ಬೆಂಗಳೂರು: ಕೃಷಿ ಹಾಗೂ ಕೈಗಾರಿಕೆಗಳ ವಲಸೆ ಕಾರ್ಮಿಕರನ್ನು ಪತ್ತೆ ಮಾಡಿ ಅವರಿಗೆ ವಸತಿ ಹಾಗೂ ಆಹಾರ ಒದಗಿಸುವಂತೆ ಕಂದಾಯ ಸಚಿವ ಆರ್​. ಅಶೋಕ್​ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ತಮ್ಮ ಜಿಲ್ಲೆಯ ವ್ಯಾಪ್ತಿಯಲ್ಲಿ ಕಾರ್ಮಿಕರ ಹೆಸರು, ವಿಳಾಸ ಪತ್ತೆ ಮಾಡಿ ಅವರನ್ನು ನೋಂದಣಿ ಮಾಡಿಕೊಂಡು ಹತ್ತಿರದ ವಸತಿ ಶಾಲೆ, ಸಮುದಾಯ ಭವನ, ಮದುವೆ ಛತ್ರಗಳಲ್ಲಿ ವಸತಿ ವ್ಯವಸ್ಥೆ ಕಲ್ಪಿಸಬೇಕು. ಇಲ್ಲಿ ಅವರಿಗೆ ಶೌಚಾಲಯ, ವಿದ್ಯುತ್​, ಶುದ್ಧ ಕುಡಿಯುವ ನೀರು ಸೇರಿದಂತೆ ಎಲ್ಲ ಸೌಲಭ್ಯ ಒದಗಿಸಬೇಕು. ಪಡಿತರ ವ್ಯವಸ್ಥೆ ಮೂಲಕ ಅವರಿಗೆ ಆಹಾರ ಧಾನ್ಯ ವಿತರಿಸಬೇಕು. ಇದಕ್ಕಾಗಿ ಎಸ್​ಡಿಆರ್​ಎಫ್​ ಅನುದಾನವನ್ನು ಜಿಲ್ಲಾಧಿಕಾರಗಳು ಬಳಸಿಕೊಳ್ಳಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ.
ಮಾರುಕಟ್ಟೆ ಸ್ಥಳಾಂತರ: ಕರೊನಾ ವೈರಸ್​ ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಖ್ಯ. ಹೀಗಾಗಿ ನಗರ ಹಾಗೂ ಪಟ್ಟಣಗಳಲ್ಲಿ ಇರುವ ಮಾರುಕಟ್ಟೆಗಳನ್ನು ವಿಶಾಲವಾದ ಜಾಗಕ್ಕೆ ವರ್ಗಾಯಿಸಿ ಅಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಸಚಿವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ದೆಹಲಿಯ ನಿಜಾಮುದ್ದೀನ್​ ಜಮಾತ್​ ಪ್ರಾರ್ಥನಾ ಮಂದಿರದಲ್ಲಿ ಭಾಗವಹಿಸಿದ್ದವರ ಸಂಖ್ಯೆ ಗೊತ್ತಾದರೆ ಬೆಚ್ಚಿ ಬೀಳುತ್ತೀರಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 6 =
Remember me
