ಬೆಂಗಳೂರು:ಇತ್ತೀಚೆಗೆ ಹಾಡಹಗಲೇ ಸರಳ ವಾಸ್ತು ಪರಿಣತ ಚಂದ್ರಶೇಖರ ಗುರೂಜಿ ಅವರನ್ನು ಹತ್ಯೆ ಮಾಡಿದ್ದ ಪ್ರಕರಣದ ಬಳಿಕ ಒಂದಷ್ಟು ಜ್ಯೋತಿಷಿಗಳಲ್ಲಿ ಆತಂಕ ಉಂಟಾಗಿತ್ತು. ಇದೀಗ ಅದನ್ನು ಹೆಚ್ಚಿಸುವಂಥ ಪ್ರಕರಣವೊಂದು ನಡೆದಿದೆ. ಅದೇನೆಂದರೆ ಜ್ಯೋತಿಷಿಯೊಬ್ಬರ ಮನೆಗೆ ಹಾಡಹಗಲೇ ನುಗ್ಗಿದ್ದ ಖದೀಮರು ಹಲ್ಲೆ ನಡೆಸಿ, ಬೆಲೆಬಾಳುವ ವಸ್ತುಗಳನ್ನು ದರೋಡೆ ಮಾಡಿಕೊಂಡು ಹೋಗಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲೇ ಇಂಥದ್ದೊಂದು ಪ್ರಕರಣ ನಡೆದಿದೆ. ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಇಲ್ಲಿನ ಜ್ಯೋತಿಷಿಯೊಬ್ಬರಾದ ಸುಮಾರು 40 ವರ್ಷದ ಪ್ರಮೋದ್ ಎಂಬವರ ಮನೆಗೆ ಇಂದು ಮೂವರು ಜ್ಯೋತಿಷ್ಯ ಕೇಳುವ ನೆಪದಲ್ಲಿ ಬಂದಿದ್ದರು.
ಬಳಿಕ ಅವರು ಜ್ಯೋತಿಷಿ ಮೇಲೆ ಹಲ್ಲೆ ಮಾಡಿ, ಚಿನ್ನಾಭರಣದ ಜೊತೆಗೆ 5 ಲಕ್ಷ ರೂ. ನಗದು ಸುಲಿಗೆ ಮಾಡಿಕೊಂಡು ಹೋಗಿದ್ದಾರೆ. 400 ಗ್ರಾಂ ಚಿನ್ನಾಭರಣ, 50 ಗ್ರಾಂ ಬೆಳ್ಳಿಯ ವಸ್ತುಗಳನ್ನೂ ದರೋಡೆ ಮಾಡಿಕೊಂಡು ಹೋಗಿದ್ದಾರೆ. ಕೆಂಗೇರಿ ಪೊಲೀಸರಿಗೆ ದೂರು ನೀಡಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಶಾಲ ಗಾಣಿಗ ಕೊಲೆ ಪ್ರಕರಣ: ಇನ್ನೊಬ್ಬ ಸುಪಾರಿ ಕಿಲ್ಲರ್ ಬಂಧನ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + twenty =
Remember me
