ಮಂಡ್ಯ:ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಅಬ್ಬರ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ (ಕೆಆರ್​ಎಸ್​) ಅಣೆಕಟ್ಟೆಗೆ ಹರಿದುಬರುತ್ತಿರುವ ನೀರಿನ ಪ್ರಮಾಣದಲ್ಲಿ ಭಾರಿ ಏರಿಕೆಯಾಗಿದೆ. ಕೆಆರ್​ಎಸ್​ ಡ್ಯಾಂ ಭರ್ತಿಯಾಗಿರುವುದರಿಂದ ಕಾವೇರಿ ನದಿಗೆ ನೀರು ಬಿಡಲಾಗಿದೆ.
ಒಳ ಹರಿವು ಹೆಚ್ಚಾದಂತೆ ಹೊರ ಹರಿವಿನ ಪ್ರಮಾಣ ಕೂಡ ಏರಿಕೆಯಾಗಿದ್ದು, ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಆವರಿಸಿದೆ. ಒಂದು ತಿಂಗಳ ಅಂತರದಲ್ಲಿ ಎರಡನೇ ಬಾರಿಗೆ ನೆರೆ ಆತಂಕ ಆವರಿಸಿದೆ. ಸದ್ಯ ಅಣೆಕಟ್ಟೆಗೆ 67,712 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಅಣೆಕಟ್ಟೆಯಿಂದ ನದಿಗೆ 81,112 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.
ಭಾರಿ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿರುವುದರಿಂದ ನದಿ ಹಂಚಿನ ದೇಗುಲ, ಪ್ರವಾಸಿ ತಾಣಗಳು ಜಲಾವೃತವಾಗಿವೆ. ಪ್ರವಾಹ ಭೀತಿ ಎದುರಾಗುತ್ತಿದ್ದಂತೆ ಶ್ರೀರಂಗಪಟ್ಟಣ ತಾಲೂಕು ಆಡಳಿತ ಅಲರ್ಟ್ ಆಗಿದೆ. ನದಿ ತೀರದ 1 ಕಿಲೋಮೀಟರ್ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿ ಶ್ರೀರಂಗಪಟ್ಟಣ ತಹಶೀಲ್ದಾರ್ ಶ್ವೇತ ರವೀಂದ್ರ ಆದೇಶ ಹೊರಡಿಸಿದ್ದಾರೆ.
ಕಾವೇರಿ ನದಿ ದಡದಲ್ಲಿರುವ ದೇವಸ್ಥಾನಗಳಿಗೆ ಜಲ ದಿಗ್ಬಂಧನ ಹಾಕಿದೆ. ಶ್ರೀರಂಗಪಟ್ಟಣದ ಗಣಪತಿ, ಚಂದ್ರಮೌಳೇಶ್ವರ ಮತ್ತು ಅಷ್ಟಮಾತೆಯರ ದೇವಸ್ಥಾನಗಳು ಜಲಾವೃತವಾಗಿವೆ. ದೈನಂದಿನ ಪೂಜಾ ಕೈಂಕರ್ಯಗಳು ಸಹ ಬಂದ್ ಆಗಿವೆ. ನದಿ ಬಳಿಗೆ ಬರದಂತೆ ಜನರಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಗುಮಾಸ್ತನ​ ಮನೆಯಲ್ಲಿ ಕಂತೆ ಕಂತೆ ಹಣ: ಅಧಿಕಾರಿಗಳು ದಾಳಿ ಮಾಡ್ತಿದ್ದಂತೆ ವಿಷ ಕುಡಿದ ಸರ್ಕಾರಿ ನೌಕರ!​

ಜಾಲತಾಣದಲ್ಲಿ ವಿದ್ಯಾರ್ಥಿ ಹಾಕಿದ್ದ ಪೋಸ್ಟ್​ ಓದುತ್ತಾ ಕಾಲೇಜು ವೇದಿಕೆಯಲ್ಲೇ ಕಣ್ಣೀರಾಕಿದ ಶಾಸಕ ಸಾರಾ ಮಹೇಶ್​

ಅನೈತಿಕ ಸಂಬಂಧಕ್ಕೆ ಶಿಕ್ಷಕಿ ಬಲಿ: 6 ತಿಂಗಳ ಬಳಿಕ ಆರೋಪಿಗಳ ಹೆಡೆಮುರಿ ಕಟ್ಟಿದ ನಂಜನಗೂಡು ಪೊಲೀಸರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 19 =
Remember me
