ಬೆಂಗಳೂರು:ಬಾಂಬ್ ಸ್ಫೋಟ ಪ್ರಕರಣ ಸಂಬಂಧ ತನಿಖಾ ಹಂತದಲ್ಲಿರುವಾಗಲೇ ರಾಮೇಶ್ವರಂ ಕೆಫೆ ಪುನರಾರಂಭಿಸಲು ಕೆಫೆ ಮಾಲೀಕರು ಮುಂದಾಗಿದ್ದಾರೆ.
ಮಾರ್ಚ್ 1 ರಂದು ಪೂರ್ವ ಬೆಂಗಳೂರಿನ ಬ್ರೂಕ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿ ಹತ್ತು ಜನರು ಗಾಯಗೊಂಡಿದ್ದರು. ಬಾಂಬ್ ಸ್ಫೋಟ ಘಟನೆ ಸಂಬಂಧ ಎನ್ ಐಎ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನೆರಡು ದಿನಗಳಲ್ಲಿ ಅಧಿಕೃತವಾಗಿ ತನಿಖೆ‌ ಕೈಗೆತ್ತಿಕೊಳ್ಳಲಿದ್ದಾರೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ.
ಶಿವರಾತ್ರಿ ದಿನದಂದೇ ಕೆಫೆ ಮತ್ತೆ ಆರಂಭಿಸಲು ಪ್ಲಾನ್ ಮಾಡಿಕೊಂಡಿದ್ದಾರೆ. ಆದರೆ, ಸ್ಫೋಟ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಹಿನ್ನೆಲೆ ಮಾರ್ಚ್ 8 ರಂದು ಕಫೆ ಆರಂಭಕ್ಕೆ ಅನುಮತಿ ಸಿಗುವುದು ಅನುಮಾನವಾಗಿದೆ.
ಸ್ಫೋಟ ಸಂಬಂಧ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.   ಈ ನಡುವೆ ಕೆಫೆ ಪುನರಾರಂಭಕ್ಕೆ ಮಾಲೀಕರು ಮುಂದಾಗಿದ್ದರೂ ಸ್ಥಳೀಯ ಪೊಲೀಸರಿಂದ ಎನ್​ಒಸಿ ಪಡೆಯುವುದು ಅವಶ್ಯಕವಾಗಿದೆ. ಆದರೆ, ತನಿಖಾ ಹಂತವಾಗಿ ಕೆಫೆ ತೆರೆಯಲು ಪೊಲೀಸರು ಅನುಮತಿ ನೀಡಿಲ್ಲ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 16 =
Remember me
