ಮಂಗಳೂರು:ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ ಸೋತಿರುವ ಬಿ.ರಮಾನಾಥ ರೈ, ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಆದರೆ, ಪಕ್ಷದಲ್ಲಿ ಸಕ್ರಿಯನಾಗಿ ಇರುವುದಾಗಿ ಹೇಳಿದ್ದಾರೆ.
ಇಂದು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್​ಗೆ ಹಿನ್ನಡೆಯಾಗಿದೆ. ಗೆದ್ದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಕಾಂಗ್ರೆಸ್ ಮೇಲೆ ವಿಶ್ವಾಸವನ್ನಿಟ್ಟು ಜನ ಮತ ನೀಡಿದ್ದಾರೆ. ಜಿಲ್ಲೆಯಲ್ಲಿ ಸೋತರೂ ರಾಜ್ಯದಲ್ಲಿ ಸರ್ಕಾರ ನಮ್ಮದೇ ಇದೆ. ಹೀಗಾಗಿ ಜಿಲ್ಲೆಯಲ್ಲಿ ಕಾರ್ಯಕರ್ತರು ಎದೆಗುಂದಬಾರದು ಎಂದರು.
ಇದು ನನ್ನ ಕಡೆಯ ಚುನಾವಣೆ ಎಂದು ಹೇಳಿದ್ದೆ. ಈಗ ಚುನಾವಣಾ ರಾಜಕೀಯದಿಂದ ದೂರವಿದ್ದರೂ ಪಕ್ಷದ ಕಾರ್ಯಕ್ರಮದಲ್ಲಿ ಮುಂಚೂಣಿಯಲ್ಲಿರುತ್ತೇನೆ. ಜಿಲ್ಲೆಯಲ್ಲಿ ಸೋತರೂ ಗೆದ್ದರೂ ಪಕ್ಷವನ್ನು ಪ್ರಬಲವಾಗಿ ಕಟ್ಟಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನವನ್ನು ರಾಜ್ಯದಲ್ಲಿ ಕಾಂಗ್ರೆಸ್ ಗಳಿಸಲಿದೆ, ಭವಿಷ್ಯದಲ್ಲಿ ಬಿಜೆಪಿ ಖಂಡಿತ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎಂದು ರೈ ಹೇಳಿದರು.
ಇದನ್ನೂ ಓದಿ:ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಮತ್ತೆ ಜೀವ ಬೆದರಿಕೆ!
ಬಂಟ್ವಾಳದಲ್ಲಿ ನನಗೆ ಸಣ್ಣ ಅಂತರದ ಸೋಲಾಗಿದೆ. ನನಗಿಂತಲೂ ಪಕ್ಷದಲ್ಲಿ ಹಿರಿಯರಿದ್ದಾರೆ. ಆದರೆ ನನ್ನ ಸ್ಪರ್ಧೆಗೆ ನಮ್ಮಲ್ಲಿ ಅಪಸ್ವರ ಬಂತು. ಹಾಗಾಗಿ ಈ ನಿರ್ಧಾರಕ್ಕೆ ಬಂದಿದ್ದೇನೆ. ಪಕ್ಷದ ವಿರುದ್ಧ ನಾನು ಈವರೆಗೂ ಒಂದೂ ಅಪಸ್ವರ ಎತ್ತಿಲ್ಲ, ಪಕ್ಷದ ಋಣವನ್ನು ಜೀವನ ಪರ್ಯಂತ ತೀರಿಸುತ್ತೇನೆ ಎಂದರು.
ಚುನಾವಣೆ ನಾವು ಗ್ರಹಿಸಿದ ರೀತಿ ಆಗುವುದಿಲ್ಲ. ಚುನಾವಣೆ ಗೆಲ್ಲುವ ವಿಶ್ವಾಸದಲ್ಲಿದ್ದೆ, ಸಮೀಕ್ಷೆಗಳೂ ಗೆಲ್ಲುವ ರೀತಿಯೇ ಇದ್ದವು. ಸೋಲಿನ ಬಗ್ಗೆ ಅವಲೋಕನ ಮಾಡುತ್ತಿದ್ದೇನೆ. ಪುತ್ತೂರು ಹೊರತುಪಡಿಸಿ ಬೇರೆ ಎಲ್ಲಾ ಕಡೆ ಹಿನ್ನಡೆಯಾಗಿದೆ ಎಂದು ರೈ ಹೇಳಿದರು. ಗ್ಯಾರಂಟಿ ಕಾರ್ಯಕ್ರಮ ಪ್ರಮಾಣವಚನ ಸ್ವೀಕಾರವಾದ ತಕ್ಷಣ ಅನುಷ್ಠಾನಕ್ಕೆ ಬರಲಿದೆ. ಕಾಂಗ್ರೆಸ್​ನ ಯೋಜನೆಗಳು ದಕ್ಷಿಣಕನ್ನಡ ಜಿಲ್ಲೆಗೆ ಹೆಚ್ಚು ಪ್ರಯೋಜನ ತಂದಿದೆ ಎಂದರು.
ಇದನ್ನೂ ಓದಿ:ಲಿಂಗಾಯತರನ್ನು ಸಿಎಂ ಮಾಡಲಿ ನೋಡೋಣ: ಕಾಂಗ್ರೆಸ್​ಗೆ ಮಾಜಿ ಸಚಿವ ನಿರಾಣಿ ಸವಾಲು
1985ರಿಂದಲೂ ಬಂಟ್ವಾಳ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದ ರಮಾನಾಥ ರೈ ಇದುವರೆಗೆ ಹನ್ನೆರಡು ಚುನಾವಣೆಗಳಲ್ಲಿ ಕಣಕ್ಕಿಳಿದಿದ್ದರು. ಆ ಪೈಕಿ 1985, 1989, 1994, 1999, 2008 ಮತ್ತು 2013ರಲ್ಲಿ ಗೆದ್ದು 6 ಸಲ ಶಾಸಕರಾಗಿ ಆಯ್ಕೆಯಾಗಿದ್ದರು. ಆದರೆ 2004, 2018 ಮತ್ತು 2023ರ ಚುನಾವಣೆಗಳಲ್ಲಿ ಸೋತಿದ್ದಾರೆ.
ಚುನಾವಣಾ ಫಲಿತಾಂಶದ ವಿರುದ್ಧ ನ್ಯಾಯಾಲಯದ ಮೊರೆ ಹೋಗಲು ಕಾಂಗ್ರೆಸ್ ಅಭ್ಯರ್ಥಿ ನಿರ್ಧಾರ

ಸೊಳ್ಳೆ ಕಡಿತದಿಂದ ಪುತ್ರನ ಸಾವು, ವಿಮೆ ಹಣಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿದ ತಾಯಿ: ಆಮೇಲೇನಾಯ್ತು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − four =
Remember me
