ಬೆಂಗಳೂರು:ಸರ್ಕಾರದ ವಿರುದ್ಧ ಮುಷ್ಕರ ನಡೆಸಿ ವಜಾ ಆಗಿದ್ದ ಸಾರಿಗೆ ನೌಕರರ ಮರು ನೇಮಕಕ್ಕೆ ಸಾರಿಗೆ ಸಚಿವ ಶ್ರೀರಾಮುಲು ಚಾಲನೆ ನೀಡಿದ್ದಾರೆ. ಗುರುವಾರ 100 ಸಿಬ್ಬಂದಿ ಮರು ನೇಮಕಕ್ಕೆ ಆದೇಶ ನೀಡಲಾಗಿದೆ. ಒಟ್ಟು 1,610 ಸಿಬ್ಬಂದಿ ಮುಷ್ಕರದಿಂದ ಕೆಲಸ ಕಳೆದುಕೊಂಡಿದ್ದರು. ಮುಖ್ಯಮಂತ್ರಿ ಅಣತಿ ಮೇರೆಗೆ ಮರು ನೇಮಕಾತಿ ಆಗುತ್ತಿದೆ ಎಂದು ಶ್ರೀರಾಮುಲು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕಾನೂನಲ್ಲಿ ಅವಕಾಶ ಇಲ್ಲದಿದ್ದರೂ ಮರುನೇಮಕ ಮಾಡಿಕೊಳ್ಳಲಾಗುತ್ತಿದೆ. ಇನ್ನುಳಿದ 1520 ಸಿಬ್ಬಂದಿ ಮರುನೇಮಕ ಹಂತ ಹಂತವಾಗಿ ಆಗಲಿದೆ. ಕಾಂಪ್ರಮೈಸ್ ಪ್ರಿಟಿಷನ್ ಮೂಲಕ ಮುಂದಿನ ದಿನಗಳಲ್ಲಿ ಪ್ರತಿಭಟನೆ ಮಾಡಬಾರದು ಎಂಬ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ. ನಿರ್ಬಂಧಗಳನ್ನು ವಿಧಿಸಿದ್ದು, ಪ್ರತಿಭಟನೆ ಮಾಡಿದರೆ ಮತ್ತೆ ವಜಾ ಮಾಡಲಾಗುವುದು ಎಂದು ಎಚ್ಚರಿಸಿದರು. ಮುಂದಿನ ದಿನಗಳಲ್ಲಿ ಮಾಸಾಂತ್ಯಕ್ಕೆ ವೇತನ ನೀಡುವ ಕೆಲಸ ಆಗಲಿದೆ. ಶುಕ್ರವಾರ ಮೆಗಾ ಅದಾಲತ್​ನಲ್ಲಿ 200 ಮಂದಿಗೆ ಮರು ನೇಮಕ ಆಗಲಿದೆ. ತಿಂಗಳಾಂತ್ಯಕ್ಕೆ 700 ಮಂದಿ ಮರುನೇಮಕಾತಿ ಆಗಲಿದೆ ಎಂದರು.
ಪ್ರಯಾಣ ದರ ಹೆಚ್ಚಳವಿಲ್ಲ:ನಮ್ಮದು ಸೇವಾಭಾವನೆಯ ಸಂಸ್ಥೆ. ಸದ್ಯ 800 ವೋಲ್ವೋ ಬಸ್ ಓಡಾಡದೆ ನಿಂತಿದೆ. 3000 ಕೋಟಿ ರೂ. ಸರ್ಕಾರದಿಂದ ಇಲಾಖೆಗೆ ಬಂದಿದೆ. ಸದ್ಯಕ್ಕೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಪ್ರಸ್ತಾಪ ನಮ್ಮ ಮುಂದಿಲ್ಲ ಎಂದು ಶ್ರೀರಾಮುಲು ಹೇಳಿದರು. 15 ದಿನಗಳಲ್ಲಿ 2 ಬಸ್​ಗೆ ಬೆಂಕಿ ಹಚ್ಚಿರುವ ಕುರಿತ ವರದಿ ಶುಕ್ರವಾರ ನನ್ನ ಕೈ ಸೇರಲಿದೆ. ವರದಿ ಬಳಿಕ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.
ಈ ಜಿಲ್ಲೆಯವರು ಸ್ಟೇಟಸ್​ ಹಾಕೋ ಮುಂಚೆ ಯೋಚಿಸಿ; ರೌಡಿಶೀಟರ್​ ಕೇಸ್ ಬಿದ್ದೀತು..!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + nineteen =
Remember me
