ಬೆಂಗಳೂರು:‘ರಾಜಕೀಯದಲ್ಲಿ ಯಾರೂ ಶಾಶ್ವತವಲ್ಲ. ಮಸ್ಕಿ, ಹೊಸಕೋಟೆಯಲ್ಲಿ ಪಕ್ಷ ಬಿಟ್ಟು ಹೋದವರ ಜಾಗಕ್ಕೆ ಬೇರೆಯವರು ಬಂದಿದ್ದಾರೆ. ಒಬ್ಬರು ಖಾಲಿಯಾದರೆ ಆ ಸ್ಥಾನಕ್ಕೆ ಬೇರೆಯವರು ಬರುತ್ತಾರೆ. ಜೆಡಿಎಸ್‌ನಿಂದ ಸೋತವರು ಅರ್ಜಿ ಹಾಕಿದ್ದಾರೆ. ರಾಜಕೀಯ ನಿಂತ ನೀರಲ್ಲ, ಏನು ಬೇಕಾದರೂ ಸಾಧ್ಯವಾಗಬಹುದು’ ಎಂದು ಹೇಳುತ್ತಾ ಕೆಪಿಸಿಸಿ ಅಧ್ಯಕ್ಷ, ಡಿ.ಕೆ ಶಿವಕುಮಾರ್, ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಸೇರುವ ಬಗ್ಗೆ ಸುಳಿವು ನೀಡಿದ್ದರು.
ಆದರೆ ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿಕೆಗೆ ರಾಮಲಿಂಗಾರೆಡ್ಡಿ ಟಾಂಗ್ ನೀಡಿದ್ದು ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಬರಲ್ಲ ಎಂದಿದ್ದಾರೆ. ಈ ಮೂಲಕ ಕೆಪಿಸಿಸಿ ಅಧ್ಯಕ್ಷರ ಹೇಳಿಕೆಗೆ ವ್ಯತಿರಿಕ್ತ ಹೇಳಿಕೆಯನ್ನು ನೀಡಿದ್ದಾರೆ.
ಅವರು ತಮ್ಮ ಪಕ್ಷದಲ್ಲೇ ಟಿಕೆಟ್ ಗಾಗಿ ಅನೇಕರು ಪ್ರಯತ್ನ ಪಡುತ್ತಿದ್ದಾರೆ, ಇಲ್ಲೇ ರಷ್ ಇದೆ. ಹೊರಗಡೆಯಿಂದ ಬಂದ ಅಭ್ಯರ್ಥಿಗೆ ಟಿಕೆಟ್್ ಕೊಡೋದು ಹೇಗೆ ಎಂದು ಪ್ರಶ್ನಿಸಿದ್ದಾರೆ. ಚುನಾವಣೆ ಹತ್ತಿರದಲ್ಲಿದ್ದು ಕೆಪಿಸಿಸಿ ಅಧ್ಯಕ್ಷರು ಹೇಳಿದ್ದನ್ನು ರಾಮಲಿಂಗಾರೆಡ್ಡಿ ಅಲ್ಲಗಳೆದಿರುವ ಘಟನೆ ಕುತೂಹಲಕಾರಿ ಆಗಿ ಮಾರ್ಪಡುತ್ತಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + thirteen =
Remember me
