ವಿಜಯಪುರ:ರಾಜ್ಯದಲ್ಲಿ ಬಿಜೆಪಿ ಅಧಿಕಾರವಧಿಯಲ್ಲಿ ದಲಿತ ಸಿಎಂ ಆಗುವುದು ನಿಶ್ಚಿತ. ಆದರೆ ಅದು ನಾನು ಇರುವಾಗ ಆಗುತ್ತದೆಯೋ? ಅಥವಾ ನಾನು ಮೃತಪಟ್ಟ ನಂತರ ಆಗುತ್ತದೆಯೋ ಗೊತ್ತಿಲ್ಲ ಎಂದು ಸಂಸದ ರಮೇಶ್ ಜಿಗಜಿಣಗಿ ಹೇಳಿದ್ದಾರೆ.
ಬಿಜೆಪಿಯಿಂದ ಮಾತ್ರ ಸಾಮಾಜಿಕ ನ್ಯಾಯ ಸಿಗಲು ಸಾಧ್ಯ. ರಾಜ್ಯದಲ್ಲಿ ದಲಿತ ಸಿಎಂ ಸ್ಥಾನ ಲಭಿಸುವುದಾದರೆ ಅದು ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಶ್ರೀರಾಮುಲು ಹಾಗೂ ರಮೇಶ್ ಜಾರಕಿಹೊಳಿಗೆ ಡಿಸಿಎಂ ಸ್ಥಾನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ, ‘ನಮ್ಮನ್ನು ಮುಂದಿಟ್ಟುಕೊಂಡು ಚುನಾವಣೆ ಮಾಡೀರಿ ಎಂದು ರಾಮುಲು ಹೇಳ್ತಾರೆ, ನಾನು ಕಾಂಗ್ರೆಸ್ ಬಿಟ್ಟು ಬಂದಿದ್ದಕ್ಕೆ ಬಿಜೆಪಿ ಸರ್ಕಾರ ರಚನೆಯಾಗಿದೆ ಎಂದು ಜಾರಕಿಹೊಳಿ ಹೇಳ್ತಾರೆ… ಈ ವಿವಾದಗಳು ನಡೆಯುವವೆ. ಇವೆಲ್ಲ ಹೊಸದೇನಲ್ಲ. ಹಿಂದೆಯೂ ಬೇರೆ ಬೇರೆ ಪಕ್ಷಗಳಲ್ಲಿ ಹೀಗೆ ಒತ್ತಡ ತರುವ ಕೆಲಸವಾಗಿದೆ. ವರಿಷ್ಠರು ಸಮರ್ಥರಿದ್ದಾರೆ. ಈ ಸಮಸ್ಯೆ ಬಗೆಹರಿಸುತ್ತಾರೆ’ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − seven =
Remember me
