ಬೆಂಗಳೂರು:ಬೆಂಗಳೂರಿನ ಮನೆಯೊಂದರಲ್ಲಿ ಮಧ್ಯರಾತ್ರಿ ಸ್ಫೋಟಗೊಂಡಿದ್ದು, ದಂಪತಿಗೆ ಗಾಯವಾಗಿದೆ. ವಿಜಯನಗರದ ಹಂಪಿನಗರದ ಮನೆಯೊಂದರಲ್ಲಿ ಈ ಸ್ಫೋಟ ಸಂಭವಿಸಿದೆ.
2 ಮಹಡಿ ಕಟ್ಟಡದ ಮೊದಲ ಮಹಡಿ ಮನೆಯಲ್ಲಿ ಸ್ಫೋಟ ಸಂಭವಿಸಿದ್ದು, ಇದಕ್ಕೆ ಕಾರಣ ಇದುವರೆಗೆ ತಿಳಿದಿಲ್ಲ. ಘಟನೆಯಲ್ಲಿ ಸೂರ್ಯನಾರಾಯಣ ಶೆಟ್ಟಿ, ಪತ್ನಿ ಪುಷ್ಪಾವತಮ್ಮಗೆ ಗಾಯಗಳಾಗಿದ್ದು ಇವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಸ್ಫೋಟದ ರಭಸಕ್ಕೆ ಮನೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಹಾಗೂ ಅಕ್ಕಪಕ್ಕದ ಮನೆ ಗಾಜುಗಳು ಪುಡಿ, ಪುಡಿಯಾಗಿದ್ದು ಗೋಡೆಗಳು ಬಿರುಕು ಬಿಟ್ಟಿವೆ. ಈ ಸ್ಫೋಟದ ಶಬ್ದಕ್ಕೆ ಅಕ್ಕಪಕ್ಕದ ಜನ ಬೆಚ್ಚಿಬಿದ್ದಿದ್ದಾರೆ.
ಅಕ್ಕಪಕ್ಕದ 5ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಮನೆಯ ಮುಂದೆ ಹಾದುಹೋಗಿದ್ದ ವಿದ್ಯುತ್ ತಂತಿ ಕಟ್ ಆಗಿದೆ. ಸುಮಾರು 1 ಕಿ.ಮೀ.ವರೆಗೂ ಸ್ಫೋಟದ ಸದ್ದು ಕೇಳಿಸಿದೆ. ಸದ್ಯ ಸ್ಥಳಕ್ಕೆ ವಿಜಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ನೀರಜ್​ ತರಬೇತಿಗೆ ಏಳು ಕೋಟಿ ರೂ. ವೆಚ್ಚ: ಪ್ರಶ್ನೆ ಕೇಳುವವರಿಗೆ ಕೇಂದ್ರ ಬಿಚ್ಚಿಟ್ಟ ಲೆಕ್ಕ ಇಲ್ಲಿದೆ ನೋಡಿ…

ಅಕ್ಷರಶಃ ನಲುಗಿದ ಅಫ್ಘಾನ: ಅತ್ಯಾಚಾರಿಗಳ ಕಪಿಮುಷ್ಠಿಯಲ್ಲಿ ಹೆಣ್ಣುಮಕ್ಕಳು! ಹೊರಹೋಗದಂತೆ ನಾಲ್ಕೂ ಕಡೆ ದಿಗ್ಬಂಧನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
