ಬೆಂಗಳೂರು:ರಾಮನಗರದ ರಾಮದೇವರ ಬೆಟ್ಟದಲ್ಲಿರುವ ರಾಮನ ದೇವಸ್ಥಾನವನ್ನು ಪರಿಸರ ಸ್ನೇಹಿಯಾಗಿ ಅಭಿವೃದ್ಧಿಪಡಿಸಲು ಸರಕಾರ ತೀರ್ಮಾನಿಸಿದ್ದು, ಮಂಗಳವಾರ ಆ ಸಂಬಂಧದ ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ವಿಕಾಸಸೌಧದಲ್ಲಿ ಈ ಕಾರ್ಯಕ್ರಮ ನಡೆಯಿತು.
ಬಳಿಕ ಈ ಬಗ್ಗೆ ಮಾತನಾಡಿದ ಸಚಿವರು, “ರಾಮದೇವರ ಬೆಟ್ಟದಲ್ಲಿ ಪರಿಸರ ಸೂಕ್ಷ್ಮತೆಯನ್ನು ಗಮನದಲ್ಲಿ ಇರಿಸಿಕೊಂಡು ಈ ಕೆಲಸವನ್ನು ಕೈಗೆತ್ತಿಕೊಳ್ಳಲಾಗುವುದು. ಜತೆಗೆ ಇಲ್ಲಿರುವ ರಣಹದ್ದುಗಳ ಆವಾಸ ಸ್ಥಾನಕ್ಕೂ ಯಾವುದೇ ಧಕ್ಕೆ ಆಗದಂತೆ ನೋಡಿಕೊಳ್ಳಲಾಗುವುದು. ಮುಜರಾಯಿ ಇಲಾಖೆಯಿಂದ ನಿರ್ಮಿತಿ ಕೇಂದ್ರಕ್ಕೆ ವಿಸ್ತೃತ ಯೋಜನಾ ವರದಿ (ಡಿಪಿಆರ್​) ಕಳಿಸಿ ಕೊಡಲಾಗುವುದು. ಈ ವಿಚಾರದಲ್ಲಿ ಯಾವುದೇ ಕಾನೂನಿನ ತೊಡಕು ಎದುರಾಗದಂತೆ ಮುಂದಿನ ಹೆಜ್ಜೆ ಇಡಲಾಗುವುದು” ಎಂದರು.
ಇದನ್ನೂ ಓದಿ:‘ಇಂಜುರಿ’ ಪ್ರೀಮಿಯರ್​ ಲೀಗ್​! ಶ್ರೀಮಂತ ಟಿ20 ಟೂರ್ನಿಗೆ ಮುನ್ನ ಕಾಡುತ್ತಿದೆ ಗಾಯ
19 ಎಕರೆ ವಿಸ್ತೀರ್ಣ ಹೊಂದಿರುವ ರಾಮದೇವರ ಬೆಟ್ಟವನ್ನು ದಕ್ಷಿಣ ಭಾರತದ ಅಯೋಧ್ಯೆಯಾಗಿ ಬೆಳೆಸಬೇಕೆಂಬುದು ಸ್ಥಳೀಯರ ಬಹುಕಾಲದ ಆಸೆಯಾಗಿದೆ. ಇದಕ್ಕೆ 100-120 ಕೋಟಿ ರೂ. ಖರ್ಚಾಗಬಹುದು. ಮುಜರಾಯಿ ಇಲಾಖೆ ಮತ್ತು ಮುಖ್ಯಮಂತ್ರಿಗಳ ಅನುಮತಿಯನ್ನು ಪಡೆದುಕೊಂಡು, ಶಿಲಾನ್ಯಾಸ ಮಾಡಲಾಗುವುದು. ಆದರೆ ಇದಕ್ಕೆ ಇನ್ನೂ ದಿನಾಂಕ ನಿಗದಿಪಡಿಸಿಲ್ಲ ಎಂದು ಅವರು ತಿಳಿಸಿದರು.
“ರಾಮ ಮಂದಿರ ಯೋಜನೆಗೂ ಚುನಾವಣೆಗೂ ಸಂಬಂಧವಿಲ್ಲ. ದೇವರ ಕೆಲಸ ಮಾಡುವುದಕ್ಕೆ ಇದೆಲ್ಲ ಬೇಕಿಲ್ಲ. ಇದೇನಿದ್ದರೂ ಶ್ರೀರಾಮ ದೇವರ ಕೆಲಸವಷ್ಟೆ. ಆರಂಭಿಕವಾಗಿ ಯೋಜನಾ ವರದಿ ಸಿದ್ಧಪಡಿಸಲು 40 ಲಕ್ಷ ರೂ.ಗಳನ್ನು ನೀಡಲಾಗಿದೆ. ಮುಂದಿನ ದಿನಗಳಲ್ಲಿ ಈ ಯೋಜನೆಯನ್ನು ಯಾವ ರೀತಿ ಕೈಗೆತ್ತಿಕೊಳ್ಳಬೇಕು ಎನ್ನುವುದನ್ನು ಮುಖ್ಯಮಂತ್ರಿ ಬಳಿ ಚರ್ಚಿಸಿ ತೀರ್ಮಾನಿಸಲಾಗಿದೆ” ಎಂದು ಅವರು ಹೇಳಿದರು.ಇದನ್ನೂ ಓದಿ:ಪ್ಯಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಲು ನೀಡಿದ್ದ ಗಡುವು ವಿಸ್ತರಣೆ
ಈ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಈ ವರ್ಷದ ಬಜೆಟ್​ನಲ್ಲೂ ಪ್ರಕಟಿಸಿದ್ದಾರೆ. ಇದರಂತೆ ಯೋಜನೆ ಜಾರಿಗೆ ಬರಲಿದೆ. ಎರಡು ತಿಂಗಳ ಹಿಂದೆ ರಾಮನಗರದ ಸ್ಥಳೀಯ ಭಕ್ತಾದಿಗಳ ಜತೆ ಅಯೋಧ್ಯೆಗೆ ಭೇಟಿ ನೀಡಲಾಗಿತ್ತು. ಅಲ್ಲಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರೊಂದಿಗೂ ಈ ವಿಚಾರವನ್ನು ಚರ್ಚಿಸಲಾಗಿತ್ತು ಎಂದು ಅವರು ನುಡಿದರು.
ಈ ಸಂದರ್ಭದಲ್ಲಿ ಪ್ರಾತ್ಯಕ್ಷಿಕೆಯನ್ನು ಸಿದ್ಧಪಡಿಸಿರುವ ಅರ್ಬನ್‌ ಡಿಸೈನರ್ಸ್ ಸಂಸ್ಥೆಯ ಯಶಸ್ವಿನಿ ಶರ್ಮಾ ಅವರು ಉಪಸ್ಥಿತರಿದ್ದರು.
ಇದನ್ನೂ ಓದಿ:ಪಿಎಸ್​ಐ ನೇಮಕಾತಿ ಹಗರಣ; ಗರ್ಲ್​ಫ್ರೆಂಡ್ ಸಹಾಯದಿಂದ ತಲೆಮರೆಸಿಕೊಂಡಿದ್ದ PSI ನವೀನ್ ಬಂಧನ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × four =
Remember me
