ಬೆಂಗಳೂರು:ಭವಿಷ್ಯದಲ್ಲಿ ಕೆಂಪುಕೋಟೆಯಲ್ಲಿ ಕೇಸರಿ ಧ್ವಜವೂ ಹಾರಾಡಬಹುದು ಎಂಬ ಸಚಿವ ಕೆ.ಎಸ್​. ಈಶ್ವರಪ್ಪ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಪ್ರತಿಪಕ್ಷ ನಾಯಕರು ರಾಜೀನಾಮೆಗೆ ಆಗ್ರಹಿಸಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ. ಸುಗಮವಾಗಿ ನಡೆಯಬೇಕಿದ್ದ ಕಲಾಪ ಇದೇ ವಿಚಾರವಾಗಿ ಕಾಂಗ್ರೆಸ್​ ಮತ್ತು ಬಿಜೆಪಿ ನಡುವಿನ ಜಟಾಪಟಿ ವೇದಿಕೆಯಾಗಿ ಮಾರ್ಪಾಡಾಗಿದ್ದು, ಒಂದೆರೆಡು ಬಾರಿ ಕಲಾಪವು ಮುಂದೂಡಲಾಗಿದೆ. ನಾಳೆ ಕಲಾಪ ಆರಂಭಕ್ಕೂ ಮುನ್ನವೇ ಈಶ್ವರಪ್ಪ ಅವರ ರಾಜೀನಾಮೆ ಪಡೆಯಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಆಗ್ರಹಿಸಿದ್ದಾರೆ.
ಕೂ ಮೂಲಕ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಡಿಕೆಶಿ, ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ದೇಶದ ಹಿತಾಸಕ್ತಿ ಹಾಗೂ ಪ್ರಜಾಪ್ರಭುತ್ವ ಉಳಿಸಲು ಹೋರಾಟ ಮಾಡುತ್ತಿದ್ದೇವೆ. ಭಾರತದ ಧ್ವಜ ಹಾಗೂ ರಾಷ್ಟ್ರಗೀತೆಯನ್ನು ಗೌರವಿಸುವುದು ಮೂಲಭೂತ ಹಕ್ಕು ಎಂದು ಸಂವಿಧಾನದ ವಿಧಿ 51ಎ ಹೇಳುತ್ತದೆ. ಜನಪ್ರತಿನಿಧಿಗಳಾಗಿ, ಭಾರತೀಯರಾಗಿ ನಾವು ರಾಷ್ಟ್ರಧ್ವಜಕ್ಕೆ ಅಪಮಾನ ಎಸಗುವ ಯಾವ ತಪ್ಪನ್ನೂ ಮಾಡಿಲ್ಲ.
ಸಚಿವರಾಗಿ ಪ್ರಮಾಣ ಸ್ವೀಕರಿಸುವಾಗ ಸಂವಿಧಾನದ ಆಶಯಗಳಿಗೆ, ದೇಶದ ಹಿತಾಸಕ್ತಿಗೆ ಗೌರವ ತೋರಿ ನಡೆಯುವುದಾಗಿ ಪ್ರಮಾಣ ಮಾಡುತ್ತಾರೆ. ಹಾಗೆ ಪ್ರಮಾಣ ಮಾಡಿದ ಸಚಿವ ಈಶ್ವರಪ್ಪ ಅವರು ಕೆಂಪು ಕೋಟೆಯ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳುವುದು ದೇಶದ್ರೋಹವಲ್ಲದೆ ಮತ್ತಿನ್ನೇನು?
ಇಂಥ ಹೇಳಿಕೆ ನೀಡಿದ ಸಚಿವರ ವಿರುದ್ಧ ಗವರ್ನರ್‌ ಅವರು ಕ್ರಮ ಕೈಗೊಳ್ಳಬೇಕಿತ್ತು. ಮುಖ್ಯಮಂತ್ರಿಗಳು ರಾಜೀನಾಮೆ ಪಡೆಯಬೇಕಿತ್ತು. ಪೊಲೀಸರು ಸೊಮೊಟೊ ಪ್ರಕರಣ ದಾಖಲಿಸಬೇಕಿತ್ತು. ಕಾಂಗ್ರೆಸ್‌ ಪಕ್ಷದ ನಾಯಕರ ಸಣ್ಣ ಹೇಳಿಕೆಗಳನ್ನೂ ಗಂಭೀರವಾಗಿ ಪರಿಗಣಿಸಿ ಜೈಲಿಗಟ್ಟಿದ ಬಿಜೆಪಿ ಸರ್ಕಾರಕ್ಕೆ ಈಶ್ವರಪ್ಪ ಅವರ ಹೇಳಿಕೆಯಲ್ಲಿ ತಪ್ಪು ಕಾಣಿಸಲಿಲ್ಲವೇ?
ಸಚಿವರೇ ತಾವು ಕೇಸರಿ ಧ್ವಜ, ಶಾಲನ್ನು ಸೂರತ್‌ನಿಂದ ತರಿಸಿ ಹಂಚಿದ್ದಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಸಚಿವರು ಇಂದೂ ಕೂಡ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಕನಿಷ್ಠ ಪಕ್ಷ ಈಗಲಾದರೂ ಅವರ ವಿರುದ್ಧ ಕ್ರಮ ಕೈಗೊಳ್ಳದೆ ಸರ್ಕಾರ ಮೌನವಾಗಿರುವುದು ಏಕೆ?
ನಾಳೆ (ಫೆ.18) ಬೆಳಗ್ಗೆ ವಿಧಾನಸಭಾ ಕಲಾಪಗಳು ಆರಂಭವಾಗುವ ಮುನ್ನ ಮುಖ್ಯಮಂತ್ರಿಗಳು ಸಚಿವ ಈಶ್ವರಪ್ಪ ಅವರ ರಾಜೀನಾಮೆ ಪಡೆಯಬೇಕು. ಅವರ ವಿರುದ್ಧ ಪ್ರಕರಣ ದಾಖಲಿಸಬೇಕು. ಹಾಗೊಂದುವೇಳೆ ಕ್ರಮ ಕೈಗೊಳ್ಳದಿದ್ದರೆ ಸದನದ ಒಳಗೆ ಮತ್ತು ಹೊರಗೆ ನಮ್ಮ ಪ್ರತಿಭಟನೆ ಮುಂದುವರಿಸುತ್ತೇವೆ ಎಂದು ಡಿಕೆಶಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
–D K Shivakumar (@dkshivakumar_official)18 Feb 2022

–D K Shivakumar (@dkshivakumar_official)18 Feb 2022

ಯುವತಿಯೊಬ್ಬಳ ಜತೆ ರೆಸ್ಟೋರೆಂಟ್​ನಲ್ಲಿ ಕಾಣಿಸಿಕೊಂಡ ನಟ ಧನುಷ್: ಯಾರು ಆ ಯುವತಿ?

ಕಲಾಪ ಹಾಳು ಮಾಡುತ್ತಿರುವವರನ್ನು ಸದನದಿಂದ ಹೊರ ಹಾಕಿ, ಇಲ್ಲವೇ ಅನಿದಿರ್ಷ್ಟಾವಧಿಗೆ ಮುಂದೂಡಿ: ಎಚ್​ಡಿಕೆ

ನಟ ಧನುಷ್​ ಜತೆ​ ಡಿವೋರ್ಸ್: ಕೊನೆಗೂ ಮೌನ ಮುರಿದ ಐಶ್ವರ್ಯಾ ರಜಿನಿಕಾಂತ್​ ಹೇಳಿದ್ದು ಹೀಗೆ….

ಕಾಂಗ್ರೆಸ್‌ ಅಹೋರಾತ್ರಿ ಧರಣಿ: ವಿಧಾನಸೌಧ ಆವರಣದಲ್ಲೇ ವಾಕಿಂಗ್‌, ದಿನ ಪತ್ರಿಕೆ ಓದು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + one =
Remember me
