ಮಂಡ್ಯ:ಮಂಡ್ಯ ತಹಸೀಲ್ದಾರ್ ಅಮಾನತುಗೊಂಡಿದ್ದಕ್ಕೆ ಹಳೇ ಬೂದನೂರು ಗ್ರಾಮಸ್ಥರು ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿರುವ ಅಪರೂಪದ ಪ್ರಸಂಗ ವರದಿಯಾಗಿದೆ.
ಕರ್ತವ್ಯ ಲೋಪ, ಲಂಚಕ್ಕೆ ಬೇಡಿಕೆ ಮತ್ತು ದುರ್ನಡತೆ ಆರೋಪದಡಿ ತಹಸೀಲ್ದಾರ್ ಚಂದ್ರಶೇಖರ್ ಶಂಭಣ್ಣ ಗಾಳಿ ಎಂಬುವರನ್ನು ಅಮಾನತು ಮಾಡಲಾಗಿದೆ. ತಹಸೀಲ್ದಾರ್ ಅಮಾನತು ಆಗಿದ್ದಕ್ಕೆ ಡಿಸಿ ಅಶ್ವಥಿಗೆ ಮಂಡ್ಯ ತಾಲೂಕಿನ ಹಳೇ ಬೂದನೂರು ಗ್ರಾಮಸ್ಥರು ಜೈಕಾರ ಕೂಗಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ಗ್ರಾಮಸ್ಥರು ಸ್ವಂತ ಮನೆಗಾಗಿ ಹಲವು ಬಾರಿ ಹೋರಾಟ ನಡೆಸಿದ್ದಾರೆ. ಆದರೆ, ತಹಸೀಲ್ದಾರ್​ ಚಂದ್ರಶೇಖರ್​, ನಿವೇಶನ ಹಂಚಿಕೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಇದೆ. ನ್ಯಾಯಕ್ಕಾಗಿ ಹೋರಾಟ ನಡೆಸಿದ್ದ ಗ್ರಾಮಸ್ಥರಿಗೆ ನ್ಯಾಯ ಕೊಡಿಸುವಲ್ಲಿ ವಿಫಲವಾಗಿದ್ದಾರೆ. ಹಲವು ಬಾರಿ ತಹಸೀಲ್ದಾರ್​ಗೆ ಮನವಿ ಸಲ್ಲಿಸಿದ್ದರು. ಆದರೂ ಪ್ರಯೋಜನ ಆಗಿರಲಿಲ್ಲ.
ನಿವೇಶನ ಕೊಡಿಸುವಲ್ಲಿ ವಿಫಲ, ಕರ್ತವ್ಯ ಲೋಪ ಸೇರಿದಂತೆ 13 ಕಾರಣ ನೀಡಿ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ರಶ್ಮಿ ಅವರು ಅಮಾನತು ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೂದನೂರು ಗ್ರಾಮಸ್ಥರು ಡಿಸಿ ಅಶ್ವಥಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಮಂಡ್ಯ ತಹಸೀಲ್ದಾರ್​ ಅಮಾನತು! ಇವರ ಮೇಲಿದೆ ಬರೋಬ್ಬರಿ 13 ಕೇಸ್​, ಅಕ್ಕಿ ಮೂಟೆಯೂ ನಾಪತ್ತೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − eight =
Remember me
