್ದ ಚಿನ್ನವೇ ಚೇತನಾಗೆ ಮುಳುವಾಯ್ತಾ? ಪಾಲಕರ ಮಾತು ಕೇಳಿದಿದ್ರೆ ಖಂಡಿತ ಪ್ರಾಣ ಉಳಿಯುತ್ತಿತ್ತು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + sixteen =
Remember me
