ಬೆಂಗಳೂರು:ನಾವು‌ ದುಡಿದಿದ್ದನ್ನು‌ ನಮ್ಮ ನಿತ್ಯ‌ಜೀವನಕ್ಕೆ ಎಷ್ಟು ಬೇಕೋ ಅಷ್ಟು ಇಟ್ಟುಕೊಂಡು, ಮಿಕ್ಕ ಹಣದಿಂದ ನೊಂದ ಮನಸ್ಸುಗಳಿಗೆ ಸಹಾಯ ಮಾಡಬೇಕೆಂಬ ಗುಣವಿರಬೇಕು ಎನ್ನುತ್ತಾರೆ ನಟ ಕಿರಣ್ ರಾಜ್. ತಮ್ಮದೇ ಆದ ಕಿರಣ್ ರಾಜ್ ಫೌಂಡೇಶನ್ ಮೂಲಕ ಕರೊನಾ ಸಂಕಷ್ಟ ಸಮಯದಲ್ಲಿ ಸಾಕಷ್ಟು ಜನರಿಗೆ ಆಹಾರದ ಕಿಟ್‌ಗಳನ್ನು ವಿತರಿಸಿದ್ದಾರೆ. ಹೊರ ರಾಜ್ಯ ಹಾಗೂ ಊರುಗಳಿಂದ ಬಂದು ವಸತಿಯಿಲ್ಲದೆ ಫುಟ್ ಪಾತ್ ಆಶ್ರಯ ಪಡೆದಿರುವ ಹಲವಾರು ಮಂದಿಗೆ ಬೆಡ್ ಶೀಟ್‌ ಮುಂತಾದವುಗಳನ್ನು ಹಂಚಿದ್ದಾರೆ. ಈ ಮೂಲಕ ಮಂಗಳಮುಖಿಯರಿಗೆ ಹತ್ತಿರವಾಗಿದ್ದಾರೆ ನಟ.
ಕಳದೆರಡು ವರ್ಷಗಳಿಂದ ಕರೊನಾ ಕೊಟ್ಟ ಕಾಟ ಅಷ್ಟಿಷ್ಟಲ್ಲ. ಎರಡು ವರ್ಷಗಳಿಂದ ಎಷ್ಟೋ ‌ಜನರ ಜೀವನ‌ ಏರುಪೇರಾಗಿದೆ. ಬಹುತೇಕ ಜನರು ದಿನನಿತ್ಯದ ಜೀವನ ನಡೆಸುವುದು ಕಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಕಷ್ಟದಲ್ಲಿರುವ ಜನರಿಗೆ ಕೈಲಾದಷ್ಟು ಸಹಾಯ ಮಾಡುವುದು ನನ್ನ ಉದ್ದೇಶ ಎನ್ನುತ್ತಾರೆ ಕಿರಣ್ ರಾಜ್.
ಎಲ್ಲದಕ್ಕಿಂತ ಹೆಚ್ಚಾಗಿ ಮಂಗಳಮುಖಿಯರು ಈ ಸಂದರ್ಭದಲ್ಲಿ ಹೆಚ್ಚು ತೊಂದರೆ ಅನುಭವಿಸಿದ್ದರು.‌ ಅಂತಹ ಮಂಗಳಮುಖಿಯರಿಗೆ ಕೊರೋನ ಸಮಯದಲ್ಲಿ ಆಹಾರದ ಕಿಟ್ ನೀಡಿದ್ದಾರೆ. ಈಗ ಚಳಿಗಾಲವಾಗಿರುವುದರಿಂದ ಅವರಿಗೆಲ್ಲಾ ಬೆಚ್ಚಗಿನ ಹೊದಿಕೆಗಳನ್ನು ಕೊಡಲಾಗಿದೆ ಹಾಗೂ ಮುಖ್ಯವಾದ ಹಬ್ಬಗಳಲ್ಲಿ ಅವರಿಗೆ ಮದುವೆಮನೆಯ ಅಡುಗೆಯಂತೆ ಬಾಳೆಎಲೆ ಊಟ ಹಾಕಿಸಿ, ತಾವು ಅವರೊಂದಿಗೆ ಊಟ ಮಾಡಿದ್ದೀನಿ.‌ ಮಂಗಳಮುಖಿಯರು ಈಗ ಯಾವುದರಲ್ಲೂ ಕಡಿಮೆ ಇಲ್ಲ. ನಮ್ಮ ಸಮಾಜ ಅವರನ್ನು ನೋಡುವ ರೀತಿಯೆ ಬದಲಾಗಬೇಕು. ಅವರು ನಮ್ಮ ಹಾಗೆ ಎಂದು ನೋಡಬೇಕು ಎನ್ನುತ್ತಾರೆ ‌ಕಿರಣ್ ರಾಜ್.
ದೇವರು ಎಲ್ಲಾ ಕಡೆ ಇರಲಾಗುವುದಿಲ್ಲ ಎಂದು ಕಿರಣ್ ರಾಜ್ ತರಹ ಒಳ್ಳೆಯ ‌ಗುಣ ಇರುವವರನ್ನು ಈ ಭೂಮಿಗೆ ಕಳುಹಿಸಿರುತ್ತಾನೆ. ದೇವರು ಅವರಿಗೆ ಒಳ್ಳೆಯದು ಮಾಡಲಿ ಎಂದು ಮಂಗಳಮುಖಿಯರು ಮನಸ್ಸಾರೆ‌ ಹಾರೈಸಿದ್ದಾರೆ.
ಕಿರಣ್ ರಾಜ್ ಅವರ ಸಹಾಯ ಕರ್ನಾಟಕಕಷ್ಟೇ ಮೀಸಲಾಗಿಲ್ಲ. ದೂರದ ಮುಂಬೈನಲ್ಲೂ‌ ಇವರ‌ ಸತ್ಕಾರ್ಯಗಳು ನಡೆದಿದೆ.‌ ಎಲ್ಲರ ಹಾರೈಕೆಯಿಂದ ನಮ್ಮ ಸೇವೆ ಹೀಗೆ ನಿರಂತರವಾಗಿ ಸಾಗಲಿ ಎಂಬುದೆ ನನ್ನ‌ ಕೋರಿಕೆ ಎನ್ನುತ್ತಾರೆ ಕಿರಣ್ ರಾಜ್.
ಕಿರುತೆರೆಯಷ್ಟೇ ಹಿರಿತೆರೆಯಲ್ಲೂ ಕಿರಣ್ ರಾಜ್ ಬ್ಯುಸಿಯಾಗಿದ್ದಾರೆ. ಬಹು ನಿರೀಕ್ಷಿತ “ಭರ್ಜರಿ ಗಂಡು” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತದಲ್ಲಿದೆ.
ಜೊತೆ ಜೊತೆಯಲಿ… ನಟಿ ‘ಅನು’ ಮನೆಯಲ್ಲಿ ಮದುವೆಯ ಸಂಭ್ರಮ: ಜಾಲತಾಣದಲ್ಲಿ ಫೋಟೋ ಶೇರಿಂಗ್

ಪ್ರೇಮಿಗಳ ದಿನವೇ ವಿಚ್ಛೇದನ ಪ್ರಕಟಿಸಿದ ಬಾಲಿವುಡ್‌ ತಾರೆ: ಬಿಗ್‌ಬಾಸ್‌ ಮನೆಯಲ್ಲಿ ಲವ್‌, ಹೊರಗಡೆ ಬಂದು ಮದುವೆ- ಡಿವೋರ್ಸ್‌

ಪ್ರೇಮಿಗಳ ದಿನವೇ ವಿಚ್ಛೇದನ ಪ್ರಕಟಿಸಿದ ಬಾಲಿವುಡ್‌ ತಾರೆ: ಬಿಗ್‌ಬಾಸ್‌ ಮನೆಯಲ್ಲಿ ಲವ್‌, ಹೊರಗಡೆ ಬಂದು ಮದುವೆ- ಡಿವೋರ್ಸ್‌


ಪ್ರೇಮಿಗಳ ದಿನವೇ ವಿಚ್ಛೇದನ ಪ್ರಕಟಿಸಿದ ಬಾಲಿವುಡ್‌ ತಾರೆ: ಬಿಗ್‌ಬಾಸ್‌ ಮನೆಯಲ್ಲಿ ಲವ್‌, ಹೊರಗಡೆ ಬಂದು ಮದುವೆ- ಡಿವೋರ್ಸ್‌

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × 3 =
Remember me
