ಬೆಂಗಳೂರು:ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತ ಹಾಗೂ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ಲಿಮಿಟೆಡ್‌ನ ಠೇವಣಿದಾರರ ಹಣ ದುರ್ಬಳಕೆ ಹಾಗೂ ಅವ್ಯವಹಾರ ಪ್ರಕರಣದ ತನಿಖೆಗೆ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರನ್ನು ನಿಯೋಜಿಸುವಂತೆ ರಾಜ್ಯ ಪೊಲೀಸ್ ಮಾಹಾನಿರ್ದೇಶಕರಿಗೆ ಹೈಕೋರ್ಟ್ ನಿರ್ದೇಶಿಸಿದೆ.
ಹಗರಣದ ತನಿಖೆಗೆ ಡಿಐಜಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ಡಿಜಿಪಿಗೆ ನಿರ್ದೇಶಿಸುವಂತೆ ಕೋರಿ ಬಸವನಗುಡಿ ನಿವಾಸಿ ಕೆ.ಆರ್. ನರಸಿಂಹಮೂರ್ತಿ ಮತ್ತಿತರರು ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.
ಇದನ್ನೂ ಓದಿಜ್ವರ, ಕೆಮ್ಮು ಮಾತ್ರವಲ್ಲ, ಇವು ಕೂಡ ಕರೊನಾ ಲಕ್ಷಣಗಳು…! ಪರೀಕ್ಷಿಸಿಕೊಳ್ಳಿ
ವಿಚಾರಣೆ ವೇಳೆ, ಇಷ್ಟು ದೊಡ್ಡ ಮಟ್ಟದ ಹಗರಣ ನಡೆದಿರುವಾಗ ಕೇವಲ 4 ಎ್ಐಆರ್‌ಗಳನ್ನಷ್ಟೇ ದಾಖಲಿಸಲಾಗಿದೆ. ಪ್ರಕರಣದ ಸೂಕ್ತ ತನಿಖೆ ನಡೆದಿಲ್ಲವೆಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಬ್ಯಾಂಕ್, ಸೊಸೈಟಿ ಸೇರಿ ಎಲ್ಲರ ವಿರುದ್ಧವೂ ಸಮಗ್ರ ತನಿಖೆ ನಡೆಸುವ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಪೀಠ, ಪ್ರಕರಣದ ತನಿಖೆಗೆ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರನ್ನು ನೇಮಕ ಮಾಡುವಂತೆ ಡಿಜಿಪಿಗೆ ನಿರ್ದೇಶಿಸಿತು.
ಇದೇ ವೇಳೆ, ಜಾರಿ ನಿರ್ದೇಶನಾಲಯ ಹಾಗೂ ಭ್ರಷ್ಟಾಚಾ ನಿಗ್ರಹ ದಳವನ್ನು (ಎಸಿಬಿ) ಪ್ರತಿವಾದಿಯನ್ನಾಗಿಸಲು ಅರ್ಜಿದಾರರಿಗೆ ಸೂಚಿಸಿದ ಪೀಠ, ಪ್ರಕರಣ ಸಂಬಂಧ ಈವರೆಗೆ ಕೈಗೊಂಡಿರುವ ಕ್ರಮಗಳ ಕುರಿತ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಇಡಿಗೆ ನಿರ್ದೇಶಿಸಿತು. ನ್ಯಾಯಾಲಯದ ಆದೇಶ ಅನುಪಾಲನಾ ವರದಿಯನ್ನು ಜೂ.23ರಂದು ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿ ಅರ್ಜಿ ವಿಚಾರಣೆ ಮುಂದೂಡಿತು.
ಕಳೆದು ಹೋಗಿದ್ದ ಬಾಲಕ ಫೇಸ್‌ಬುಕ್‌ನಿಂದಾಗಿ ಮತ್ತೆ ಹೆತ್ತವರ ಮಡಿಲಿಗೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 12 =
Remember me
