ಕಲಬುರಗಿ:ಲೋಕಾಯುಕ್ತ ಬಲೆಗೆ ಬಿದ್ದ ಕಾನ್ಸ್​ಟೇಬಲ್ ಮತ್ತು ಸಿಪಿಐ ಜೀಪ್ ಚಾಲಕನ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಳು ದಂಧೆಕೋರನಿಂದ ಹಣಕ್ಕೆ ಬೇಡಿಕೆ ಇಟ್ಟ ಆಡಿಯೋವೊಂದು ವೈರಲ್​ ಆಗಿದೆ.
ನಿನ್ನೆ (ಸೆ.23) ಮರಳು ಸಾಗಾಣಿಕೆ ಸಂಬಂಧ 30 ಸಾವಿರ ರೂಪಾಯಿ ಲಂಚ‌ ಪಡೆಯುವಾಗ ಜೇವರ್ಗಿಯ ಕಾನ್ಸ್​ಟೇಬಲ್ ಶಿವರಾಯ್ ಮತ್ತು ಸಿಪಿಐ ಜೀಪ್‌ ಚಾಲಕ ಅವ್ವಣ್ಣ ಲೋಕಾಯುಕ್ತ ಪೊಲೀಸ್​ ಬಲೆ ಬಿದ್ದಿದ್ದರು. ಇದೀಗ ಮರಳು ದಂಧೆಕೋರನಿಂದ ಹಣಕ್ಕೆ ಬೇಡಿಕೆ ಇಟ್ಟ ಆಡಿಯೋ‌ ವೈರಲ್ ಆಗಿದ್ದು, ಅಕ್ರಮ ಮರಳು ಸಾಗಾಟದ ಹಿಂದೆ ಪೊಲೀಸರ ಕೈವಾಡ ಇರುವುದು ಬಟಾಬಯಲಾಗಿದೆ.
ಕಾನ್ಸಟೇಬಲ್ ಶಿವರಾಯ್ ಮತ್ತು ಜೀಪ್ ಚಾಲಕ ಅವ್ವಣ್ಣ, ಮರಳು ದಂಧೆಕೋರರ ಜೊತೆ ಮಾತಾನಾಡಿರುವ ಆಡಿಯೋ ವೈರಲ್​ ಆಗಿದೆ. ಮರಳು ಸಾಗಾಣಿಕೆ ಮಾಡಬೇಕಾದರೆ ಜೇವರ್ಗಿ ಸಿಪಿಐ ಶಿವಪ್ರಸಾದ್ ಮಟ್ಟದ್ ಅವರಿಗೆ 32 ಸಾವಿರ ರೂ. ಕೊಡಬೇಕು ಅಂತಾ ಇಬ್ಬರು ಆಡಿಯೋದಲ್ಲಿ ಬೇಡಿಕೆ ಇಟ್ಟಿದ್ದಾರೆ.
ನೀವು ದುಡ್ಡು ಕೊಟ್ಟು ಮರಳು ಸಾಗಿಸಬೇಕು. ನಮ್ಮ ಬಳಿ ಪ್ರಿಪೇಯ್ಡ್ ಇದೆ. ಆದರೆ, ಯಾವಾಗಲು ಪೊಸ್ಟ್ ಪೇಯ್ಡ್​ ಇರುವುದಿಲ್ಲ. ಎಲ್ಲರು ದುಡ್ಡು ಕೊಟ್ಟು ಮರಳು ಹೊಡೆಯುತ್ತಿದ್ದಾರೆ. ನೀವು ದುಡ್ಡು ಕೊಟ್ಟು ಮರಳು ಹೊಡೆದರೆ ಸಿಪಿಐ ಬಗ್ಗೆ ಚಿಂತೆ ಮಾಡಬೇಕಾಗಿಲ್ಲ. ದುಡ್ಡು ಕೊಟ್ಟ ನಂತರ ನಮ್ಮ ಸಾಹೇಬರು ಗಾಡಿ ಹಿಡಿಯೋದಿಲ್ಲ. ಈ ಹಿಂದೆ ಕೇಸ್ ಆದಾಗ ನಿನ್ನನ್ನು ಉಳಿಸಿಲ್ವ. ನಿನಗೆ ಸಾಕಷ್ಟು ಸಹಾಯ ಮಾಡಿದ್ದೀವಿ. ಹೀಗಾಗಿ 32 ಸಾವಿರ ರೂ. ಕೊಡಬೇಕು ಎಂದು ಕಾನ್ಸ್​ಟೇಬಲ್​ ಇಬ್ಬರು ಮಾತನಾಡಿರುವುದು ಆಡಿಯೋದಲ್ಲಿದೆ.
ಲಂಚ ಪ್ರಕರಣ ಸಂಬಂಧ ಜೇವರ್ಗಿ ಸಿಪಿಐ ಶಿವಪ್ರಸಾದ್​ರನ್ನು ವಶಕ್ಕೆ ಪಡೆದಿದ್ದ ಲೋಕಾಯುಕ್ತರು, ಜೇವರ್ಗಿ ತಾಲ್ಲೂಕಿನ ಅತಿಥಿ ಗೃಹದಲ್ಲಿ ತಡರಾತ್ರಿವರೆಗೂ ಮೂರು ವಿಚಾರಣೆ ನಡೆಸಿದರು. ಕೊನೆಗೆ ಮರಳು ದಂಧೆಯ ಲಂಚ ಪ್ರಕರಣದಿಂದ ಸಿಪಿಐರನ್ನು ಕೈ ಬಿಟ್ಟು, ಇಬ್ಬರು ಕಾನ್ಸ್​ಟೇಬಲ್​​ರನ್ನು ಬಂಧಿಸಿರುವ ಲೋಕಾಯುಕ್ತ ಪೊಲೀಸರು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
VIDEO| ಟೇಕಾಫ್​ ಆದ ಬೆನ್ನಲ್ಲೇ ವಿದ್ಯುತ್​ ತಂತಿಗೆ ಡಿಕ್ಕಿಯಾಗಿ ಹೆಲಿಕಾಪ್ಟರ್​ ಪತನ: ಸಂಸದ ಸೇರಿ ನಾಲ್ವರ ಸ್ಥಿತಿ ಗಂಭೀರ ​

ಶಂಕಿತ ಉಗ್ರರ ಜಾಲ ಬಗೆದಷ್ಟೂ ರೋಚಕ: ಕ್ರಿಪ್ಟೋ ಕರೆನ್ಸಿ ಮೂಲಕ ಫಂಡಿಂಗ್, ಮೆಸೆಂಜರ್ ಆ್ಯಪ್ಸ್​ನಲ್ಲಿ ಸಂಪರ್ಕ

ಸದನದಲ್ಲಿ ಬಿಎಂಎಸ್ ಅಕ್ರಮ ಪ್ರಲಾಪ, ನಡೆಯದ ಕಲಾಪ: ಗದ್ದಲ, ಗಲಾಟೆಯಿಂದ ಅಧಿವೇಶನ ಮೊಟಕು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 5 =
Remember me
