ಬೆಂಗಳೂರು:ವಾವ್ ಏನ್ ಮಾತಾಡಿದರಪ್ಪ ಎಂದು ಜನರಿಂದ ಶಿಳ್ಳೆ, ಚಪ್ಪಾಳೆ ಗಿಟ್ಟಿಸಿಕೊಳ್ಳುವ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಸ್ತರು. ಮಹರ್ಷಿ ವಾಲ್ಮೀಕಿ ನಿಗಮದ ಹಗರಣದ ನೈತಿಕ ಹೊಣೆ ಹೊತ್ತು ಕೇಂದ್ರ ಹಣಕಾಸು ಸಚಿವರ ರಾಜೀನಾಮೆಗೆ ಒತ್ತಾಯವೂ ಜನರ ಗಮನಸೆಳೆಯುವ, ಜವಾಬ್ದಾರಿಯಿಂದ ನುಣುಚಿಕೊಳ್ಳುವ ತಂತ್ರಗಾರಿಕೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವ್ಯಂಗ್ಯವಾಡಿದರು.
ಬಿಜೆಪಿ ರಾಜ್ಯ ಕಚೇರಿಯಲ್ಲಿ ಭಾನುವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಹಣ ಖಾಸಗಿ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಆಗುವುದನ್ನು ತಡೆಯಲಿಲ್ಲ. ಜವಾಬ್ದಾರರಾದ ಬ್ಯಾಂಕ್ ಅಧಿಕಾರಿಗಳ ಹಿಡಿದು ಪೊಲೀಸರಿಗೆ ಒಪ್ಪಿಸುವುದನ್ನು ಸಿದ್ದರಾಮಯ್ಯ ಅವರಿಗೆ ತಡೆದವರು ಯಾರು ? ಎಂದು ಕೇಳಿದರು.
ಹಗರಣ ಹೊರ ಬಿದ್ದಾಗ ಸಂಬಂಧಿಸಿದ ಸಚಿವರ ಪಾತ್ರವೇನಿಲ್ಲ ಎಂದು ವಾದಿಸಿದರು. ನಂತರ ಅದೇ ಸಚಿವ ನೀಡಿದ ರಾಜೀನಾಮೆಯನ್ನು ಅಂಗೀಕರಿಸಿದರು. 187 ಕೋಟಿ ರೂ.ಗಳಲ್ಲ, 89 ಕೋಟಿ ರೂ.ಗಳಷ್ಟೇ ಅಕ್ರಮ ವರ್ಗಾವಣೆ ಎಂದು ಒಪ್ಪಿಕೊಳ್ಳುತ್ತಿದ್ದಾರೆ. ಹಾಗಿದ್ದ ಮೇಲೆ ಕೇಂದ್ರ ಹಣಕಾಸು ಸಚಿವರ ವಿರುದ್ಧ ರಾಜಕೀಯ ಕಾರಣಕ್ಕೆ ಮಾತನಾಡುತ್ತಿರುವುದು ನಿಚ್ಚಳವಾಗಿದೆ ಎಂದರು.
ಹಗರಣದಲ್ಲಿ ಶಾಮೀಲಾದ ಬ್ಯಾಂಕ್ ನ ಯಾವುದೇ ಅಧಿಕಾರಿ, ಸಿಬ್ಬಂದಿ ವಿರುದ್ಧ ಕಾನೂನು ಕ್ರಮಗಳು ಜಾರಿಯಾಗಿವೆ. ನಿರ್ದಾಕ್ಷಿಣ್ಯ ಕ್ರಮವಾಗಲಿದೆ. ರಾಜ್ಯ ಸರ್ಕಾರದ ರೀತಿ ವಿಳಂಬ ಮಾಡುವ ಪ್ರಶ್ನೆಯೇ ಇಲ್ಲವೆಂದು ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 3 =
Remember me
