ರಾಮನಗರ: ಮೈಸೂರು-ಬೆಂಗಳೂರು ನಡುವಿನ ದಶಪಥ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟಿಟಿ ವಾಹನ ಕ್ಯಾಂಟರ್​ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ಅನೇಕ ಮಂದಿಗೆ ಗಂಭೀರ ಗಾಯಗಳಾಗಿವೆ.
ರಾಮನಗರ ಜಿಲ್ಲೆಯ ಚನ್ನಪಟ್ಟಣ ಬಳಿಯ ದಶಪಥ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ. ಮೃತರನ್ನು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿಕ್ಕಾಡೆ ಗ್ರಾಮದ ಕೃಷ್ಷ ಮತ್ತು ಮಹೇಶ್​ ಎಂದು ಗುರುತಿಸಲಾಗಿದೆ. ಟಿಟಿಯಲ್ಲಿದ್ದ ಪ್ರಯಾಣಿಕರೆಲ್ಲರೂ ಚಿಕ್ಕಾಡೆ ಗ್ರಾಮದವರು ಎಂದು ತಿಳಿದುಬಂದಿದೆ.
ತಿರುಪತಿ ತಿಮ್ಮಪ್ಪನ ದರ್ಶನ ಮುಗಿಸಿ ಹಿಂದಿರುಗುವಾಗ ಚನ್ನಪಟ್ಟಣದ ಮುದಗೆರೆ ಬಳಿ ಟಿಟಿ ವಾಹನ ಕ್ಯಾಂಟರ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಟಿಟಿ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಮೃತದೇಹಗಳು ಹಾಗೂ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)
ಅಮೆರಿಕ ಮೂಲದ ಪಾಕ್​ ನಟನನ್ನು ಮದುವೆಯಾದ ಇಮ್ರಾನ್​ ಖಾನ್​ ಮಾಜಿ ಪತ್ನಿ: ಇಬ್ಬರಿಗೂ ಇದು 3ನೇ ವಿವಾಹ!

ಪತಿ-ಪತ್ನಿ ವರ್ಗಾವಣೆ ಷರತ್ತುಬದ್ಧ ಒಪ್ಪಿಗೆ

ದಿಲ್ಲೀಲಿ ಬಿಜೆಪಿ ರಣತಂತ್ರ: ಚುನಾವಣಾ ಸಿದ್ಧತೆಗೆ ಸೋಮವಾರ ಮಹತ್ವದ ಸಭೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + eighteen =
Remember me
