ರಾಮನಗರ:ಮಂಡ್ಯ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಬೆಡ್‌ಶೀಟ್ ವ್ಯಾಪಾರ ಮಾಡುತ್ತ ಸುತ್ತಾಡುತ್ತಿದ್ದ ಈತ ಬೆಂಗಳೂರಿನ ಕಿತ್ತಗನೂರು ನಿವಾಸಿ. ಈಗ ಪೊಲೀಸರ ಅತಿಥಿಯಾಗಿದ್ದಾನೆ. ಜನರ ಕಣ್ಣಿಗೆ ಮಣ್ಣೆರಚಲು ಆತ ಮಾಡುತ್ತಿದ್ದ ಬಿಸಿನೆಸ್ಸೇ ಬೇರೆ. ರಾತ್ರಿಯಾಗುತ್ತಿದ್ದಂತೆ ಮಾಡುತ್ತಿದ ಕೆಲಸವೇ ಬೇರೆ.
ಮೂಲತಃ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ದಿಡಗ ಗ್ರಾಮದ ಉದಯ್ ಕುಮಾರ್ ಅಲಿಯಾಸ್ ಅಶೋಕ (25) ಬಂಧಿತ. ಆತನನ್ನು ಬಂಧಿಸಿರುವ ಮಾಗಡಿ ಪೊಲೀಸರು ಸುಮಾರು 25 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅನೂಪ್ ಎ.ಶೆಟ್ಟಿ ಈ ಕುರಿತು ವಿವರ ನೀಡಿದರು.
ಇದನ್ನೂ ಓದಿರಿvideo/ ತರಕಾರಿ-ಹಣ್ಣು ತುಂಬುವ ಕ್ರೇಟ್​ನಲ್ಲಿದೆ 85 ಕೆ.ಜಿ. ಗಾಂಜಾ!
ಮಾಗಡಿ ಠಾಣಾ ವ್ಯಾಪ್ತಿಯ ಹರ್ತಿ ಗ್ರಾಮದ ರೇಣುಕಯ್ಯ ಅವರ ಮನೆಯಲ್ಲಿ ಕಳವು ನಡೆದು ಸುಮಾರು 1.20 ಲಕ್ಷ ರೂ. ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿತ್ತು. ವೃತ್ತ ನಿರೀಕ್ಷಕ ಬಿ.ಎಸ್. ಮಂಜುನಾಥ್ ನೇತೃತ್ವದಲ್ಲಿ ತನಿಖೆ ಕೈಗೊಳ್ಳಲಾಗಿತ್ತು. ನಂತರ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಮಾಗಡಿಯ 2 ಪ್ರಕರಣ, ಮಂಡ್ಯ ಮತ್ತು ತುಮಕೂರಿನ 15 ಪ್ರಕರಣಗಳಲ್ಲಿ ಭಾಗಿಯಾಗಿರುವುದು ದೃಢಪಟ್ಟಿತು. ಬಂಧಿತನಿಂದ 560 ಗ್ರಾಂ ಚಿನ್ನ ಮತ್ತು 3 ಕೆ.ಜಿ. ಬೆಳ್ಳಿ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಇದರ ಒಟ್ಟು ಮೌಲ್ಯ ಸುಮಾರು 25 ಲಕ್ಷ ರೂ.ಗಳಾಗಿದೆ.
ಬೆಡ್‌ಶೀಟ್ ವ್ಯಾಪಾರಿಯಾದ ಈತ ಒಂಟಿ ಮನೆಗಳಲ್ಲಿ ಕಳವಿಗೆ ಸಂಚು ರೂಪಿಸುತ್ತಿದ್ದ. ಕಳವು ಮಾಡಿ ಬಂದ ಹಣದಿಂದ ಐಷಾರಾಮಿ ಜೀವನ ನಡೆಸುತ್ತಿದ್ದ. ಇದಕ್ಕಾಗಿ ಕದ್ದ ಹಣದಿಂದಲೇ ಒಂದು ಓಮ್ನಿ ಕಾರು, ಎರಡು ಬೈಕ್‌ಗಳನ್ನು ಖರೀದಿಸಿದ್ದ. ಇವುಗಳನ್ನೂ ಸಹ ವಶಕ್ಕೆ ಪಡೆಯಲಾಗಿದ್ದು, ಕಳವು ಮಾಡಿದ ಹಣದಿಂದಲೇ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಖರೀದಿಸಿದ್ದ ಒಂದು ನಿವೇಶನದ ದಾಖಲೆಯನ್ನು ವಶಕ್ಕೆ ಪಡೆಯಲಾಗಿದೆ.
ಬೇರೆ ಹೆಸರಿನಲ್ಲಿ ಟ್ವಿಟರ್ ಖಾತೆ ತೆರೆದು ಮೋದಿ ಅವಹೇಳನ ಮಾಡಿದವ ಅರೆಸ್ಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
