ಬೆಂಗಳೂರು : ಸರಣಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಉಮೇಶ್ ರೆಡ್ಡಿಗೆ ಪೆರೋಲ್ ನೀಡಲು ಹೈಕೋರ್ಟ್‌ನಿರಾಕರಿಸಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿರುವ ಉಮೇಶ್ ರೆಡ್ಡಿ, ಅನಾರೋಗ್ಯಕ್ಕೆ ತುತ್ತಾಗಿರುವ ತಾಯಿಯೊಂದಿಗೆ ಇರಲು 30 ದಿನಗಳ ಕಾಲ ಪೆರೋಲ್ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ಮಾಡಿದೆ.ಆಸ್ಪಾಕ್ ವಿರುದ್ಧದ ರಾಜಸ್ಥಾನ ಸರ್ಕಾರದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಉಲ್ಲೇಖಿಸಿರುವ ನ್ಯಾಯಪೀಠ, ಪ್ರಸ್ತುತ ಪ್ರಕರಣದಲ್ಲಿ ಅರ್ಜಿದಾರರಿಗೆ ಪೆರೋಲ್ ನೀಡಬೇಕಾದಲ್ಲಿ ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಳ್ಳಬೇಕು.
ಆದ್ದರಿಂದ ಅರ್ಜಿದಾರರಿಗೆ ಪೆರೋಲ್ ನೀಡಿದಲ್ಲಿ ಮತ್ತೆ ಅಪರಾಧ ಪ್ರವೃತ್ತಿಯನ್ನು ಹೊಂದಿರಬಹುದು ಅಥಾವ ಕಾನೂನು ಸುವ್ಯವಸ್ಥೆಗೆ ಅಪಾಯವನ್ನುಂಟು ಮಾಡಬಹುದು ಎಂದು ಅಭಿಪ್ರಾಯಪಟ್ಟಿದೆ.ಅಲ್ಲದೆ, ಜೈಲು ಅಧಿಕಾರಿಗಳ ದಾಖಲೆಗಳನ್ನು ಪರಿಶೀಲಿಸಿರುವ ಸುಪ್ರೀಂಕೋರ್ಟ್ ಅರ್ಜಿದಾರರು ಜೈಲಿನಿಂದ ಹೊರ ಬಂದಲ್ಲಿ ಅವರ ಜೀವಕ್ಕೆ ಅಪಾಯವಿದೆ ಎಂದು ತಿಳಿಸಿದೆ ಎಂಬ ಅಂಶವನ್ನು ಉಲ್ಲೇಖಿಸಿರುವ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.
ಮನೆ ದುರಸ್ಥಿಯಲ್ಲಿದ್ದು ಅದನ್ನು ಸರಿ ಪಡಿಸುವುದಕ್ಕಾಗಿ ಪೆರೋಲ್ ನೀಡಬೇಕು ಎಂದು ಅರ್ಜಿದಾರರ ಮತ್ತೊಂದು ಮನವಿಯನ್ನು ತಿರಸ್ಕರಿಸಿದ ನ್ಯಾಯಪೀಠ, ಅರ್ಜಿದಾರರಿಗೆ ಇಬ್ಬರು ಸಹೋದದರಿದ್ದು, ತಾಯಿಯನ್ನು ನೋಡಿಕೊಳ್ಳುತ್ತಾರೆ. ಮನೆ ದುರಸ್ಥಿಯನ್ನೂ ಮಾಡುತ್ತಾರೆ. ಅರ್ಜಿದಾರರ ನೀಡಿರುವ ಎರಡೂ ಕಾರಣಗಳಲ್ಲಿ ಸಮರ್ಥವಾಗಿಲ್ಲ ಎಂದು ತಿಳಿಸಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.
ಅರ್ಜಿದಾರರ ಹಿನ್ನೆಲೆ )1998ರ ಫೆ.28ರಂದು ಬೆಂಗಳೂರು ನಗರದಲ್ಲಿ ನಡೆದಿದ್ದ ಮಹಿಳೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಉಮೇಸ್ ರೆಡ್ಡಿಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಗಿತ್ತು. ಈ ಶಿಕ್ಷೆಯನ್ನು ಜೀವವಧಿ ಶಿಕ್ಷೆಯನ್ನಾಗಿ ಸುಪ್ರೀಂಕೋರ್ಟ್ ಮಾರ್ಪಾಡು ಮಾಡಿ ಆದೇಶಿಸಿತ್ತು. ಅಲ್ಲದೆ, ನ್ಯಾಯಾಲಯಕ್ಕೆ ಪೆರೋಲ್ ಸೇರಿದಂತೆ ಯಾವುದೇ ರೀತಿಯ ಅರ್ಜಿ ಸಲ್ಲಿಸಬೇಕು ಎಂದಾದರೆ ಕನಿಷ್ಟ 30 ವರ್ಷಗಳ ಕಾಲ ಶಿಕ್ಷೆ ಅನುಭವಿಸಬೇಕು ಎಂದು ಸುಪ್ರೀಂಕೋರ್ಟ್ ತಿಳಿಸಿತ್ತು.
ಈ ನಡುವೆ ಪೆರೋಲ್ ನೀಡಬೇಕು ಎಂದು ಉಮೇಶ್ ರೆಡ್ಡಿ ಜೈಲು ಅಧಿಕಾರಿಗಳನ್ನು ಕೋರಿದ್ದರು. ಆದರೆ, 30 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸುವವರೆಗೂ ಯಾವುದೇ ವಿನಾಯ್ತಿ ನೀಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದೆ ಎಂದು ತಿಳಿಸಿ ಅರ್ಜಿ ತಿರಸ್ಕರಿಸಿದ್ದರು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:10 − four =
Remember me
