ಬೆಂಗಳೂರು:ಪ್ರಕೃತಿಗೆ ತೀವ್ರ ಹಾನಿಯುಂಟು ಮಾಡುತ್ತಿರುವ ತ್ಯಾಜ್ಯವನ್ನು ಮರು ಸಂಸ್ಕರಣೆ, ಪುನರ್ ಬಳಕೆ, ಪುನರ್, ನಿರ್ಮಾಣ ಮಾಡುವ ಮತ್ತು ಜಾಗತಿಕ ಹವಾಮಾನ ಬದಲಾವಣೆ ತಡೆಗಟ್ಟುವ ಹಿನ್ನೆಯಲ್ಲಿ ಉತ್ತಮ ಅಭ್ಯಾಸಗಳನ್ನು ರೂಢಿಸಿಕೊಳ್ಳುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಗರದ ಲಲಿತ್ ಅಶೋಕ ಹೋಟೆಲ್‌ನಲ್ಲಿ ಆಯೋಜನಿಸಿದ್ದ 5ನೇ ರೀ ಕಾಮರ್ಸ್ ಎಕ್ಸ್ ಪೋಗೆ ಚಾಲನೆ ನೀಡಿ ಮಾತನಾಡಿದರು.ಪರಿಸರ ಸಂರಕ್ಷಣೆಗೆ ಇ ತ್ಯಾಜ್ಯ, ಬ್ಯಾಟರಿ, ಯಂತ್ರೋಪಕರಣಗಳ ಮರುಬಳಕೆ, ಸಂಸ್ಕರಣೆ, ಪುನರ್ ನಿರ್ಮಾಣ, ಪುನರ್ ಸ್ಥಾಪನೆ ಅತ್ಯಂತ ಅಗತ್ಯವಾಗಿದೆ. ಇದರಿಂದ ಆರ್ಥಿಕವಾಗಿಯೂನ ಸಹಕಾರಿಯಾಗಲಿದ್ದ್ದು, ಪರಿಸರ ಸಂರಕ್ಷಣೆಯಾಗಲಿದೆ ಎಂದರು.
ಜಗತ್ತಿನಲ್ಲಿ ಹವಾಮಾನ ಬದಲಾವಣೆ ಅತಿ ದೊಡ್ಡ ಸವಾಲಾಗಿದ್ದು, ಉತ್ತರ ಕನ್ನಡದ ಶಿರೂರು, ಕೇರಳದ ವೈಯನಾಡು ಭಾಗದಲ್ಲಿ ಸಂಭವಿಸಿದ ಭೂ ಕುಸಿತ ನಮಗೆಲ್ಲರಿಗೂ ಎಚ್ಚರಿಕೆ ಗಂಟೆಯಾಗಿದೆ. ಎಲ್ಲರೂ ಜಾಗೃತರಾಗಲು ಇದು ಸಕಾಲ. ಗಾಳಿ, ನೀರಿನಲ್ಲಿ ಮಾಲಿನ್ಯ ಹೆಚ್ಚಾಗುತ್ತಿದ್ದು, ಇತ್ತೀಚೆಗೆ ಎಲೆಕ್ಟ್ರಾನಿಕ್, ಬ್ಯಾಟರಿ, ನಿರ್ಮಾಣ, ಕೈಗಾರಿಕಾ ಮಾಲಿನ್ಯ ಸಹ ತೀವ್ರಗೊಳ್ಳುತ್ತಿದೆ. ಜಗತ್ತಿಗೆ ಮಾರಕವಾಗಿರುವ ಈ ಮಾಲಿನ್ಯದ ವಿರುದ್ಧ ಇಡೀ ಮನುಕುಲ ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಎಂದು ಹೇಳಿದರು.
ಪ್ರಕೃತಿ, ಪರಿಸರ ಉಳಿದರೆ ಮಾತ್ರ ಜೀವನ, ಜೀವನೋಪಾಯ ಎರಡೂ ರಕ್ಷಿಸಲು ಸಾಧ್ಯ, ಅಭಿವೃದ್ಧಿಗೆ ತೊಡಕಾಗದಂತೆ, ಉತ್ಪಾದನೆಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕಾಗಿದೆ. ಸಂಸ್ಕರಣಾ ವಲಯದಲ್ಲಿ ಯುವ ಸಮೂಹಕ್ಕೆ ಉದ್ಯೋಗ ಸೃಜನೆ ಮಾಡಲು ಈ ವಲಯದಲ್ಲಿ ವಿಪುಲ ಅವಕಾಶವಿದೆ ಎಂದು ಹೇಳಿದರು.
ರೀ ಎಕ್ಸ್ ಪೋ ಆಯೋಜಕರು ಮತ್ತು ಉರ್ಧ್ಯ ಮ್ಯಾನೇಜ್ ಮೆಂಟ್ ಪ್ರೈವೈಟ್ ಲಿಮಿಟೆಡ್ ಸಿಇಒ ವೆಂಕಟರೆಡ್ಡಿ ಡಿ.ಪಾಟೀಲ್ ಮಾತನಾಡಿ, ಸಂಸ್ಕರಣೆಯನ್ನು ಬಲಪಡಿಸುವುದು ನಮ್ಮ ಮೂಲ ಧ್ಯೇಯವಾಗಿದ್ದು, ಈ ನಿಟ್ಟಿನಲ್ಲಿ ಪಾಲುದಾರರ ಸಂಖ್ಯೆ ಹೆಚ್ಚಾಗಬೇಕು. ಮೊಬೈಲ್, ಲ್ಯಾಪ್ ಟಾಪ್ ಮತ್ತಿತರ ವಸ್ತುಗಳನ್ನು ಮರು ಸಂಸ್ಕರಣೆ ಮಾಡಿ ಮರು ಬಳಕೆಗೆ ಯೋಗ್ಯವಾದ ರೀತಿಯಲ್ಲಿ ಸಜ್ಜುಗೊಳಿಸಬೇಕಾಗಿದೆ. ಲ್ಯಾಪ್ ಟಾಪ್‌ಗಳು ಶಿಕ್ಷಣ, ಉದ್ಯೋಗ ಸೃಜನೆಗೆ ಅತ್ಯಂತ ಅಗತ್ಯವಾಗಿರುವ ಸಾಧನಗಳಾಗಿವೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + three =
Remember me
