ಬೆಂಗಳೂರು:‘ಏರೋ ಇಂಡಿಯಾ-2023’ರ ಉದ್ಘಾಟನೆ ಸಲುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಿನ್ನೆ ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಿದರು. ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತಲುಪಿದ ಅವರನ್ನು ರಾಜ್ಯಪಾಲ ಥಾವರ್​​ಚಂದ್​ ಗೆಹ್ಲೋಟ್​, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬರಮಾಡಿಕೊಂಡರು.
ಇದಾದ ಮೇಲೆ ನಿನ್ನೆ ರಾತ್ರಿ ಬೆಂಗಳೂರಿನ ರಾಜಭವನದಲ್ಲಿ ಔತಣಕೂಟ ಆಯೋಜಿಸಲಾಗಿತ್ತು. ಈ ಸಂದರ್ಭ ಕನ್ನಡ ಸ್ಟಾರ್‌ಗಳನ್ನು ಪ್ರಧಾನಿ ಮೋದಿ ಭೇಟಿ ಮಾಡಿದ್ದರು. ಈ ಔತಣ ಕೂಟದಲ್ಲಿ ನಟರಾದ ಯಶ್, ರಿಷಭ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರಗಂದೂರ್, ಪುನೀತ್ ರಾಜ್‍ಕುಮಾರ್ ಪತ್ನಿ ಅಶ್ವಿನಿ ಮುಂತಾದವರು ಭಾಗಿಯಾಗಿದ್ದರು
ಕ್ರೀಡಾ ಕ್ಷೇತ್ರದಿಂದ ಕ್ರಿಕೆಟಿಗ ಮನೀಶ್ ಪಾಂಡೆ, ಸಾಮಾಜಿಕ ಜಾಲ ತಾಣದಲ್ಲಿ ಸಕ್ರಿಯವಾಗಿರುವ ಯೂಟ್ಯೂಬರ್ ಶ್ರದ್ಧಾ ಕೂಡ ಭಾಗಿಯಾಗಿದ್ದರು.
Sign in to your account
Please enter an answer in digits:nine − 6 =
Remember me
