ತುಮಕೂರು:ಇಂದು ನಸುಕಿನದಲ್ಲಿ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಬೆಗೂರು ಬೈಪಾಸ್ ಬಳಿ ಭೀಕರ ಅಪಘಾತ ನಡೆದಿದೆ.
ಕಾರು- ಟಿಟಿ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಇನ್ನೊಬ್ಬರ ಸ್ಥಿತಿ ಗಂಭೀರವಾಗಿದೆ. ಟಿ.ಟಿ.ವಾಹನದಲ್ಲಿದ್ದ 5 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೃತರನ್ನು ರಘು (27) ಮತ್ತು ಸಂತೋಷ (21) ಎಂದು ಗುರುತಿಸಲಾಗಿದೆ. ವಿಜಯ್ (30) ಅವರ ಸ್ಥಿತಿ ಗಂಭೀರವಾಗಿದೆ. ಮೃತಪಟ್ಟವರು ಬೆಂಗಳೂರಿನ ಸಂಜಯ ನಗರದ ನಿವಾಸಿಗಳು.
ಟಿ.ಟಿ. ವಾಹನ ಧರ್ಮಸ್ಥಳದ ಕಡೆಗೆ ಹೋಗುತ್ತಿತ್ತು. ಕಾರು ಡಿವೈಡರ್ ದಾಟಿ ಟಿ.ಟಿ. ವಾಹನಕ್ಕೆ ಡಿಕ್ಕಿ ಹೊಡೆದಿದ್ದು ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದವರು ಚಿಕ್ಕಮಗಳೂರಿನಿಂದ- ಬೆಂಗಳೂರಿಗೆ ಮನೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಮುಖಂಡನಿಂದ ಭಾರಿ ವಂಚನೆ? ಡೆತ್‌ನೋಟ್‌ ಬರೆದಿಟ್ಟು ಮೈಸೂರು ಉದ್ಯಮಿ ಆತ್ಮಹತ್ಯೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
