ಗೋಕರ್ಣ:ಸೆ. 21ರಿಂದ ಆರಂಭವಾಗಲಿರುವ ರಾಜ್ಯ ವಿಧಾನಮಂಡಲದ ಅಧಿವೇಶನದಲ್ಲೇ ‘ಸಂಪೂರ್ಣ ಗೋಹತ್ಯಾ ನಿಷೇಧ ಮತ್ತು ಭಾರತೀಯ ಗೋತಳಿಗಳ ಸಂರಕ್ಷಣೆ-ಸಂವರ್ಧನೆಗೆ ಅನುವು ಮಾಡಿಕೊಡುವ ಮಸೂದೆ’ಯನ್ನು ಅಂಗೀಕರಿಸಬೇಕು ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಶ್ರೀರಾಮಚಂದ್ರಾಪುರದ ಭಾರತೀಯ ಗೋಪರಿವಾರ ವತಿಯಿಂದ ಅಭಯಾಕ್ಷರ ಅಭಿಯಾನದಡಿ ಒಂದು ಕೋಟಿಗೂ ಅಧಿಕ ಮಂದಿಯ ಪ್ರತ್ಯೇಕ ಹಕ್ಕೊತ್ತಾಯ ಪತ್ರಗಳನ್ನು ರಾಜ್ಯದ ಮುಖ್ಯಮಂತ್ರಿ ಹಾಗೂ ದೇಶದ ಪ್ರಧಾನಿಯವರಿಗೆ ಸಲ್ಲಿಸಲಾಗಿದೆ. ಪಕ್ಷಭೇದ, ಧರ್ಮಭೇದ ಮರೆತು ನಾಡಿನ ಎಲ್ಲ ಸ್ತರಗಳ ಗಣ್ಯರು ಹಕ್ಕೊತ್ತಾಯ ಮಂಡಿಸಿದ್ದು, ಸರ್ಕಾರ ಇನ್ನು ವಿಳಂಬ ಮಾಡದೆ ಪ್ರಸಕ್ತ ಅಧಿವೇಶನದಲ್ಲೇ ಗೋಹತ್ಯೆ ನಿಷೇಧದ ಮಸೂದೆ ಅಂಗೀಕರಿಸಬೇಕು ಎಂದು ಸ್ವಾಮೀಜಿ ಆಗ್ರಹಿಸಿದ್ದಾರೆ.
ಗೋವು ಇಲ್ಲದ ಬದುಕನ್ನು ಕಲ್ಪಿಸಿಕೊಳ್ಳಲೂ ಅಸಾಧ್ಯ. ಆದ್ದರಿಂದ ಗೋವಿನ ವಿಚಾರದಲ್ಲಿ ರಾಜಕೀಯ ಮಾಡದೇ ಎಲ್ಲ ಪಕ್ಷಗಳು ಈ ಮಸೂದೆಯನ್ನು ಬೆಂಬಲಿಸಿ ಸರ್ವಾನುಮತದಿಂದ ಅಂಗೀಕರಿಸಿ ಇಡೀ ದೇಶಕ್ಕೆ ಮಾದರಿಯಾಗಬೇಕು ಎಂದು ಸಲಹೆ ಮಾಡಿದ್ದಾರೆ.
ಗೋವುಗಳ ರಕ್ಷಿಸಲು ಪ್ರತಿ ಜಿಲ್ಲೆಯಲ್ಲಿ ಗೋಸ್ವರ್ಗ ನಿರ್ಮಿಸಬೇಕು. ಈಗಾಗಲೇ ಉತ್ತರಕನ್ನಡದ ಸಿದ್ದಾಪುರದ ಬಳಿ ಸಾವಿರಕ್ಕೂ ಹೆಚ್ಚು ಗೋವುಗಳ ಗೋಸ್ವರ್ಗ ನಿರ್ಮಿಸಿ ಯಶಸ್ವಿಯಾಗಿ ನಿರ್ವಹಿಸಿಕೊಂಡು ಬರುತ್ತಿರುವ ಶ್ರೀಮಠ ಇದಕ್ಕೆ ಅಗತ್ಯ ತಾಂತ್ರಿಕ ನೆರವು ನೀಡಲು ಸಿದ್ಧವಿದೆ. ರಾಜ್ಯದ ಪ್ರವಾಸಿ ತಾಣಗಳಲ್ಲಿ ಸರ್ಕಾರವೇ ಗವ್ಯೋತ್ಪನ್ನ ಮಾರಾಟ ಘಟಕಗಳನ್ನು ಸ್ಥಾಪಿಸಬೇಕು ಎಂದೂ ಅವರು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
