ಬೆಂಗಳೂರು:ಅರಣ್ಯದ ಒತ್ತುವರಿಯನ್ನು ತಡೆಯುವ ನಿಟ್ಟಿನಲ್ಲಿ ಹೆಚ್ಚಿನ ಆದ್ಯತೆಯನ್ನು ನೀಡುವಂತೆ ಅರಣ್ಯ ಅಭಿವೃದ್ದಿ ನಿಗಮದ ಅಧಿಕಾರಿಗಳು ಹಾಗೂ ನೌಕರರಿಗೆ ನಿಗಮದ ಅಧ್ಯಕ್ಷರಾದ ಶ್ರೀಮತಿ ತಾರಾ ಅನುರಾಧ ಕರೆ ನೀಡಿದರು.
ಇಂದು ಬೆಂಗಳೂರಿನಲ್ಲಿ ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮದ ಸುವರ್ಣ ಮಹೋತ್ಸವದ ಹಿನ್ನಲೆಯಲ್ಲಿ ಆಯೋಜಿಸಿದ್ದ “ಸೈಕಲ್‌ ಜಾಥಾ” ಗೆ ಚಾಲನೆ ನೀಡಿ ಮಾತನಾಡಿದರು. ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮದ ಉದ್ದೇಶಗಳಲ್ಲಿ ಅರಣ್ಯ ಒತ್ತುವರಿಯನ್ನು ತಡೆಯುವುದು ಬಹಳ ಪ್ರಮುಖವಾದ ಅಂಶ. ಕಾಡಿನ ಅಂಚಿನ ಪ್ರದೇಶಗಳಲ್ಲಿ ರಬ್ಬರ್‌ ಹಾಗೂ ನೀಲಗಿರಿ ಮರಗಳನ್ನು ಬೆಳೆಸುವ ಮೂಲಕ ಅತಿಕ್ರಮಣ ಒತ್ತುವರಿಯನ್ನು ತಡೆಗಟ್ಟುವ ಮಹತ್ವದ ಕಾರ್ಯ ನಿಗಮದ್ದಾಗಿದೆ. ಈ ಹಿನ್ನಲೆಯಲ್ಲಿ ನಿಗಮಕ್ಕೆ ಅರಣ್ಯ ಇಲಾಖೆಯ ವತಿಯಿಂದ ನೀಡಲಾಗಿರುವ ಅರಣ್ಯದ ಅಂಚಿನ ಪ್ರದೇಶಗಳು ಹಾಗೂ ಅಗತ್ಯವಿರುವಂತಹ ಕಡೆಗಳಲ್ಲಿ ಒತ್ತುವರಿಯನ್ನು ತೆರವುಗೊಳಿಸುವ ಹಾಗೂ ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚಿನ ಆದ್ಯತೆ ನೀಡುವಂತೆ ಕರೆ ನೀಡಿದರು.
ಕರ್ನಾಟಕ ರಾಜ್ಯದಲ್ಲಿ ನೀಲಗೀರಿ ಮರಗಳನ್ನು ಬೆಳೆಸುವುದನ್ನ ನಿಷೇದಿಸಲಾಗಿದೆ. ಇದರಿಂದ ನಮ್ಮ ನಿಗಮದ ಮೂಲ ಹಾಗೂ ಪ್ರಮುಖ ಆದಾಯ ಕುಂಠಿತವಾಗಿದೆ. ನೀಲಗಿರಿ ಮರಗಳನ್ನು ಕಾಡಿನ ಅಂಚಿನಲ್ಲಿ ಬೆಳೆಸುವ ಮೂಲಕ ಒತ್ತುವರಿಯನ್ನು ತಡೆಯಲಾಗುತ್ತಿತ್ತು. ಅಲ್ಲದೆ, ಕಾಲಕಾಲಕ್ಕೆ ಅವುಗಳನ್ನು ವ್ಯವಸ್ಥಿತವಾಗಿ ಕಟಾವು ಮಾಡುವ ಮೂಲಕ ಒತ್ತುವರಿಗೆ ಅವಕಾಶ ಇಲ್ಲದಂತೆ ಮಾಡಲಾಗುತ್ತಿತ್ತು. ಬೇರೆ ರೀತಿಯ ಮರಗಳನ್ನು ಬೆಳೆಸುವ ಪ್ರಯತ್ನ ಸಾಗುತ್ತಿದ್ದರೂ ಆದಾಯದಲ್ಲಿ ಅಭಿವೃದ್ದಿ ಕಾಣುತ್ತಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದರು.
ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ರಾಧಾದೇವಿ ಐ.ಎಫ್‌.ಎಸ್‌ ಮಾತನಾಡಿ, ಅರಣ್ಯ ಅಭಿವೃದ್ದಿಯ ವಿಷಯದಲ್ಲಿ ನಮ್ಮ ನಿಗಮ ಉತ್ತಮ ಸಾಧನೆ ತೋರಿಸಿದೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ಸೈಕಲ್ ಜಾಥದಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಐ.ಎಫ್.ಎಸ್ ಶ್ರೀ ಆರ್ ಕೆ ಸಿಂಗ್, ನಿಗಮದ ಉಪಾಧ್ಯಕ್ಷ ರೇವಣಪ್ಪ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು. ಕಬ್ಬನ್ ಪಾರ್ಕ್ ನಲ್ಲಿ ನಡೆದ ಜಾಥಾದಲ್ಲಿ ನೂರಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು.
ಕೇಂದ್ರದ ಅಗ್ನಿಪಥ ಯೋಜನೆ ವಿರೋಧಿಸಿ ಬಿಹಾರದಲ್ಲಿ ಪ್ರತಿಭಟನೆ: ರೈಲಿಗೆ ಬೆಂಕಿ ಹಚ್ಚಿ ಆಕ್ರೋಶ

ಪಿಎಸ್​ಐ ನೇಮಕಾತಿ ಗೋಲ್​ಮಾಲ್​: ಕಲಬುರಗಿ ದಂಪತಿ ಹೈದರಾಬಾದ್​ಗೆ ಎಸ್ಕೇಪ್​- ಜಾಮೀನು ನಕಾರ

ದೇಶ ದಿವಾಳಿಯಾದ್ರೂ ಹಾಲಿ, ಮಾಜಿ ಪ್ರಧಾನಿಯರಿಗಿಂತ ಪತ್ನಿಯರೇ ಶ್ರೀಮಂತರು- ವರದಿ ಬಹಿರಂಗ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 12 =
Remember me
