ಮೈಸೂರು‌:ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯ ನಡುವೆ ಅಪರೂಪದ ಪ್ರಸಂಗವೊಂದು ಜರುಗಿದೆ. ಕೊಳವೆ ಬಾವಿ ತೊಡಿಸಿಕೊಡಿ ಎಂದು ಯುವಕನೊಬ್ಬ ಮನವಿ ಪತ್ರವನ್ನು ಮತ ಪೆಟ್ಟಿಗೆಗೆ ಹಾಕಿರುವುದು ಮತ ಎಣಿಕೆಯ ಸಂದರ್ಭದಲ್ಲಿ ಬೆಳಕಿಗೆ ಬಂದಿದೆ. ಅಲ್ಲದೆ, ಇನ್ನೊಬ್ಬ ಮತದಾರ ಯಾರು ದುಡ್ಡು ಕೊಟ್ಟಿಲ್ಲ ಅಂತಾ ಚುನಾವಣಾ ಅಭ್ಯರ್ಥಿಗಳ ವಿರುದ್ಧ ಕಿಡಿಕಾರಿದ್ದಾರೆ.
ನಾನು ಎಂ.ಎ, ಬಿ.ಎಡ್ ಮಾಡಿದ್ದೇನೆ. ಆದರೆ, ನನಗೆ ಕೆಲಸ ಇಲ್ಲ. ನಮ್ಮಪ್ಪನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಜಮೀನಿಗೆ ಕೊಳವೆ ಬಾವಿಯ ಅವಶ್ಯಕತೆ ಇದೆ. ನನಗೆ ಸರ್ಕಾರಿ ಕೆಲಸ ಕೊಡಿ. ಇಲ್ಲ ಅಂದ್ರೆ ಜಮೀನಿನಲ್ಲಿ‌ ಕೊಳವೆಬಾವಿ ತೊಡಿಸಿಕೊಡಿ ಎಂದು ಮನವಿ ಪತ್ರ ಬರೆದು ಮತಪೆಟ್ಟಿಗೆಯಲ್ಲಿ ಹಾಕಿದ್ದಾನೆ.
ಇದಿಷ್ಟೇ ಅಲ್ಲದೆ, ಪೆಟ್ರೋಲ್ ಬೆಲೆ ಇಳಿಸಲು ಮನವಿ ಮಾಡಿದ್ದಾನೆ. ರಸಗೊಬ್ಬರ ಬೆಲೆ ಕಡಿಮೆ ಮಾಡುವಂತೆಯೂ ಕೇಳಿಕೊಂಡಿದ್ದಾನೆ. ಸದ್ಯ ಯುವಕ ಬರೆದಿರುವ ಪತ್ರ ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್​ ಆಗಿದ್ದು, ಸಿಕ್ಕಾಪಟ್ಟೆ ವೈರಲ್​ ಕೂಡ ಆಗುತ್ತಿದೆ. ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.
ಅಂದಹಾಗೆ ಪತ್ರ ಬರೆದ ಯುವಕನ ಹೆಸರು ರಾಜೇಂದ್ರ. ಈತ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಗಣಿಗನೂರು ಗ್ರಾಮದ ನಿವಾಸಿ. ರಾಜೇಂದ್ರ ಮಾತ್ರವಲ್ಲದೆ, ಅನೇಕರು ಮತ ಪೆಟ್ಟಿಯೊಳಗಡೆ ವಿಭಿನ್ನ ಕೊರಿಕೆಯ ಪತ್ರಗಳನ್ನು ಹಾಕಿದ್ದಾರೆ. ಬ್ಯಾಲೆಟ್ ಪತ್ರ ಮೇಲೆಯೇ ಅಭ್ಯರ್ಥಿಗಳ ವಿರುದ್ಧ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಯಾವ ಅಭ್ಯರ್ಥಿಗಳು ಕೂಡ ಹಣ ಕೊಟ್ಟಿಲ್ಲ ಎಂದು ಬ್ಯಾಲೇಟ್ ಪೇಪರ್ ಮೇಲೆ ಮತದಾರ ಬರೆದಿದ್ದಾನೆ.(ದಿಗ್ವಿಜಯ ನ್ಯೂಸ್​)
ಭಾರತೀಯ ಸೇನೆ ಬಗ್ಗೆ ಮಾತನಾಡಿ ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್​ ಆದ ನಟಿ ಸಾಯಿ ಪಲ್ಲವಿ!

ಟಾಲಿವುಡ್​ಗೆ ಹಾರಿದ ಮತ್ತೊಬ್ಬ ಕನ್ನಡತಿ!; ಕನ್ನಡದ ಅರ್ಧ ಡಜನ್ ಚಿತ್ರಗಳಲ್ಲಿ ಅನುಷಾ ನಟನೆ

ವಿಚಾರಣೆಗೆ ಹೆದರಿ ಠಾಣೆಯ ಶೌಚಾಲಯದಲ್ಲಿ ಫಿನೈಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಪೇದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 7 =
Remember me
