ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಸಂದರ್ಭದಲ್ಲಿ ಹಿರಿಯ ಸಂಗೀತ ಸಾಧಕರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ 2023-24ನೇ ಸಾಲಿನ ‘ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ’ಗೆ ಸಂಗೀತ ಸಾಧಕಿ ಡಾ. ಪದ್ಮಾಮೂರ್ತಿ ಭಾಜನರಾಗಿದ್ದಾರೆ.
ಕ್ಲಾರಿಯೋನೆಟ್ ವಾದಕ ಡಾ. ಪಂಡಿತ್ ನರಸಿಂಹಲು ವಡವಾಟಿ ಅವರ ಅಧ್ಯಕ್ಷತೆಯಲ್ಲಿ ರಚಿಸಿದ್ದ ಸಮಿತಿ ಪುರಸ್ಕೃತರ ಆಯ್ಕೆ ಮಾಡಿದೆ. ಅರಮನೆಯ ಮುಖ್ಯ ವೇದಿಕೆಯಲ್ಲಿ ಅ. 15ರಂದು ನಡೆಯುವ ನಾಡಹಬ್ಬ ದಸರಾ ಉದ್ಘಾಟನೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು 5 ಲಕ್ಷ ರೂ. ನಗದು, ಸರಸ್ವತಿ ವಿಗ್ರಹ, ಪ್ರಶಸ್ತಿ ಲಕ ಒಳಗೊಂಡಿರುತ್ತದೆ.
ಪ್ರಶಸ್ತಿಗೆ ಭಾಜನರಾಗಿರುವ 91 ವರ್ಷದ ಡಾ. ಪದ್ಮಾ ಮೂರ್ತಿ ಅವರು, ಬಿ. ಎಸ್. ಸಿ., ಎಂ. ಎ., ಪಿ. ಹೆಚ್. ಡಿ., ಡಿ. ಲಿಟ್. ಪದವೀಧರರು. ಸಂಗೀತದಲ್ಲಿ ವಿದ್ವತ್, ಸೈಕಾಲಜಿ ಆಫ್ ಮ್ಯೂಸಿಕ್ ಎಂಬ ವಿಷಯಕ್ಕೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿ.ಹೆಚ್.ಡಿ ಪದವಿ ಪಡೆದವರು. ಆಕಾಶವಾಣಿ ಕಲಾವಿದೆ ಆಗಿದ್ದ ಇವರು ಲೇಖಕಿಯೂ ಹೌದು. ಮೈಸೂರು ವಾಸುದೇವಾಚಾರ್ಯ, ಟಿ. ಚೌಡಯ್ಯ, ಟಿ. ಪುಟ್ಟಸ್ವಾಮಯ್ಯನವರ ಬಳಿ ಸಂಗೀತಾಭ್ಯಾಸ ಮಾಡಿದ್ದು, ಎಚ್. ಎಸ್. ಕೃಷ್ಣಮೂರ್ತಿ, ಆರ್ . ಎಸ್. ಕೇಶವಮೂರ್ತಿಯವರ ಬಳಿ ವೀಣಾ ವಾದನ ಕಲಿತು ದೇಶ ವಿದೇಶಗಳ ವೇದಿಕೆಯಲ್ಲಿ ಸಂಗೀತ ಪ್ರಸ್ತುತ ಪಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + one =
Remember me
