ಬೆಂಗಳೂರು: ರಾಮನಗರ, ಚನ್ನಪಟ್ಟಣ ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸುತ್ತಿರುವುದು ಕೇಂದ್ರ ಸರ್ಕಾರ ಕೈಗೊಂಡಿರುವ ಮಹತ್ವದ ನಿರ್ಧಾರ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸಾಂಸ್ಕೃತಿಕ ನಗರ ಮೈಸೂರು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಐತಿಹಾಸಿಕ, ಪಾರಂಪರಿಕ ಮಹತ್ವವುಳ್ಳ ರಾಮನಗರ, ಚನ್ನಪಟ್ಟಣ ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲು ಪ್ರಧಾನಿ ಮೋದಿ ಸಂಕಲ್ಪ ಮಾಡಿರುವುದು ಸಂತಸ ಉಂಟು ಮಾಡಿದೆ. 20.93 ಕೋಟಿ ರೂ. ವೆಚ್ಚದಲ್ಲಿ ಚನ್ನಪಟ್ಟಣ ರೈಲು ನಿಲ್ದಾಣ, 20.96 ಕೋಟಿ ರೂ.ವೆಚ್ಚದಲ್ಲಿ ರಾಮನಗರ ರೈಲು ನಿಲ್ದಾಣವನ್ನು ಸ್ಥಳೀಯ ಸಾಂಸ್ಕೃತಿಕ ಸೊಗಡಿನ ಮಾದರಿಯಲ್ಲಿಯೇ ಉನ್ನತೀಕರಿಸುತ್ತಿರುವುದು ಈ ಭಾಗದ ಜನರ ಆಶೋತ್ತರಗಳನ್ನು ಈಡೇರಿಸುವ ಬೃಹತ್ ಪ್ರಯತ್ನವಾಗಿದೆ ಎಂದು ತಿಳಿಸಿದ್ದಾರೆ. ನಿತ್ಯವೂ ಉದ್ಯೋಗ, ವ್ಯವಹಾರಕ್ಕಾಗಿ ಎರಡೂ ನಗರಗಳ ನಡುವೆ ಸಂಚರಿಸುವ ಜಿಲ್ಲೆಯ ಅಸಂಖ್ಯಾತ ಜನರಿಗೆ ಇದರಿಂದ ಅನುಕೂಲವೂ ಆಗಲಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four − two =
Remember me
