ಬೆಂಗಳೂರು:ಉತ್ತರ ಕನ್ನಡ, ಕರಾವಳಿಯಲ್ಲಿ ಮಳೆ ಮತ್ತೆ ಚುರುಕುಗೊಂಡಿದೆ. ಕಾರವಾರದ ರಾಷ್ಟ್ರೀಯ ಹೆದ್ದಾರಿ 66ರ ಹೊನ್ನಾವರ ಕರ್ನಲ್​ ಹಿಲ್​ ಬಳಿ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿತ್ತು. ಭಟ್ಕಳ, ಹೊನ್ನಾವರ, ಕಾರವಾರ, ಅಂಕೋಲಾ ತಾಲೂಕಿನ ವಿವಿಧೆಡೆ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿತ್ತು. ಅರಬ್ಬಿ ಸಮುದ್ರದ ಕಡೆಯಿಂದ ಭಾರಿ ಗಾಳಿ ಬೀಸುತ್ತಿದ್ದು ಸಮುದ್ರ ಕೊರೆತ ಹೆಚ್ಚಿದೆ.
ಸೋಮವಾರ ಕೂಡ ಮಳೆ ಮುಂದುವರಿಯುವ ಲಕ್ಷಣಗಳಿವೆ. ಧಾರವಾಡ, ಗದಗ, ಹಾವೇರಿ ಜಿಲ್ಲೆಯಲ್ಲಿ ಆಗಾಗ ಮಳೆ ಸುರಿಯುತ್ತಿದ್ದು, ಪಶ್ಚಿಮ ದಿಕ್ಕಿನಿಂದ ಬೀಸುವ ಗಾಳಿಯ ವೇಗ ಹೆಚ್ಚಿದಲ್ಲಿ ಅರೆಮಲೆನಾಡು ಮತ್ತು ಬಯಲುಸೀಮೆ ಭಾಗದಲ್ಲಿ ಮಳೆ ಚುರುಕಾಗುವ ಸಾಧ್ಯತೆಯಿದೆ.ಶಿವಮೊಗ್ಗದಲ್ಲಿ ಮಳೆ ಪ್ರಮಾಣ ಕೊಂಚ ತಗ್ಗಿದೆ. ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ಭಾಗದಲ್ಲಿ ಮುಂದುವರಿದಿದ್ದರೂ ಸರಾಸರಿ ಪ್ರಮಾಣ 27.37 ಮಿ.ಮೀ.ಗೆ ಇಳಿಕೆಯಾಗಿದೆ.
ಶೇ.25 ಬಾಕಿ ಮೊತ್ತ ಬಿಡುಗಡೆ ಡಿಸಿಎಂ ಒಪ್ಪಿಗೆ:ಪ್ರತಿಭಟನೆ ಹಿಂಪಡೆದ ಬಿಬಿಎಂಪಿ ಗುತ್ತಿಗೆದಾರರ ಸಂಘಭರ್ಜರಿ ವರ್ಷಧಾರೆ:ಮೂಡಿಗೆರೆ, ಕಲಬುರಗಿ, ಹಾಸನ, ಆಗುಂಬೆಯಲ್ಲಿ ಭಾನುವಾರ ವರ್ಷಧಾರೆಯಾಗಿದೆ. ಉಡುಪಿ, ದ.ಕನ್ನಡ, ಉ.ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮುಂದಿನ 2 ದಿನ ಭಾರಿ ಮಳೆ ಬೀಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್​ ಅರ್ಲಟ್​ ಘೋಷಿಸಿದೆ. ಕರಾವಳಿ ತೀರದುದ್ದಕ್ಕೂ ಪ್ರತಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ. ಮೂಲ್ಕಿಯಿಂದ ಮಂಗಳೂರಿನವರೆಗೆ, ಉತ್ತರ ಕನ್ನಡದ ಮಾಜಾಳಿಯಿಂದ ಭಟ್ಕಳವರೆಗೆ ಎತ್ತರದ ಅಲೆಗಳು ಏಳಲಿವೆ. ಉಡುಪಿಯ ಬೈಂದೂರಿನ ಕಾಪುವರೆಗೆ ಹೈ ವೇವ್​ ವಾಚ್​ ಅರ್ಲಟ್​ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಇಲಾಖೆ ಎಚ್ಚರಿಕೆ ಕೊಟ್ಟಿದೆ. ಬೆಳಗಾವಿ, ಬೀದರ್​, ಕಲಬುರಗಿ, ಯಾದಗಿರಿಯಲ್ಲಿ ಜು.8ರಿಂದ ಮುಂದಿನ ಎರಡು ದಿನ ಯೆಲ್ಲೋ ಅರ್ಲಟ್​ ಇರಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − nine =
Remember me
