ಬೆಳಗಾವಿ:ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ.
ರಮೇಶ್ ಜಾರಕಿಹೊಳಿಗೆ ಕರೊನಾ ಪಾಸಿಟಿವ್​ ಬಂದಿದ್ದರಿಂದ ಗೋಕಾಕ್​ನ ಆಸ್ಪತ್ರೆಗೆ ಏ.4ರಂದು ದಾಖಲಾಗಿದ್ದರು. ಜಾರಕಿಹೊಳಿಯ ಕಾರು ಚಾಲಕ ಹಾಗೂ ಓರ್ವ ಅಡುಗೆ ಸಿಬ್ಬಂದಿಗೂ ಕರೊನಾ ಪಾಸಿಟಿವ್ ಬಂದಿದ್ದು, ಇವರಿಬ್ಬರೂ ಹೋಮ್ ಐಸೋಲೇಷನ್​ನಲ್ಲಿದ್ದಾರೆ.
ಶುಗರ್ ಮತ್ತು ಬಿಪಿ ಹೆಚ್ಚಾಗಿದ್ದರಿಂದ ಅವರನ್ನ ಕೋವಿಡ್ ವಾರ್ಡ್​ನ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡುತ್ತಿದ್ದೇವೆ. ಅವರು ಇನ್ನೂ ಮೂರ್ನಾಲ್ಕು ದಿನ ಐಸಿಯುನಲ್ಲೇ ಇರಬೇಕಾಗುತ್ತೆ ಎಂದು ವೈದ್ಯಾಧಿಕಾರಿ ಡಾ. ರವೀಂದ್ರ ಅಂಟಿನ್ ಹೇಳಿದ್ದರು. ಇಂದು(ಬುಧವಾರ) ಜಾರಕಿಹೊಳಿಯನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಗಿದ್ದು, ಹೋಂ ಐಸೋಲೇಷನ್​ನಲ್ಲಿ ಇರಲಿದ್ದಾರೆ.
ಇತ್ತ ವಿಚಾರಣೆಗೆ ಸಿಡಿ ಕೇಸ್​ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೋಟಿಸ್​ ನೀಡಿದ್ದು, ಕರೊನಾ ನೆಪದಲ್ಲಿ ವಿಚಾರಣೆಯಿಂದ ತಾತ್ಕಾಲಿಕ ರಿಲೀಫ್​ ಪಡೆಯಲೆಂದೇ ನಾಟಕ ಮಾಡಲಾಗುತ್ತಿದೆ ಎಂಬ ಟೀಕೆಯೂ ಕೇಳಿಬಂದಿತ್ತು. ಇದೀಗ ಹೋಂ ಐಸೋಲೇಷನ್​ಗೆ ಒಳಪಡಬೇಕಿರುವುದರಿಂದ ಸದ್ಯ ವಿಚಾರಣೆಗೆ ಹಾಜರ್​ ಆಗುವುದು ಅನುಮಾನ.
ಸುಳ್ಳು‌ ದೂರಿಗೆ ನನ್ನಿಂದ ಹೆಂಡತಿ‌-ಮಕ್ಕಳು ದೂರವಾದರು: ಆರ್​. ಅಶೋಕ್​ ವಿರುದ್ಧ ಸಿಡಿ ಲೇಡಿ ವಕೀಲ ಜಗದೀಶ್​ ವಾಗ್ದಾಳಿ

ಸಿಡಿ ಕೇಸ್​ಗೆ ಟಕ್ಕರ್​ ಕೊಟ್ಟ ವಕೀಲೆ ಮೀರಾ ರಾಘವೇಂದ್ರ!

2004ರಲ್ಲಿ ದುಡ್ಡಿಲ್ಲದೆ ಖಾಲಿ ಡಬ್ಬದಂತಿದ್ದ ಕುಮಾರಸ್ವಾಮಿ ಇವತ್ತು ತುಂಬಿದ ಕೊಡ! ಅಂದಿನ ಹಣದ ರಹಸ್ಯ ಕೆದಕಿದ ಜಮೀರ್

ಪಬ್​ಜಿ ಆಟವಾಡುತ್ತಲೇ ಬಾಲಕನ ಭೀಕರ ಹತ್ಯೆ! ಬೆಚ್ಚಿಬೀಳಿಸುತ್ತೆ ಆರೋಪಿ ಬಾಯ್ಬಿಟ್ಟ ರಹಸ್ಯ

ಐಸಿಯುನಲ್ಲಿದ್ದಾರೆ ರಮೇಶ್​ ಜಾರಕಿಹೊಳಿ, ಪರಿಸ್ಥಿತಿ ಗಂಭೀರ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 8 =
Remember me
