ಮಂಡ್ಯ:ಯುವಕನ ಮೇಲೆ ಹಲ್ಲೆ ಮಾಡಿದ್ದ ಆರೋಪದಡಿ ದೂರು ದಾಖಲಾಗಿದ್ದ ಹಿನ್ನೆಲೆಯಲ್ಲಿ ಹಿರಿಯ ನಟ ಜೈ ಜಗದೀಶ್‌ ಅವರು ಇಂದು ನಾಗಮಂಗಲ ತಾಲೂಕಿನ ಬೆಳ್ಳೂರು ಪೊಲೀಸ್ ಠಾಣೆಗೆ ಹಾಜರಾಗಿ ಪೊಲೀಸರ ಮುಂದೆ ಹೇಳಿಕೆ ನೀಡಿದರು. ಅಲ್ಲದೆ, ಸಮಸ್ಯೆ ಬಗೆಹರಿಸಿಕೊಂಡಿರುವುದಾಗಿ ಇದೇ ಸಂದರ್ಭದಲ್ಲಿ ತಿಳಿಸಿದರು.
ರಾಜಿ ಸಂಧಾನ ಮೂಲಕ ಪ್ರಕರಣ ಇತ್ಯರ್ಥವಾಗಿದ್ದು, ಜೈ ಜಗದೀಶ್​ ಅವರು ಕ್ಷಮೆ ಕೇಳಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಮಾತನಾಡಿರುವ ಜೈ ಜಗದೀಶ್​, ಕಳೆದ ಭಾನುವಾರ ನನ್ನ ಮತ್ತು ಚಂದ್ರು ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಈಗ ನಾವು ಠಾಣೆಯಲ್ಲಿ ಕೂತು ಬಗೆಹರಿಸಿಕೊಂಡಿದ್ದೇವೆ ಮತ್ತು ರಾಜಿಯಾಗಿದ್ದೇವೆ. ನಾವಿಬ್ಬರು ಈಗ ಸ್ನೇಹಿತರು. ಯಾವುದೇ ಗಲಾಟೆಯಾಗಿರಲಿಲ್ಲ, ಸಣ್ಣ ಭಿನ್ನಾಭಿಪ್ರಾಯ ಅಷ್ಟೇ ಎಂದು ಹೇಳಿದ್ದಾರೆ.
ನಡೆದಿದ್ದೇನು?ಇದೇ 5ರಂದು ಈ ಘಟನೆ ನಡೆದಿತ್ತು. ಚಂದ್ರು ಅವರು ಬಸ್ಸಿನಿಂದ ಕೆಳಕ್ಕೆ ಇಳಿಯುತ್ತಿರುವ ಸಂದರ್ಭದಲ್ಲಿ ಹಿಂದಿನಿಂದ ಜೈಗದೀಶ್‌ ಅವರು ಕಾರಿನಿಂದ ಬರುತ್ತಿದ್ದರು. ಪ್ರಯಾಣ ವೇಳೆ ಜೈ ಜಗದೀಶ್ ಕಾರಿನ ಮೇಲೆ ಜ್ಯೂಸ್ ಬಾಟೆಲ್‌ ಬಿದ್ದಿತ್ತು. ಬಸ್‌ನಲ್ಲಿದ್ದವರೇ ಬಾಟಲ್ ಎಸೆದಿದ್ದಾರೆ ಅಂದುಕೊಂಡಿದ್ದರು. ಇದೇ ಸಮಯಕ್ಕೆ ಚಂದ್ರು ಬಸ್‌ನಿಂದ ಕೆಳಗಿಳಿದಾಗ ಆತನೇ ಬಾಟೆಲ್ ಎಸೆದಿರಬೇಕೆಂದು ಭಾವಿಸಿ, ಬಸ್ಸಿನಿಂದ ಯಾಕೆ ಬಾಟಲಿ ಎಸೆಯುತ್ತಿಯಾ ಎಂದು ಪ್ರಶ್ನಿಸಿ ಕೆಟ್ಟ ಶಬ್ದಗಳಿಂದ ಬೈದದ್ದೂ ಅಲ್ಲದೇ, ಹಲ್ಲೆ ನಡೆಸಿದ್ದಾರೆ ಎಂದು ಬೆಳ್ಳೂರು ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಈ ಸಂಬಂಧ ಇಂದು ಠಾಣೆಗೆ ಹಾಜರಾಗಿ ಹೇಳಿಕೆ ನೀಡಿ ಸಮಸ್ಯೆ ಬಗೆಹರಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಆನೆ ದಾಳಿಗೆ ವೃದ್ಧೆ ಬಲಿ: ಸಂಜೆ ಅಂತ್ಯಕ್ರಿಯೆ ವೇಳೆ ಮತ್ತೆ ಬಂದು ಮೃತದೇಹ ಹೊತ್ತೊಯ್ದ ಆನೆ!

ನಟಿ ಅನುಷ್ಕಾ ಶೆಟ್ಟಿ ಅಣ್ಣನ ಕೊಲೆಗೆ ಸಂಚು​? ಮುನ್ನೆಲೆಗೆ ಬಂದ ಮುತ್ತಪ್ಪ ರೈ! ದಾಖಲಾಯ್ತು ದೂರು

ಅದ್ಧೂರಿ ಮದ್ವೆಗೆ ಒಂದು ನಯಾಪೈಸೆ ಖರ್ಚು ಮಾಡದೆ ಕೋಟಿ ಕೋಟಿ ಸಂಪಾದಿಸಿದ ನಯನಾ-ವಿಘ್ನೇಶ್!​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + four =
Remember me
