ಬೆಂಗಳೂರು:ಇಂದು ಕರ್ನಾಟಕದಲ್ಲಿ ಭಾರತ್​ ಜೋಡೋ ಯಾತ್ರೆ ಪೂರ್ಣಗೊಳಿಸಿದ ಕಾಂಗ್ರೆಸ್​ ನಾಯಕ ಹಾಗೂ ವಯನಾಡು ಸಂಸದ ರಾಹುಲ್​ ಗಾಂಧಿ ಅವರು ಕರ್ನಾಟಕದ ಜನತೆಗೆ ಪತ್ರವೊಂದನ್ನು ಬರೆಯುವ ಮೂಲಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ರಾಯಚೂರಿನಲ್ಲಿ ಅಂತ್ಯಗೊಂಡ ಭಾರತ್​ ಜೋಡೋ ಯಾತ್ರೆ ಇದೀಗ ತೆಲಂಗಾಣಕ್ಕೆ ಕಾಲಿಟ್ಟಿದೆ.
ರಾಯಚೂರು ಜಿಲ್ಲೆಯ ಯರಮರಸ್​ನ ಕೃಷ್ಣಾ ನದಿಯ ತಟದಿಂದ ಕರ್ನಾಟಕದ ಜನತೆಗೆ ರಾಹುಲ್ ಗಾಂಧಿಯವರ ಸಂದೇಶ ಎಂಬ ಶೀರ್ಷಿಕೆಯುಳ್ಳು ಪತ್ರದಲ್ಲಿ ಕರ್ನಾಟಕದಲ್ಲಿ ನಡೆದ ಪಾದಯಾತ್ರೆಯ ಕ್ಷಣಗಳನ್ನು ನೆನೆಯುತ್ತಾ, ಕರ್ನಾಟಕ ಜನತೆಗೆ ರಾಹುಲ್​ ಧನ್ಯವಾದ ತಿಳಿಸಿದ್ದಾರೆ.

ರಾಹುಲ್​ ಸಂದೇಶ ಈ ಕೆಳಕಂಡಂತಿದೆಚಾಮರಾಜನಗರದ ಬಂಡೀಪುರ ಅರಣ್ಯದ ಹೊರವಲಯದಿಂದ ಹೊರಟ ಭಾರತ ಜೋಡೋ ಯಾತ್ರೆಯು ಸಾಂಸ್ಕೃತಿಕ ರಾಜಧಾನಿ ಮೈಸೂರು ಮೂಲಕ ಸಾಗಿ, ಕಾವೇರಿ, ತುಂಗಭದ್ರಾ, ಕೃಷ್ಣಾ ನದಿಗಳನ್ನು ದಾಟುತ್ತಾ ರಾಯಚೂರಿನ ಹತ್ತಿ ಗದ್ದೆಗಳ ಬಳಿ ಕರ್ನಾಟಕದಲ್ಲಿ ಸುಧೀರ್ಘ 22ನೇ ದಿನದಂದು ತನ್ನ ಪಯಣವನ್ನು ಪೂರ್ಣಗೊಳಿಸಿದೆ.
ಕರ್ನಾಟಕದ ಮಹಾಕವಿ ಕುವೆಂಪು ಅವರು ಈ ಭೂಮಿಯನ್ನು “ಸರ್ವ ಜನಾಂಗದ ಶಾಂತಿಯ ತೋಟ” ಎಂದು ಬಣ್ಣಿಸಿದ್ದರು. ಇದು ಖಂಡಿತ ಶಾಂತಿ ಹಾಗೂ ಸಾಮರಸ್ಯದ ನಾಡು. ಭಾರತ ಜೋಡೋ ಯಾತ್ರೆಯ ಮೂಲಕ ಈ ಮಾತು ಮತ್ತೊಮ್ಮೆ ಸಾಬೀತಾಗಿದೆ. ಕರ್ನಾಟಕದ ಜನರು ಈ ಯಾತ್ರೆಗೆ ತಮ್ಮ ಅಭೂತಪೂರ್ವ ಬೆಂಬಲ ನೀಡಿ ಸ್ಪಂದಿಸಿದ್ದಾರೆ. ಅದಕ್ಕಾಗಿ ನಾವು ನಮ್ಮ ಹೃತ್ಪೂರ್ವಕ ಧನ್ಯವಾದಗಳು ಹಾಗೂ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ.

ಯಾತ್ರೆಯು ಕರ್ನಾಟಕದ ಮೂಲಕ ಸಾಗುವ ವೇಳೆ, ಇಲ್ಲಿನ ಜನರ ಅಪರಿಮಿತ ಸಾಮರ್ಥ್ಯವನ್ನು ದುರ್ಬಲಗೊಳಿಸಲಾಗುತ್ತಿದೆ ಎನ್ನುವುದು ಸ್ಪಷ್ಟವಾಯಿತು. ವಿವಿಧ ಬೆಳೆ ಬೆಳೆಯುವ ಪ್ರತಿಯೊಂದು ಪ್ರದೇಶದ ರೈತರೂ ಹೆಚ್ಚುತ್ತಿರುವ ವೆಚ್ಚಗಳು, ಅನಿಶ್ಚಿತ ಇಳುವರಿ ಹಾಗೂ ಬೆಲೆ ಏರಿಳಿತದಿಂದ ತಮ್ಮ ಕುಟುಂಬಗಳನ್ನ ನಿರ್ವಹಿಸಲು ಕಷ್ಟಪಡುತ್ತಿದ್ದಾರೆ.
ನಾಡಿನ ಯುವಕರು ಎಷ್ಟೇ ಪ್ರಯತ್ನಿಸಿದರೂ, ತಮ್ಮ ಆಕಾಂಕ್ಷೆಗಳನ್ನು ಪೂರೈಸುವ ಉದ್ಯೋಗಾವಕಾಶಗಳನ್ನು ಕಂಡುಕೊಳ್ಳಲು ಸಾಧ್ಯವಾಗುತ್ತಿಲ್ಲಾ. ಸಣ್ಣ ಉದ್ಯಮಿಗಳು ಅಸಮರ್ಪಕ ಸಹಕಾರ ಅಥವಾ ಬೆಂಬಲವೇ ಇಲ್ಲದೇ ಉದ್ಯಮವನ್ನು ಮುಚ್ಚುತ್ತಿದ್ದಾರೆ, ಹಾಗೇ ಮಾರುಕಟ್ಟೆಯನ್ನೂ ಸಹ ಈ ಸರ್ಕಾರ ಕೇವಲ ಕೆಲವೇ ಕೆಲವು ಉದ್ಯಮಿಗಳ ಪರವಾಗಿ ಮಾಡಿದೆ. ಉದ್ಯೋಗ ಖಾತ್ರಿ ಯೋಜನೆಯ ಕಾರ್ಮಿಕರು, ಮಹಿಳಾ ಕಾರ್ಮಿಕರು, ನೇಕಾರರು ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಜನರು ಆದಾಯ ಗಳಿಕೆಯಲ್ಲಿ ಸೋಲುತ್ತಿದ್ದಾರೆ. ಸಮಾಜದ ಶೋಷಿತ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರು ದ್ವೇಷ ಮತ್ತು ಹಿಂಸೆಯನ್ನು ಎದುರಿಸುತ್ತಿದ್ದಾರೆ. ರಾಜ್ಯದ ಭಾಷೆಗಳನ್ನ, ವೈವಿಧ್ಯಮಯ ಸಂಸ್ಕೃತಿಯನ್ನ ಹಾಗೂ ಇತಿಹಾಸವನ್ನ ತಿರುಚಿ ನಾಶಪಡಿಸಲಾಗುತ್ತಿದೆ.

‘ಕಳಬೇಡ ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯ ಪಡಬೇಡ’ ಎಂದು ಗುರು ಬಸವಣ್ಣನವರು ಹೇಳಿದ್ದರು. ಕರ್ನಾಟಕದಲ್ಲಿ ಅವರ ಬೋಧನೆಗಳಿಗೆ ತದ್ವಿರುದ್ಧವಾಗಿ ಬಿಜೆಪಿ ನಡೆದುಕೊಳ್ಳುತ್ತಿದೆ. ಇಡೀ ದೇಶಕ್ಕೆ ಬೆಳವಣಿಗೆಯ ದಾರಿದೀಪವಾಗಿದ್ದ ಕರ್ನಾಟಕ ರಾಜ್ಯ ಇಂದು ‘40% ಕಮಿಷನ್’ ಸರ್ಕಾರಕ್ಕೆ ಕುಖ್ಯಾತಿಗಳಿಸಿದ್ದು, ಬಿಜೆಪಿಯ “ಸೂಟು-ಬೂಟಿನ ಲೂಟಿ ಸರ್ಕಾರ”ಕ್ಕೆ ತಕ್ಕ ಉದಾಹರಣೆಯಾಗಿದೆ. ಉದ್ಯೋಗಕ್ಕಾಗಿ ಲಂಚ, ಗುತ್ತಿಗೆಗೆ ಲಂಚ, ಜನ ಸಾಮಾನ್ಯರ ಕೆಲಸಕ್ಕೆ ಲಂಚ, ಕರ್ನಾಟಕದಲ್ಲಿ ಬಿಜೆಪಿಗೆ ಮಾರಾಟವಾಗದ ಉಳಿದ ಯಾವುದೇ ಸರ್ಕಾರೀ ಸೇವೆ ಇಲ್ಲ. ಸಾಮಾಜಿಕ ಸೌಹಾರ್ದತೆ ಮತ್ತು ಸಾರ್ವಜನಿಕ ವಲಯದ ಬೆಳೆವಣಿಗೆ ಕುಂಠಿತವಾಗಿದ್ದು, ಅದು ಬಡವರು ಹಾಗೂ ದುರ್ಬಲರನ್ನು ಹೆಚ್ಚು ಭಾದಿಸುತ್ತಿದೆ ಮತ್ತು ಆರ್ಥಿಕ ಪ್ರಗತಿಗೆ ಪಾರ್ಶ್ವವಾಯು ಹಿಡಿಯುವಂತೆ ಮಾಡಿದೆ.
ಶಾಂತಿಯ ತೋಟವಾದ ಕರ್ನಾಟಕವನ್ನು ಬಿಜೆಪಿಯ ದ್ವೇಷ ಮತ್ತು ದುರಾಡಳಿತದ ಪ್ರಯೋಗಾಲಯವನ್ನಾಗಿ ಮಾಡಲು ಕಾಂಗ್ರೆಸ್ ಪಕ್ಷ ಎಂದಿಗೂ ಬಿಡುವುದಿಲ್ಲ. ನಮ್ಮ ರಾಜ್ಯ ನಾಯಕರು, ಕರ್ನಾಟಕದ ಶ್ರೀಮಂತ ಸಂಸ್ಕೃತಿ ಮತ್ತು ಕೋಟ್ಯಂತರ ಕನ್ನಡಿಗರ ಬೆಂಬಲದಿಂದ, ಅವಿರತ ಪ್ರಯತ್ನಗಳ ಮೂಲಕ ಪ್ರೀತಿ, ಶಾಂತಿ ಹಾಗೂ ಸೌಹಾರ್ದತೆಯ ಹಾದಿಯಲ್ಲಿ ಈ ಅದ್ಭುತ ರಾಜ್ಯದ ನಿಜವಾದ ಸಾಮರ್ಥ್ಯವನ್ನು ನಾವು ಅನಾವರಣಗೊಳಿಸುವ ದಿನಗಳು ಶೀಘ್ರದಲ್ಲೇ ಬರಲಿವೆ ಎನ್ನುತ್ತಾ ರಾಹುಲ್​ ಗಾಂಧಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಇಂದು ಭಾರತ-ಪಾಕ್ ಮೆಗಾ ಫೈಟ್​: ರೋಹಿತ್ ಶರ್ಮ ಪಡೆಗೆ ಟಿ20 ವಿಶ್ವಕಪ್​ನಲ್ಲಿ ಶುಭಾರಂಭದ ತವಕ

ಆರೋಗ್ಯ ಕೇಂದ್ರಕ್ಕೆ ನುಗ್ಗಿ ನರ್ಸ್​ ಮೇಲೆ ಸಾಮೂಹಿಕ ಅತ್ಯಾಚಾರ: ಓರ್ವ ಅಪ್ರಾಪ್ತ ಸೇರಿ ಮೂವರ ಬಂಧನ

ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ನಿಧನ; ಜನಸಂಕಲ್ಪ ಯಾತ್ರೆ ಮುಂದೂಡಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 8 =
Remember me
