ಬೆಂಗಳೂರು:ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿಗೆ) ಚುನಾವಣೆ ನಡೆಸುವಂತೆ ಹೈಕೋರ್ಟ್​ ಇಂದು ನಿರ್ದೇಶಿಸಿದೆ.
198 ವಾರ್ಡ್‍ಗಳಿರುವ ಬಿಬಿಎಂಪಿಯಲ್ಲಿ 243 ವಾರ್ಡ್‍ಗಳನ್ನು ಹೆಚ್ಚಿಸಲು ಮಸೂದೆ ಮಂಡಿಸಲಾಗಿದೆ. ಇದಕ್ಕೆ ಕಾಲಾವಕಾಶ ಬೇಕು. ಅಲ್ಲದೆ ಬೆಂಗಳೂರಿಗೆ ಪ್ರತ್ಯೇಕ ಕಾಯ್ದೆ ರಚನೆ ಮಾಡಬೇಕಾಗಿದೆ ಎಂದು ಸರ್ಕಾರ ನ್ಯಾಯಾಲಯದ ಮುಂದೆ ಕಾಲಾವಕಾಶ ಕೋರಿತ್ತು. ಆದರೆ 198 ವಾರ್ಡ್​ಗಳಿಗೇ ಚುನಾವಣೆ ನಡೆಸುವಂತೆ ಹೈಕೋರ್ಟ್​ ಸ್ಟ್ರಿಕ್ಟ್​ ಆಗಿ ಹೇಳಿದೆ.
ಒಂದು ತಿಂಗಳಿನೊಳಗೆ ಮೀಸಲಾತಿ ಅಧಿಸೂಚನೆ ಹೊರಡಿಸಬೇಕು, ಆರು ವಾರಗಳಲ್ಲಿ ಚುನಾವಣಾ ವೇಳಾಪಟ್ಟಿ ಹೊರಡಿಸಬೇಕು ಎಂದು ಕೋರ್ಟ್​  ಚುನಾವಣಾ ಆಯೋಗಕ್ಕೆ ಹೇಳಿದೆ.
ಸರ್ಕಾರ ಉದ್ದೇಶಪೂರ್ವಕವಾಗಿ ಚುನಾವಣೆ ಮುಂದೂಡುವ ಪ್ರಯತ್ನ ಮಾಡುತ್ತಿದೆ. ನಿಗದಿತ ಅವಧಿಯೊಳಗೆ ಚುನಾವಣೆ ನಡೆಸಬೇಕೆಂದು ಎಂದು ಸಾರ್ವಜನಿಕ ಅರ್ಜಿ ಸಲ್ಲಿಸಲಾಗಿತ್ತು.
ಇದಕ್ಕೆ ಚುನಾವಣಾ ಆಯೋಗವೂ ಸಮ್ಮತಿ ಸೂಚಿಸಿತ್ತು. ಪ್ರಸ್ತುತ ಇರುವ 198 ವಾರ್ಡ್​ಗಳಿಗೆ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದಕ್ಕಾಗಿ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಸಿದ್ಧಪಡಿಸಿಕೊಂಡಿದೆ ಎಂದು ಹೇಳಿತ್ತು.
ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿಗಳು ಚುನಾವಣೆ ನಡೆಸುವಂತೆ ನಿರ್ದೇಶಿಸಿದ್ದಾರೆ. ಆದ್ದರಿಂದ ಬರುವ ಮಾರ್ಚ್​ ತಿಂಗಳಿನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ದಿನದಿಂದ ದಿನಕ್ಕೆ ಕಲ್ಲಾಗಿ ಪರಿವರ್ತನೆಯಾಗುತ್ತಿದೆ ಈ ಬಾಲಕನ ದೇಹ!

ಕಿಟಕಿಯಲ್ಲಿ ವಧು, ಅಂಗಳದಲ್ಲಿ ವರ- ಮಧ್ಯೆ ಹಗ್ಗ! ಇದಕ್ಕೆ ಕಾರಣ ತುಂಬಾ ಇಂಟರೆಸ್ಟಿಂಗ್​

ದಂಡ ಕಟ್ವಿಲ್ವಾ? ಪಾರ್ಕಿಂಗ್​ ಜಾಗದಿಂದ್ಲೇ ನಿಮ್ ಗಾಡಿ ‘ಮಾಯ’ ಆಗ್ಬೋದು ಎಚ್ಚರ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:14 − 2 =
Remember me
